ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಿಎಂ ಸಿದ್ದರಾಮಯ್ಯ ಸಾವು ಬಯಸಿ ಫೇಸ್‌ಬುಕ್‌ ಕಾಮೆಂಟ್; ಪ್ರಕರಣ ದಾಖಲು

CM Siddaramaiah: ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿಗೆ ಸಿಎಂ ಸಿದ್ದರಾಮಯ್ಯ ಬೇಗ ಸಾಯಲಿ ಎಂದು ವ್ಯಕ್ತಿಯೊಬ್ಬರು ಕಾಮೆಂಡ್‌ ಹಾಕಿದ್ದಾರೆ. ಸಿಎಂ ಸಾವನ್ನು ಬಯಸಲಾಗಿದೆ. ಇಂತಹ ವಿಕೃತ ಮನಸ್ಸಿನ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರಿಂದ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಸಾವು ಬಯಸಿ ಫೇಸ್‌ಬುಕ್‌ ಕಾಮೆಂಟ್; ಪ್ರಕರಣ ದಾಖಲು

Profile Prabhakara R Jul 8, 2025 4:38 PM

ಬೆಂಗಳೂರು: ಫೇಸ್‌ಬುಕ್‌ನ ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಸಾವು ಬಯಸಿದ್ದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಕಾಮೆಂಟ್ ಮಾಡಿದ್ದ ಕಿಡಿಗೇಡಿಗಳು ಸಿದ್ದರಾಮಯ್ಯ ಬೇಗ ಸಾಯಪ್ಪಾ ಎಂದು ಬರೆದಿದ್ದರು. ಹೀಗಾಗಿ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಕಾಂಗ್ರೆಸ್‌ ಬೆಂಗಳೂರು ಪಶ್ಚಿಮ ಜಿಲ್ಲಾ ಉಪಾಧ್ಯಕ್ಷ ಹಾಗೂ ಮತ್ತಿತರರು ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿಗೆ ಸಿಎಂ ಸಿದ್ದರಾಮಯ್ಯ ಬೇಗ ಸಾಯಲಿ ಎಂದು ಅವರ ಸಾವನ್ನು ಬಯಸಲಾಗಿದೆ. ಇಂತಹ ವಿಕೃತ ಮನಸ್ಸಿನ ವ್ಯಕ್ತಿಗಳು ಮಾಡು ಅಪಪ್ರಚಾರದ ಸುಳ್ಳು ವದಂತಿ ಹಾಗೂ ದಿಕ್ಕು ತಪ್ಪಿಸುವ ಹೇಳಿಕೆಗಳಿಂದ ರಾಜ್ಯದ ಜನರಿಗೆ ಹಾಗೂ ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೆ ತೀವ್ರ ಸ್ವರೂಪದ ನೋವು ಉಂಟಾಗಿರುತ್ತದೆ. ಇದರಿಂದ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬಿರುವುದು ಹಾಗೂ ಶಾಂತಿ ಕದಡುವ ಇಂಥ ಕಿಡಿಗೇಡಿಗಳ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ದುರಹಂಕಾರಿ ಅಂದ್ರೆ ಕೇರ್‌ ಮಾಡಲ್ಲ, ನಾನು ಸ್ವಾಭಿಮಾನಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಎಲ್ಲರೂ ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ ಅಷ್ಟೇ ಎಂದು ಬೆಂಗಳೂರಿನಲ್ಲಿ (Bengaluru) ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿಕೆ ನೀಡಿದರು. ನಿಮ್ಮ ಮಕ್ಕಳನ್ನು ಅವಿದ್ಯಾವಂತರಾಗಲು ಬಿಡಬೇಡಿ. ವಿದ್ಯೆ ಇದ್ದರೆ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಗುಲಾಮಗಿರಿ ಮನೆ ಮಾಡಿಕೊಳ್ಳುತ್ತದೆ ಎಂದು ವೀರೇಂದ್ರ ಕೇಶವ ತಾರಕಾನಂದ ಪರಿಶ್ರೀ ಪುಣ್ಯಾರಾಧನೆ ಸ್ಮರಣಾರ್ಥ ಭಕ್ತರ ಭಂಡಾರದ ಕುಟಿಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೇಲ್ಜಾತಿಯ ಬಡವ ಬಂದರೆ ಗೌರವ ಕೊಡುತ್ತೇವೆ. ಕೆಲವರ್ಗದ ಶ್ರೀಮಂತ ಬಂದರೆ ಅವರನ್ನು ಕೀಳಾಗಿ ಕಾಣುತ್ತೇವೆ. ಸ್ವಾಭಿಮಾನಿಗಳಾಗಿ ಬದುಕುವುದು ದುರಹಂಕಾರ ಅಲ್ಲ. ನನ್ನ ನೋಡಿದರೆ ದುರಹಂಕಾರಿ ಅಂತಾರೆ. ನಾನು ಸ್ವಾಭಿಮಾನಿ. ದುರಹಂಕಾರಿ ಅಂತ ಯಾರೇ ಕರೆದರೂ ನಾನು ಅದಕ್ಕೆ ಸೊಪ್ಪು ಹಾಕಲ್ಲ. ವಿರೋಧ ಮಾಡುವವರು ಸತ್ಯಕ್ಕೆ ಹತ್ತಿರವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೇಲ್ವರ್ಗದ ಬಡವ ಬಂದರೆ ಏನು ಸ್ವಾಮಿ ಎನ್ನುತ್ತಾರೆ. ದಲಿತನೊಬ್ಬ ವಿದ್ಯಾವಂತ ಶ್ರೀಮಂತ ಬಂದರೆ ಏಕವಚನದಲ್ಲಿ ಮಾತನಾಡಿಸುತ್ತಾರೆ. ನನ್ನನ್ನು ನೋಡಿದಾಗ ಕೆಲವರು ಸಿದ್ದರಾಮಯ್ಯಗೆ ದುರಹಂಕಾರ ಎನ್ನುತ್ತಾರೆ. ಆದರೆ ನಾನು ಸ್ವಾಭಿಮಾನಿಯೇ ಹೊರತು ದುರಹಂಕಾರಿ ಅಲ್ಲ. ನನ್ನನ್ನ ದುರಹಂಕಾರಿ ಅಂದರೆ ಕೇರ್ ಮಾಡುವುದಿಲ್ಲ ಎಂದು ಹೇಳಿದರು.

ಮಠಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಮಠಗಳು ಆಗದಿದ್ದರೆ ಶಿಕ್ಷಣ, ಆರೋಗ್ಯ ಸಂಘಟನೆ ಆಗುವುದಿಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ. ಜಾತಿಯನ್ನ ಗುರುತಿಸಬೇಕು, ಜಾತಿಯನ್ನ ನಾಶ ಮಾಡಬೇಕು ಎಂದು ಕುವೆಂಪು ಹೇಳಿದರು. ಎಲ್ಲರ ಸರ್ವೋದಯ ಆಗಬೇಕು ಎಂದು ಮಹಾತ್ಮ ಗಾಂಧೀಜಿ ಕರೆ ನೀಡಿದ್ದರು. ಕುವೆಂಪು ಅವರು ಸಮಪಾಲು, ಸಮಬಾಳು ಆಗ್ಬೇಕು ಎಂದರು. ದೇಶದ ಸಂಪತ್ತು, ಅಧಿಕಾರ ಎಲ್ಲರಿಗೂ ಹಂಚಿಕೆ ಆಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Kurubara Sangha: 34 ಕೋಟಿ ರೂ. ವೆಚ್ಚದಲ್ಲಿ ಕುರುಬರ ಸಂಘದ ನೂತನ ಕಟ್ಟಡ ನಿರ್ಮಿಸಲು ಕ್ರಮ: ಸಿಎಂ ಸಿದ್ದರಾಮಯ್ಯ