Sudha Murthy: ಇನ್ಫೋಸಿಸ್ ಸುಧಾಮೂರ್ತಿಗೆ ಸೈಬರ್ ಕಳ್ಳರ ಕಾಟ; ದೂರು ದಾಖಲು
Cyber Crime: ಸೆಪ್ಟೆಂಬರ್ 5ರಂದು ಸುಧಾಮೂರ್ತಿ ಅವರಿಗೆ ಕರೆ ಮಾಡಿದ್ದ ಸೈಬರ್ ವಂಚಕ, ತಾನು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಪರಿಚಯಿಸಿಕೊಂಡಿದ್ದಾನೆ. ಆ ಬಳಿಕ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡದೇ ಆಧಾರ್ಗೆ ನೋಂದಾಯಿಸಲಾಗಿದೆ ಎಂದು ಹೇಳಿ, ವೈಯಕ್ತಿಕ ಮಾಹಿತಿ ಪಡೆಯಲು ಯತ್ನಿಸಿ, ಬೆದರಿಕೆ ಹಾಕಿದ್ದಾನೆ.

-

ಬೆಂಗಳೂರು: ಸಂಸದ ಡಾ.ಕೆ. ಸುಧಾಕರ್ ಅವರ ಪತ್ನಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ, 14 ಲಕ್ಷ ವಂಚನೆ ಮಾಡಿದ ಪ್ರಕರಣ ನಡೆದ ಬೆನ್ನಲ್ಲೇ ಇದೀಗ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ (Sudha Murthy) ಅವರಿಗೆ ಸೈಬರ್ ವಂಚಕರು ಕಾಟ ಕೊಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಗೆ ದೂರು ದಾಖಲಾಗಿದೆ.
ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ವಂಚನೆಗೆ ಯತ್ನಿಸಲಾಗಿದೆ. ಸೆಪ್ಟೆಂಬರ್ 5ರಂದು ಸುಧಾಮೂರ್ತಿ ಅವರಿಗೆ ಕರೆ ಮಾಡಿದ್ದ ಸೈಬರ್ ವಂಚಕ, ತಾನು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಪರಿಚಯಿಸಿಕೊಂಡಿದ್ದಾನೆ. ಆ ಬಳಿಕ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡದೇ ಆಧಾರ್ಗೆ ನೋಂದಾಯಿಸಲಾಗಿದೆ ಎಂದು ಹೇಳಿದ್ದಾನೆ.
ಈ ಮೂಲಕ ಸುಧಾಮೂರ್ತಿ ಅವರ ವೈಯಕ್ತಿಕ ಮಾಹಿತಿ ಪಡೆಯಲು ಸೈಬರ್ ವಂಚಕ ಯತ್ನಿಸಿದ್ದಾನೆ. ಅಲ್ಲದೇ ನಿಮ್ಮ ನಂಬರ್ ಮೂಲಕ ಅಶ್ಲೀಲ ವಿಡಿಯೋ ಹರಿಬಿಡಲಾಗುತ್ತದೆ ಹಾಗೂ ನಿಮ್ಮ ಮೊಬೈಲ್ ಸೇವೆ ಸ್ಥಗಿತಗೊಳಿಸಲಾಗುತ್ತದೆ ಎಂದು ವಂಚಕ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸೈಬರ್ ವಂಚಕನ ವಿರುದ್ಧ ದೂರು ನೀಡಲಾಗಿದೆ.
ಈ ಸುದ್ದಿಯನ್ನೂ ಓದಿ | Bengaluru Woman Murder: ಅಕ್ರಮ ಸಂಬಂಧ ಶಂಕೆ; ಮಗಳೆದುರೇ ಪತ್ನಿಗೆ 11 ಬಾರಿ ಚಾಕುವಿನಿಂದ ಇರಿದು ಕೊಂದ 2ನೇ ಗಂಡ!
ಬಿಜೆಪಿ ಸಂಸದ ಸುಧಾಕರ್ ಪತ್ನಿ ಡಿಜಿಟಲ್ ಅರೆಸ್ಟ್; 14 ಲಕ್ಷ ದೋಚಿದ ಸೈಬರ್ ವಂಚಕರು!
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇತ್ತೀಚೆಗೆ ಮಾಜಿ ಸಿಎಂ ಸದಾನಂದಗೌಡ ಖಾತೆಯಿಂದ 3 ಲಕ್ಷ ಹಣವನ್ನು ಸೈಬರ್ ಚೋರರು ವಂಚಿಸಿದ್ದರು. ಇದೀಗ ಬಿಜೆಪಿ ಸಂಸದ ಡಾ.ಕೆ ಸುಧಾಕರ್ (Dr K Sudhakar) ಅವರ ಪತ್ನಿ, ವೈದ್ಯೆ ಡಾ. ಪ್ರೀತಿ ಡಿಜಿಟಲ್ ಅರೆಸ್ಟ್ (Digital Arrest) ಆಗಿದ್ದು, ಸೈಬರ್ ಖದೀಮರು 14 ಲಕ್ಷ ರೂ. ಲಪಟಾಯಿಸಿದ್ದಾರೆ.
ವಂಚನೆ ನಡೆದದ್ದು ಹೇಗೆ?
ಕಳೆದ ಆಗಸ್ಟ್ 26 ರಂದು ಡಾ. ಪ್ರೀತಿ ಸುಧಾಕರ್ ಅವರ ಮೊಬೈಲ್ಗೆ ಸೈಬರ್ ವಂಚಕರು ಕರೆ ಮಾಡಿ, ನಾವು ಮುಂಬೈ ಸೈಬರ್ ವಿಭಾಗದಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ದಾಖಲೆಗಳನ್ನು ಸದ್ಭತ್ ಖಾನ್ ಎಂಬ ಅಪರಿಚಿತ ಬಳಸಿಕೊಂಡು ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿದ್ದಾನೆ. ಅದರಿಂದ ಅಕ್ರಮ ವ್ಯವಹಾರ ನಡೆಸಿ ವಿಯೆಟ್ನಾಂ, ಕಾಂಬೋಡಿಯಾ, ಲಾವೋಸ್ ದೇಶಗಳಿಗೆ ಕಾನೂಬಾಹಿರ ಚಟುವಟಿಕೆ ನಡೆಸಲು ಜನರನ್ನು ಕಳುಹಿಸಿದ್ದಾನೆ. ಈ ಪ್ರಕರಣದಲ್ಲಿ ಸದ್ಬತ್ ಖಾನ್ ಅರೆಸ್ಟ್ ಮಾಡಲಾಗಿದ್ದು, ಆತನ ಹೇಳಿಕೆಯಲ್ಲಿ ನಿಮ್ಮ ಹೆಸರಿನ ದಾಖಲೆಯಿದೆ. ಇದರ ವಿಚಾರಣೆ ಅವಶ್ಯಕತೆಯಿದ್ದು ವೀಡಿಯೊಕಾಲ್ ಅಟೆಂಡ್ ಮಾಡುವಂತೆ ಸೂಚಿಸಿದ್ದಾರೆ.
ಅಷ್ಟೇ ಅಲ್ಲದೇ ನಿಮ್ಮ ದಾಖಲೆ ಹಾಗೂ ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡುವುದಾಗಿ ಬೆದರಿಸಿದ್ದಾರೆ. ನಿಮ್ಮ ಖಾತೆ ಅಕ್ರಮ ಆಗಿದ್ದು ಅದನ್ನು ಪರಿಶೀಲಿಸಲು ಹಣ ಹಾಕಿ ಎಂದು ಬೆದರಿಸಿ ಡಾ.ಪ್ರೀತಿ ಅವರಿಂದ 14 ಲಕ್ಷ ರೂ. ಹಣ ಹಾಕಿಸಿಕೊಂಡಿದ್ದಾರೆ.
ಹಣ ಹಾಕಿದ ಬಳಿಕ ಆರ್ಬಿಐ ನಿಯಮ ಪರೀಶೀಲನೆ ಮಾಡಿ 45 ನಿಮಿಷದಲ್ಲಿ ವಾಪಸ್ ಹಾಕುವುದಾಗಿ ಹೇಳಿದ್ದಾರೆ. ವಂಚಕರು ಹೇಳಿದ ಖಾತೆಗೆ ಪ್ರೀತಿ ಸುಧಾಕರ್ 14 ಲಕ್ಷ ರೂ.ಹಣವನ್ನ ಹಾಕಿದ್ದಾರೆ. ಹಣ ಹಾಕಿದ ನಂತರ ವಂಚನೆಯಾಗಿರುವುದು ಗೊತ್ತಾಗಿ ವೆಸ್ಟ್ ಸೆನ್ ಠಾಣೆಗೆ ದೂರು ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ | SBI Bank Robbery: ಚಡಚಣ ಎಸ್ಬಿಐ ಬ್ಯಾಂಕ್ನಲ್ಲಿ 21 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದರೋಡೆ; ತನಿಖೆಗೆ 8 ತಂಡ ರಚನೆ
ಪ್ರೀತಿ ಸುಧಾಕರ್ ನೀಡಿದ ದೂರಿನ ಮೇರೆಗೆ ಡಿಸಿಪಿ ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಣ ಹಾಕಿದ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ಖಾತೆಯಿಂದ 14 ಲಕ್ಷ ರೂ. ಹಣವನ್ನು ಪ್ರೀತಿ ಅವರಿಗೆ ವಾಪಸ್ ನೀಡಲಾಗಿದ್ದು, ಸೈಬರ್ ಕಳ್ಳರ ಬಂಧನಕ್ಕೆ ಪೊಲೀಸರು ಈಗ ಬಲೆ ಬೀಸಿದ್ದಾರೆ.