ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

D K Shivakumar: ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ ಉದ್ಘಾಟಿಸಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಭಾಗಿಯಾಗ ಲಿದ್ದಾರೆ. ಫ್ರೀಡಂ ಪಾರ್ಕ್ ಸಮೀಪದ ಗಾಂಧಿ ನಗರದ ಕುಂಡಲಪುರದಲ್ಲಿ ಜೈನ ಧರ್ಮದ ಸಂದೇಶ ಹಾಗೂ ಧ್ಯೇಯಗಳನ್ನು ಪಸರಿಸಲು ಈ ಬಾರಿ ಕಲ್ಯಾಣ ಮಹೋತ್ಸವವನ್ನು ಮತ್ತಷ್ಟು ಆಕರ್ಷಣೀಯಗೊಳಿಸಲಾಗುತ್ತಿದೆ

ಜೈನ್ ಯುವ ಸಂಘಟನೆಯಿಂದ ಭಗವಾನ್ ಮಹಾವೀರರ 2624 ನೇ ಜಯಂತಿ

Profile Ashok Nayak Apr 7, 2025 8:09 PM

ಬೆಂಗಳೂರು: ಭಗವಾನ್ ಮಹಾವೀರರ 2624 ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಏಪ್ರಿಲ್ 10 ರಂದು ಜೈನ್ ಯುವ ಸಂಘಟನೆಯಿಂದ ಕಲ್ಯಾಣ ಮಹೋತ್ಸವ ಆಯೋಜಿಸಿದ್ದು, ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ಭಗವಾನ್ ಮಹಾವೀರರ ಕಲ್ಯಾಣ ಮಹೋತ್ಸವವನ್ನು ಸ್ಮರ ಣೀಯಗೊಳಿಸಲಾಗುವುದು ಎಂದು ಜೈನ್ ಯುವ ಸಂಘಟನೆಯ ಅಧ್ಯಕ್ಷ ಜೈನ್ ಮಹಾ ವೀರ್ ಮುನೋತ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶ ಉದ್ಘಾಟಿಸ ಲಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಭಾಗಿಯಾಗಲಿದ್ದಾರೆ. ಫ್ರೀಡಂ ಪಾರ್ಕ್ ಸಮೀಪದ ಗಾಂಧಿ ನಗರದ ಕುಂಡಲಪುರದಲ್ಲಿ ಜೈನ ಧರ್ಮದ ಸಂದೇಶ ಹಾಗೂ ಧ್ಯೇಯಗಳನ್ನು ಪಸರಿಸಲು ಈ ಬಾರಿ ಕಲ್ಯಾಣ ಮಹೋತ್ಸವವನ್ನು ಮತ್ತಷ್ಟು ಆಕರ್ಷ ಣೀಯಗೊಳಿಸಲಾಗುತ್ತಿದೆ.

ಇದನ್ನೂ ಓದಿ: DK Shivakumar: ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ: ಡಿ.ಕೆ ಶಿವಕುಮಾರ್

ಮಹಾತ್ಮಾಗಾಂಧೀಜಿ, ಲೋಕಮಾನ್ಯ ತಿಲಕರ ಮೇಲೆಯೂ ಜೈನಧರ್ಮ ವ್ಯಾಪಕ ಪರಿ ಣಾಮ ಬೀರಿದ್ದು, ಅವರ ಬೋಧನೆಗಳು ಆತ್ಮದ ಅಂದವನ್ನು ಮತ್ತು ಐಕ್ಯತೆಯನ್ನು ಪ್ರತಿಬಿಂಬಿಸುತ್ತವೆ. "ಬದುಕು ಮತ್ತು ಬದುಕಲು ಬಿಡು" ಎಂಬ ಘೋಷವಾಕ್ಯ ಪ್ರಪಂಚ ದಾದ್ಯಂತ ಅತಿ ಹೆಚ್ಚು ಜನರು ಆಚರಿಸುವಂತೆ ಮಾಡಿದೆ ಎಂದರು.

ಈ ವರ್ಷದ ನಮ್ಮ ಧಾರ್ಮಿಕ ಮತ್ತು ಮಾನವತಾ ಸೇವೆಗಳಲ್ಲಿ ರಕ್ತದಾನ ಶಿಬಿರದ ಮೂಲಕ 500 ಯೂನಿಟ್ ಗಳಿಗಿಂತ ಅಧಿಕ ರಕ್ತ ಸಂಗ್ರಹ. ಉಚಿತ ಕಣ್ಣು ಪರೀಕ್ಷೆ, ಮಧು ಮೇಹ, ರಕ್ತದೊತ್ತಡ ಮತ್ತಿತರೆ ಪರೀಕ್ಷೆಗಳನ್ನು ನಡೆಸಿ, ಅಶಕ್ತರಿಗೆ ಆಹಾರ ಪೂರೈಸಲಾಗು ವುದು ಎಂದರು.

DKS-PCB

ಮಧ್ಯಾಹ್ನ 1.21ಕ್ಕೆ ಗುರುಭಗವಂತರಿಂದ ಮಹಾಮಂಗಳೀಕವನ್ನು ನೆರವೇರಿಸಲಾಗುವುದು. ರಾಜ್ಯ ಸಭಾ ಸದಸ್ಯರಾದ ಲಹರ್ ಸಿಂಗ್ ಸಿರೋಹಿಯ, ಸಂಸದರಾದ ಪಿ.ಸಿ. ಮೋಹನ್, ಸಮುದಾಯದ ಮುಖಂಡರಾದ ರಾಕೇಶ್ ಪುನ್ನೀಯ, ಮಾಜಿ ಮಹಾಪೌರರಾದ ಗೌತಮ್‌ ಕುಮಾರ್ ಮಕಾನ, ಚಿಕ್ಕಪೇಟೆಯ ಶ್ರೀ ಆದಿನಾಥ ಜೈನ್ ಟೆಂಪಲ್ ಅಧ್ಯಕ್ಷ ಗೌತಮ್ ಸೊಲಂಕಿ, ಜೈನ್ ಕಾನ್ಸರೆನ್ಸ್ ಕರ್ನಾಟಕದ ಅಧ್ಯಕ್ಷ ಪ್ರಕಾಶಂದ್ ಭುರಡ್, ತೇರಾಪಂಥ್ ಸಭಾದ ಅಧ್ಯಕ್ಷ ಪಾರಸ್ ಭಂಸಾಲಿ, ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷ ಪ್ರಸ್ಸನ್ನಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜೈನ್ ಯುವ ಸಂಘಟನೆಯ ಕಾರ್ಯದರ್ಶಿ ಜೈನ್ ನೀರಜ್ ಕಟಾರಿ ಯಾ, ಜೈನ್ ಹಿತೇಶ್ ಕಾಂಕಲಿಯ ಮಾಧ್ಯಮ ಸಂಚಾಲಕ ಚಂದ್ರಶೇಖರಯ್ಯ ಉಪಸ್ಥಿತರಿದ್ದರು.