ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಆಗಬಾರದು: ಅಧಿಕಾರಿಗಳಿಗೆ ಸಿಎಂ ತಾಕೀತು

CM Siddaramaiah: ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ.

ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಆಗಬಾರದು: ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ. -

Prabhakara R
Prabhakara R Dec 29, 2025 5:57 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧಿನ ಕುರಿತು ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿರುವ ಸಿಎಂ ಅವರು, ರೈಲ್ವೆ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಇನ್ನು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ 25 ಕೋಟಿ ರೂ.ಗಳಂತೆ ಒಟ್ಟು 3510 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ 2040 ಕೋಟಿ ರೂ. ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, 920 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಇನ್ನೂ 1205 ಕೋಟಿ ರೂ. ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ. ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ 1890 ಕೋಟಿ ರೂ. ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26ನೇ ಸಾಲಿನಲ್ಲಿ 8666.50 ಕೋಟಿ ರೂ. ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ; ಬೇಡಿಕೆ ಈಡೇರಿಸುತ್ತೇವೆ ಎಂದ ಡಿ.ಕೆ.ಶಿವಕುಮಾರ್‌

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು 8666.50 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10 ರೊಳಗಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ರೈಲ್ವೆ ಮತ್ತು ವಿಮಾನ ನಿಲ್ದಾಣ ಕಾಮಗಾರಿ

ರೈಲ್ವೆ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇರುತ್ತದೆ. ಇದರ ಪೈಕಿ ಶೇಕಡಾ 84% ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ನೂ ಅಂದಾಜು 2,685 ಎಕರೆಗಳಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದೆ.

ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಮಾಣ ಕಾಮಗಾರಿಗಳಿಗೆ 2581.67 ಕೋಟಿ ರೂ. ಭೂಸ್ವಾಧೀನ ಪ್ರಕ್ರಿಯೆಗೆ 2950.22 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು.

ಮೆಕ್ಕೆಜೋಳ ಮತ್ತು ತೊಗರಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ ಮಾಡಿದ್ದು, ಇನ್ನೂ 76430 ಮೆ.ಟನ್‌ ಖರೀದಿಸಲು ಬಾಕಿಯಿದೆ. ಒಟ್ಟು 93,782 ಮೆ.ಟನ್‌ ಮೆಕ್ಕೆಜೋಳ ಖರೀದಿಗೆ ಇಂಡೆಂಟ್‌ ಪಡೆಯಲಾಗಿದ್ದು, ನಿಗದಿತ ಪ್ರಮಾಣದ ಮೆಕ್ಕೆಜೋಳ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಜ.5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ನರೇಗಾ ಉಳಿಸಿ ಅಭಿಯಾನ: ಸಿಎಂ ಸಿದ್ದರಾಮಯ್ಯ

ಎಥನಾಲ್ ಖರೀದಿ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಮಾಡಿದ್ದ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆಯನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಇಂಡೆಂಟ್‌ ನಿಗದಿಪಡಿಸಿರುವ ಪ್ರಮಾಣದಷ್ಟು ಮೆಕ್ಕೆಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು.