ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Daiji Movie: ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನೆರವೇರಿದ ʼದೈಜಿʼ ಚಿತ್ರದ ಮುಹೂರ್ತ

Daiji Movie: ವಿಭಾ ಕಶ್ಯಪ್ ಸಂಸ್ಥೆಯ ಮುಖ್ಯಸ್ಥರಾದ ರವಿಕಶ್ಯಪ್ ನಿರ್ಮಾಣದಲ್ಲಿ, ನಿರ್ದೇಶಕ ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುತ್ತಿದೆ.

ಬೆಂಗಳೂರು: ರಮೇಶ್ ಅರವಿಂದ್ ಅಭಿನಯದ 106ನೇ ಚಿತ್ರ ʼದೈಜಿʼ ಸಿನಿಮಾ ಮುಹೂರ್ತ ಭಾನುವಾರದ ಬೆಳಗಿನ ಸುಮುಹೂರ್ತದಲ್ಲಿ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನಡೆಯಿತು. ವಿಭಾ ಕಶ್ಯಪ್ ಸಂಸ್ಥೆಯ ಮುಖ್ಯಸ್ಥರಾದ ರವಿಕಶ್ಯಪ್ ನಿರ್ಮಾಣದಲ್ಲಿ, ನಿರ್ದೇಶಕ ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ಈ ಚಿತ್ರ (Daiji Movie) ತಯಾರಾಗುತ್ತಿದೆ.
image-3b36b506-af0e-4aba-8d83-a9135c8ad362.jpg
ನಿರ್ದೇಶಕ ಆಕಾಶ್ ಶ್ರೀವತ್ಸ ಅವರು ಈ ಹಿಂದೆ ಶಿವಾಜಿ ಸೂರತ್ಕಲ್ ಭಾಗ-1 ಮತ್ತು ಶಿವಾಜಿ ಸೂರತ್ಕಲ್ ಭಾಗ-2 ಅನ್ನು ಸರಣಿಯಾಗಿ ನಿರ್ದೇಶಿಸಿದ್ದು, ಡಾಕ್ಟರ್ ರಮೇಶ್ ಅರವಿಂದ್ ಅವರು ಮತ್ತು ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಸಂಯೋಜನೆಯಲ್ಲಿ ಮೂಡಿ ಬರುತ್ತಿರುವಂತಹ ಮೂರನೇ ಚಿತ್ರವಾಗಿದೆ.
image-112365b5-f821-474c-8fab-1160b8c76fc9.jpg
ಈ ಚಿತ್ರದ ನಾಯಕ ನಟಿಯಾಗಿ ರಾಧಿಕಾ ನಾರಾಯಣ್ ನಟಿಸುತ್ತಿದ್ದು, ಇವರು ಈ ಮುಂಚೆಯೂ ಶಿವಾಜಿ ಸುರತ್ಕಲ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಛಾಯಾಗ್ರಾಹಣ ಮಾಡುತ್ತಿರುವುದು ಶ್ರೀಶ ಕುದುವಳ್ಳಿ ಅವರು ಈ ಹಿಂದೆ ಇವರು ಯಜಮಾನ, ಯುವ ಖ್ಯಾತಿಯ ಛಾಯಾಗ್ರಾಹಕರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಅತಿ ಶೀಘ್ರದಲ್ಲಿ ವಿದೇಶದಲ್ಲಿ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Sarigama Viji: ಹಿರಿಯ ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಕಣ್ಮನ ಸೆಳೆಯುತ್ತಿದೆ 'ರಾಜು ಜೇಮ್ಸ್ ಬಾಂಡ್' ಚಿತ್ರದ 'ಕಣ್ಮಣಿ' ಹಾಡು
image-98e6d950-9470-4843-90d7-d3b5537b09e1.jpg
ಬೆಂಗಳೂರು: ಕರ್ಮ ಬ್ರೋಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ʼಫಸ್ಟ್ ರ‍್ಯಾಂಕ್ ರಾಜುʼ ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ ʼರಾಜು ಜೇಮ್ಸ್ ಬಾಂಡ್ʼ ಚಿತ್ರಕ್ಕಾಗಿ ಜ್ಯೋತಿ ವ್ಯಾಸರಾಜ್ ಬರೆದಿರುವ ʼಕಣ್ಮಣಿʼ ಎಂಬ ಹಾಡು ಇತ್ತೀಚಿಗೆ A2 ಮ್ಯೂಸಿಕ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಸಂಜಿತ್ ಹೆಗ್ಡೆ ಹಾಡಿದ್ದಾರೆ‌.
ಹಾಡು ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ ಅವರು, ಅಣ್ಣವ್ರು ಅಭಿನಯಿಸಿದ್ದ ಜೇಮ್ಸ್‌ ಬಾಂಡ್ ಚಿತ್ರದ ಕಥೆಯೇ ಬೇರೆ. ʼರಾಜು ಜೇಮ್ಸ್ ಬಾಂಡ್ʼ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದಿಂದ "ಕಣ್ಮಣಿ" ಎಂಬ ರೊಮ್ಯಾಂಟಿಕ್ ಸಾಂಗ್ ಬಿಡುಗಡೆಯಾಗಿದೆ. ಜ್ಯೋತಿ ವ್ಯಾಸರಾಜ್ ಅವರು ಬರೆದಿರುವ ಹಾಡನ್ನು ಸಂಜಿತ್ ಹೆಗ್ಡೆ ಅವರ ಧ್ವನಿಯಲ್ಲಿ ಕೇಳುವುದೆ ಚೆಂದ. ಅನೂಪ್ ಸೀಳಿನ್ ಅವರ ಸಂಗೀತ ಹಾಡಿನ ಶ್ರೀಮಂತಿಕೆಯನ್ನು‌ ಮತ್ತಷ್ಟು ಹೆಚ್ಚಿಸಿದೆ. ಮುರಳಿ ಮಾಸ್ಟರ್ ಈ ಮನಮೋಹಕ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಗುರುನಂದನ್ ಹಾಗೂ ಮೃದುಲ ಲಂಡನ್‌ ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಗೀತೆಯಲ್ಲಿ ಅಭಿನಯಿಸಿದ್ದಾರೆ ಎಂದರು.
ನಾಯಕ‌ ನಟ ಗುರುನಂದನ್ ಮಾತನಾಡಿ, ಇಂದು ನಮ್ಮ ಚಿತ್ರದ "ಕಣ್ಮಣಿ" ಹಾಡು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ನಾನು ಚೆನ್ನಾಗಿ ನೃತ್ಯ ಮಾಡಿದ್ದೀನಿ ಅಂದರೆ ಅದಕ್ಕೆ ಮುರಳಿ ಮಾಸ್ಟರ್ ಕಾರಣ. ಅವರಿಗೆ ನನ್ನ ಕಡೆಯಿಂದ ಧನ್ಯವಾದ. ನಮ್ಮ ಚಿತ್ರ ಡಿಸೆಂಬರ್ ಕೊನೆಯಲ್ಲೇ ಬಿಡುಗಡೆಯಾಗಬೇಕಿತ್ತು.‌ ಆದರೆ ಎರಡು ದೊಡ್ಡ ಚಿತ್ರಗಳು ಅದೇ ಸಮಯಕ್ಕೆ ಬಿಡುಗಡೆಯಾದ್ದುದ್ದರಿಂದ ನಮ್ಮ ಚಿತ್ರದ ಬಿಡುಗಡೆ ಸ್ವಲ್ಪ ಮುಂದೆ ಹೋಯಿತು. ಫೆಬ್ರವರಿ 14 ನಮ್ಮ ಚಿತ್ರ ಬಿಡುಗಡೆಯಾಗಲಿದೆ ನೋಡಿ ಹಾರೈಸಿ ಎಂದರು.
ನಮ್ಮ ಚಿತ್ರ ಫೆಬ್ರವರಿ 14 ರಂದು ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ನೇಪಾಳಿ ಭಾಷೆಗೂ ನಮ್ಮ ಚಿತ್ರದ ರೈಟ್ಸ್ ಮಾರಾಟವಾಗಿದೆ. ಇಂದು ಬಿಡುಗಡೆಯಾಗಿರುವ ಹಾಡು ಲಂಡನ್ ನ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿದೆ. ಫೆಬ್ರವರಿ 14ರಂದು ನಮ್ಮ ಚಿತ್ರ ಕರ್ನಾಟಕದಲ್ಲಿ ಸತ್ಯ ಪಿಕ್ಚರ್ಸ್‌ ಮೂಲಕ ಬಿಡುಗಡೆಯಾಗುತ್ತಿದೆ ಎಂದರು ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರು.
ನಾಯಕಿ ಮೃದುಲ,‌ ನೃತ್ಯ ನಿರ್ದೇಶಕ ಮುರಳಿ ಹಾಗೂ ವಿತರಕ ಸತ್ಯಪ್ರಕಾಶ್ "ಕಣ್ಮಣಿ" ಹಾಡು ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.
ಗುರುನಂದನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.