ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ನಟ ದರ್ಶನ್‌ಗೆ ರಿಲೀಫ್‌; ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮೇ 14ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ನಟ ದರ್ಶನ್​ಗೆ ಜಾಮೀನು ಸಿಕ್ಕರೂ ಸಂಕಷ್ಟ ತಪ್ಪಿಲ್ಲ. ದರ್ಶನ್​ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳಿಗೆ ಸಿಕ್ಕಿರುವ ಜಾಮೀನು ರದ್ದುಗೊಳಿಸುವಂತೆ ಬೆಂಗಳೂರು ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿತ್ತು.

ದರ್ಶನ್‌ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ

Profile Prabhakara R Apr 22, 2025 3:58 PM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ‌ ನಟ ದರ್ಶನ್ (Actor Darshan) ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 14ಕ್ಕೆ ಸುಪ್ರೀಂ ಕೋರ್ಟ್‌ ಮುಂದೂಡಿದೆ. ದರ್ಶನ್ ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಗೆ ಬಂದಿದ್ದರು. ಕರ್ನಾಟಕ ಪೊಲೀಸರು ಈ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ವಿಚಾರಣೆ ಮುಂದೂಡಿದೆ.

ನಟ ದರ್ಶನ್‌ ಅವರಿಗೆ ಇಂದಿನ ಸುಪ್ರೀಂಕೋರ್ಟ್‌ನಲ್ಲಿನ ವಿಚಾರಣೆ ಮಹತ್ವದಾಗಿತ್ತು. ಒಂದು ವೇಳೆ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದ್ದರೆ ನಟ ಜೈಲು ಸೇರಬೇಕಾಗಿತ್ತು. ಆದರೆ, ವಿಚಾರಣೆ ಮುಂದೂಡಿರುವುದರಿಂದ ಮೇ 14 ರವೆಗೆ ಅಂದರೆ 21 ದಿನ ರಿಲೀಫ್‌ ಸಿಕ್ಕಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ 5 ತಿಂಗಳಿಗೂ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಬಳಿಕ ಈ ಪ್ರಕರಣದ ಎಲ್ಲಾ ಆರೋಪಿಗಳಿಗೂ ಬೇಲ್ ಸಿಕ್ಕಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಪೊಲೀಸ್ ಇಲಾಖೆಯು ಗೃಹ ಇಲಾಖೆಯ ಅನುಮತಿ ಪಡೆದು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಇತ್ತೀಚೆಗೆ ಏ.8ರಂದು ನಗರದ 57ನೇ ಸಿಸಿಹೆಚ್ ಕೋರ್ಟ್​ಗೆ ಹಾಜರಾಗಿದ್ದರು. ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಎಲ್ಲರೂ ಕೋರ್ಟ್​ಗೆ ಹಾಜರಾಗಿದ್ದರು. ಆದರೆ ದರ್ಶನ್‌ ಮಾತ್ರ ಗೈರಾಗಿದ್ದರು.

ಈ ಸುದ್ದಿಯನ್ನೂ ಓದಿ | Anti-Sikh Riots: 1984ರ ಸಿಖ್ ವಿರೋಧಿ ಗಲಭೆ ಪ್ರಮುಖ ಸಾಕ್ಷಿಗೆ ಜೀವ ಬೆದರಿಕೆ

ವಿನಾಯಿತಿ ಅರ್ಜಿಯನ್ನು ದರ್ಶನ್ ಪರ ವಕೀಲರು ಸಲ್ಲಿಸಿದ್ದರು. ಕೇಸ್ ಇದ್ದಾಗ ಕೋರ್ಟ್‌ಗೆ ತಪ್ಪದೇ ಹಾಜರಾಗಬೇಕು. ಗೈರು ಆಗಬಾರದು ಎಂದು ದರ್ಶನ್ ಪರ ವಕೀಲರಿಗೆ ಜಡ್ಜ್ ಸೂಚನೆ ನೀಡಿ ದರ್ಶನ್ ವಿನಾಯಿತಿ ಅರ್ಜಿ ಪುರಸ್ಕರಿಸಿದ್ದರು. ಪವಿತ್ರಾ ಗೌಡ, ದರ್ಶನ್ ಮಾಜಿ ಮ್ಯಾನೇಜರ್ ನಾಗರಾಜು ಹಾಜರಾಗಿದ್ದರು. ಇನ್ನು ಕೇಶವಮೂರ್ತಿ, ನಿಖಿಲ್, ಕಾರ್ತಿಕ್ ಮೂವರು ಆರೋಪಿಗಳಿಂದ ಶ್ಯೂರಿಟಿ ಸಲ್ಲಿಕೆಗೆ ಕೋರ್ಟ್‌ ಸೂಚನೆ ನೀಡಿತ್ತು. ನ್ಯಾಯಾಧೀಶರಿಂದ ಶ್ಯೂರಿಟಿ ಸಲ್ಲಿಕೆಗೆ ಸೂಚನೆ ನೀಡಿ, ವಿಚಾರಣೆ ಮುಂದೂಡಿಕೆ ಮಾಡಲಾಗಿತ್ತು.