ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಾಲಾ ಶಿಕ್ಷಕಿ ಮೇಲೆ ವಿದ್ಯಾರ್ಥಿಯ ಪೋಷಕರಿಂದ ಹಲ್ಲೆ ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ

ಕೋಲಾರ ಜಿಲ್ಲೆ, ಬಂಗಾರಪೇಟೆಯ ಶಾಲಾ ಶಿಕ್ಷಕಿ ಮಂಜುಳರವರ ಮೇಲೆ ಶಾಲೆಯ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿ ಗೌಡ ರವರು, ಸಲಹೆಗಾರರಾದ ಸುಜಾತ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರವರು ಸಂಘದ ಪದಾಧಿಕಾರಿ ಗಳು, ಸದಸ್ಯರುಗಳು ಭೇಟಿ ನೀಡಿ, ಹಲ್ಲೆಯಾದ ಮಹಿಳೆಗೆ ಧೈರ್ಯ ತುಂಬಿ, ಸ್ವಾಂತನ ಹೇಳಿದರು

ಶಾಲಾ ಶಿಕ್ಷಕಿ ಮೇಲೆ ಹಲ್ಲೆ: ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ

-

Ashok Nayak Ashok Nayak Sep 15, 2025 11:27 AM

ಬೆಂಗಳೂರು: ಕೋಲಾರ ಜಿಲ್ಲೆ, ಬಂಗಾರಪೇಟೆಯ ಶಾಲಾ ಶಿಕ್ಷಕಿ ಮಂಜುಳರವರ ಮೇಲೆ ಶಾಲೆಯ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡರವರು, ಸಲಹೆಗಾರರಾದ ಸುಜಾತ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರವರು ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಭೇಟಿ ನೀಡಿ, ಹಲ್ಲೆಯಾದ ಮಹಿಳೆಗೆ ಧೈರ್ಯ ತುಂಬಿ, ಸ್ವಾಂತನ ಹೇಳಿದರು.

ಇದೇ ಸಂದರ್ಭದಲ್ಲಿ ರೋಶನಿಗೌಡರವರು ಮಾತನಾಡಿ ಶಿಕ್ಷಕರು ಎಂದರೆ ದೇವರ ಸಮಾನ ಎಂದು ಭಾವಿಸುವ ನಾವೆಲ್ಲ, ಮಹಿಳೆಯರು ಮೇಲೆ ಹಲ್ಲೆ, ದೌರ್ಜನ್ಯ ನೋಡಿದರೆ ಇಡಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.

ಇದನ್ನೂ ಓದಿ: Vishweshwar Bhat Column: ಹೆಡ್‌ ವಿಂಡ್‌ ಮತ್ತು ಟೇಲ್‌ ವಿಂಡ್

ವಿದ್ಯಾರ್ಥಿ ಪಾಠ ಹೇಳಿಕೊಡುವ ಅಮಾಯಕಿ ಶಿಕ್ಷಕಿ ಮಂಜುಳರವರು ಅವಾಚ್ಯ ಶಬ್ದ ಬಳಕೆ ಮಾಡಿ, ಹಲ್ಲೆ ಮಾಡಿರುವುದನ್ನ ನಮ್ಮ ಸಂಘ ಖಂಡನೆ ವ್ಯಕ್ತಪಡಿಸುತ್ತದೆ.

ಪೊಲೀಸ್ ಇಲಾಖೆ ಕೊಡಲೆ ಅರೋಪಿಗಳನ್ನು ಬಂಧಿಸಬೇಕು ಇಲ್ಲದೇ ಹೋದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು.

ಸರ್ಕಾರಿ ನೌಕರರು ಆಗಿರಬಹುದು ಅಥವಾ ಬೇರೆ ಇಲಾಖೆ ಮಹಿಳಾ ನೌಕರರು ಆಗಿರಬಹುದು ಮಹಿಳೆಯರು ಮೇಲಿನ ಹಲ್ಲೆಯನ್ನು ಖಂಡಿಸುತ್ತೇವೆ. ಮುಖ್ಯಮಂತ್ರಿಗಳು ಕೊಡಲಿ ಮಧ್ಯ ಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು ಮಹಿಳಾ ನೌಕರರಿಗೆ ರಕ್ಷಣೆ ನೀಡಬೇಕು ಎಂದು ಮನವಿ ಸಲ್ಲಿಸಿದರು.