ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್‌ವರ್ಕ್ ಸ್ಥಾಪನೆಗೆ ನೆರವು ಕೋರಿ ಪ್ರಧಾನಿ ಮೋದಿಗೆ ಸಿಎಂ ಪತ್ರ

ಪ್ರಸ್ತಾವಿತ Q-MINt ಕೇವಲ ಕರ್ನಾಟಕ ರಾಜ್ಯಕ್ಕಷ್ಟೇ ಅಲ್ಲದೆ, ಇಡೀ ದೇಶದ ಕ್ವಾಂಟಮ್ ಸಂಶೋಧನೆ ಮತ್ತು ಉದ್ಯಮದ ಅಗತ್ಯಗಳನ್ನು ಪೂರೈಸುವ ರಾಷ್ಟ್ರೀಯ ಸಂಪನ್ಮೂಲವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ.10: ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ 'ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್‌ವರ್ಕ್' (Q-MINt) ಸ್ಥಾಪಿಸಲು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಅಡಿಯಲ್ಲಿ 150 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಅವರ ನೇತೃತ್ವದಲ್ಲಿ ಈ ಪ್ರಸ್ತಾವನೆಯನ್ನು ರೂಪಿಸಲಾಗಿದ್ದು, ರಾಜ್ಯದ ಮಹತ್ವಾಕಾಂಕ್ಷೆಯ 'ಕ್ವಾಂಟಮ್ ಸಿಟಿ' ಯೋಜನೆಗೆ ಇದು ಬಹಳ ಅಗತ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.

"ಕ್ವಾಂಟಮ್ ತಂತ್ರಜ್ಞಾನಕ್ಕೆ ಮೆಟೀರಿಯಲ್ಸ್‌ಗಳೇ (Materials) ಮೂಲ ಆಧಾರ. ಸಂಶೋಧನೆ ಮತ್ತು ಕೈಗಾರಿಕಾ ಸಾಧ್ಯತೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಯೋಜನೆ ಒಂದು 'ಗೇಮ್ ಚೇಂಜರ್' ಆಗಲಿದೆ. ಜಾಗತಿಕ ಕ್ವಾಂಟಮ್ ಕ್ರಾಂತಿಯಲ್ಲಿ ಭಾರತವನ್ನು ಹಾಗೂ ಬೆಂಗಳೂರು ನಗರವನ್ನು ಮುಂಚೂಣಿಯಲ್ಲಿ ಇರಿಸಲು ಇದು ಬಹಳ ಅಗತ್ಯವಾಗಿದೆ" ಎಂದು ಎನ್‌.ಎಸ್‌.ಭೋಸರಾಜು ಅವರು ತಿಳಿಸಿದ್ದಾರೆ.

ತಮ್ಮ ಪತ್ರದಲ್ಲಿ ಈ ಯೋಜನೆಯ ಮಹತ್ವವನ್ನು ವಿವರಿಸಿರುವ ಮುಖ್ಯಮಂತ್ರಿಗಳು, "ವಸ್ತುಗಳ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಒಂದೇ ಕಡೆ ನಡೆಯುವಂತಹ ಸ್ವಾವಲಂಬಿ ಮತ್ತು ಸುಸ್ಥಿರ ಆವಿಷ್ಕಾರದ ಪರಿಸರವನ್ನು ನಿರ್ಮಿಸುವುದು ನಮ್ಮ ಗುರಿ. ಪ್ರಸ್ತಾವಿತ Q-MINt ಕೇವಲ ರಾಜ್ಯಕ್ಕಷ್ಟೇ ಅಲ್ಲದೆ, ಇಡೀ ದೇಶದ ಕ್ವಾಂಟಮ್ ಸಂಶೋಧನೆ ಮತ್ತು ಉದ್ಯಮದ ಅಗತ್ಯಗಳನ್ನು ಪೂರೈಸುವ ರಾಷ್ಟ್ರೀಯ ಸಂಪನ್ಮೂಲವಾಗಿ ಕಾರ್ಯನಿರ್ವಹಿಸಲಿದೆ," ಎಂದು ಪ್ರತಿಪಾದಿಸಿದ್ದಾರೆ.

ಅನಗತ್ಯ ಹೇಳಿಕೆ ಬೇಡ: ಪುತ್ರನಿಗೆ ಸಿಎಂ ಎಚ್ಚರಿಕೆ; ಡಿಕೆ ಶಿವಕುಮಾರ್‌, ಜಮೀರ್ ಹೇಳಿದ್ದೇನು?

ಈ ಯೋಜನೆಯು ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಹಾಗೂ ಅಂತರರಾಷ್ಟ್ರೀಯ ಸಹಯೋಗಕ್ಕೆ ಒತ್ತು ನೀಡಲಿದ್ದು, ಈ ನಿಟ್ಟಿನಲ್ಲಿ ಕೇಂದ್ರದೊಂದಿಗೆ ನಿಕಟವಾಗಿ ಕೆಲಸ ಮಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಿಎಂ ಭೇಟಿಯಾದ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

SIdaramaiah-DK Shivkumar

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಇಂದು ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೌಜನ್ಯಯುತವಾಗಿ ಭೇಟಿಯಾದರು. ಈ ವೇಳೆ ನೂತನ ಪದಾಧಿಕಾರಿಗಳಿಗೆ ಸಿಎಂ ಅಭಿನಂದಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌, ಶಾಸಕರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರಿಸ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಅಶೋಕ್ ಪಟ್ಟಣ್, ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಸೇರಿ ಹಲವರು ಉಪಸ್ಥಿತರಿದ್ದರು.