Murder case: ಖಾಸಗಿ ವಿಡಿಯೊ ತೋರಿಸಿ ಯುವತಿ ಜತೆ ಮದುವೆ, ಅತ್ತೆಯ ಮೇಲೂ ಕಣ್ಣು; ಉದ್ಯಮಿಯ ಕರಾಳ ಮುಖ ಬಯಲು
ಅಪ್ರಾಪ್ತ ವಯಸ್ಸಿನಲ್ಲಿದ್ದಾಗಲೇ ಯುವತಿಯ ಜತೆಗೆ ಸಲುಗೆ ಬೆಳೆಸಿದ್ದ ಉದ್ಯಮಿ, ಖಾಸಗಿ ವಿಡಿಯೊ ಮಾಡಿಟ್ಟುಕೊಂಡು ಯುವತಿಯ ಬ್ಲ್ಯಾಕ್ಮೇಲ್ ಮಾಡಿ ಮದುವೆಯಾಗಿದ್ದ. ಅಲ್ಲದೇ ಅತ್ತೆಯ ಮೇಲು ಕಣ್ಣು ಹಾಕಿದ್ದರಿಂದ ಪತ್ನಿ ಮತ್ತು ಅತ್ತೆ ಸೇರಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.


ಬೆಂಗಳೂರು: ಸೋಲದೇವನಹಳ್ಳಿ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಕೊಲೆ ಪ್ರಕರಣದಲ್ಲಿ (Murder case) ಪತ್ನಿ ಹಾಗೂ ಅತ್ತೆ ಈಗಾಗಲೇ ಬಂಧನವಾಗಿದ್ದಾರೆ. ಇದೀಗ ವಿಚಾರಣೆ ನಡೆಯುವಾಗ ಉದ್ಯಮಿಯ ಕರಾಳ ಮುಖ ರಿವೀಲ್ ಆಗಿದ್ದು, ಹತ್ಯೆಗೆ ಕಾರಣವೇನು ಎಂಬ ವಿಷಯವನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಹಲವು ಮಹಿಳೆಯರ ಜತೆ ಅನೈತಿಕ ಸಂಬಂಧ ಹೊಂದಿದ್ದ ಉದ್ಯಮಿ, ಪತ್ನಿಯ ತಾಯಿಯ ಮೇಲೂ ಕಣ್ಣು ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಸಹಿಸಲಾರದೆ ಕೊಲೆ ಮಾಡಿರುವುದಾಗಿ ಕೊಲೆಯಾದ ಲೋಕನಾಥ್ನ ಪತ್ನಿ ಹಾಗೂ ಅತ್ತೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.
ಅಪ್ರಾಪ್ತ ವಯಸ್ಸಿನಲ್ಲಿದ್ದಾಗಲೇ ಯುವತಿಯ ಜತೆಗೆ ಸಲುಗೆ ಬೆಳೆಸಿದ್ದ ಉದ್ಯಮಿ, ಖಾಸಗಿ ವಿಡಿಯೊ ಮಾಡಿಟ್ಟುಕೊಂಡು ಯುವತಿಯ ಬ್ಲ್ಯಾಕ್ಮೇಲ್ ಮಾಡಿ ಮದುವೆಯಾಗಿದ್ದ. ಮದುವೆಯಾಗದಿದ್ದರೆ ವಿಡಿಯೊ ಹರಿಬಿಡುವುದಾಗಿ ಧಮ್ಕಿ ಹಾಕಿದ್ದ. ಬಳಿಕ ಡಿಸೆಂಬರ್ನಲ್ಲಿ ಯುವತಿ ಜತೆ ಉದ್ಯಮಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ.
ಮದುವೆ ಬಳಿಕ ಉದ್ಯಮಿಯ ವಂಚನೆಯ ಜಾಲ ಹೆಂಡತಿಗೆ ಗೊತ್ತಾಗಿದೆ. ಹಲವು ಮಹಿಳೆಯರ ಜತೆ ಉದ್ಯಮಿ ಸಂಬಂಧ ಹೊಂದಿದ್ದನಂತೆ. ಅಲ್ಲದೇ ಪತ್ನಿತ ತಾಯಿಯ ಮೇಲೂ ಆತ ಕಣ್ಣು ಹಾಕಿದ್ದ. ಹೆಂಡತಿಯ ಬಳಿಯೇ ಆಕೆಯ ತಾಯಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನಂತೆ. ಹೀಗಾಗಿ ಸಹಿಸಲಾರದೆ ಕೊಲೆ ಮಾಡಿರುವುದಾಗಿ ಕೊಲೆಯಾದ ಲೋಕನಾಥ್ನ ಪತ್ನಿ ಹಾಗೂ ಅತ್ತೆ ತಿಳಿಸಿದ್ದಾರೆ.
ಅಳಿಯನನ್ನು ಮುಗಿಸುವ ಪ್ಲ್ಯಾನ್ ಮಾಡಿದ್ದ ಅತ್ತೆ, ಹೌ ಟು ಕಿಲ್ ಎನ್ನುವ ಪುಸ್ತಕ ಖರೀದಿಸಿ, ಓದಿದ್ದಾಳೆ. ಬಳಿಕ ಪಾರ್ಟಿ ನೆಪದಲ್ಲಿ ಮಗಳ ಮೂಲಕ ಅಳಿಯನನ್ನು ಕರೆಸಿಕೊಂಡು, ಊಟದಲ್ಲಿ ನಿದ್ರೆ ಮಾತ್ರೆ ಹಾಕಿ, ಅಳಿಯನ ಕತ್ತು ಸೀಳಿ ಕೊಲೆ ಮಾಡಿದ್ದಾಳೆ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ | Building Collapse: ಧಾರವಾಡದಲ್ಲಿ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವು
ನಕಲಿ ಎಸ್ಎಸ್ಎಲ್ಸಿ, ಪಿಯುಸಿ ಅಂಕಪಟ್ಟಿ ನೀಡುತ್ತಿದ್ದ ಮೂವರ ಬಂಧನ
ಬೆಂಗಳೂರು: ಪಿಯುಸಿ (PUC) ಮತ್ತು ಎಸ್ಎಸ್ಎಲ್ಸಿ (SSLC) ತತ್ಸಮಾನ ಎಂದು ನಕಲಿ ಅಂಕಪಟ್ಟಿ (marks sheet) ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು (Fraud Case) ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.
ಸ್ಟಡಿ ಸೆಂಟರ್ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.
ಇವರಿಂದ ನಕಲಿ ಅಂಕಪಟ್ಟಿ ಪಡೆದವರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ. ಆರೋಪಿಗಳು 5ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಸರ್ಕಾರಿ ಇಲಾಖೆಗಳು ಕೆಲಸ ನೀಡುವ ಮೊದಲು ಪರಿಶೀಲನೆ ಮಾಡಿದಾಗ ಸಹ ಇದು ಅಸಲಿ ಅಂಕಪಟ್ಟಿ ಎಂದು ಆರೋಪಿಗಳು ಮಾಹಿತಿ ನೀಡಿದ್ದರು. ಈ ಮಾದರಿಯ ಅಂಕಪಟ್ಟಿ ಎಲ್ಲಿಯಾದರೂ ಸಲ್ಲಿಕೆಯಾಗಿದ್ದಲ್ಲಿ ಸಿಸಿಬಿಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Identify Fake Garlic: ಮಾರುಕಟ್ಟೆಗೆ ಬಂದಿದೆ ನಕಲಿ ಬೆಳ್ಳುಳ್ಳಿ; ಖರೀದಿಸುವ ಮುನ್ನ ಹೀಗೆ ಪರಿಶೀಲಿಸಿ