ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Stampede: RCB ಮ್ಯಾನೇಜ್‌ಮೆಂಟ್‌ ಮಾಡಿದ ಆ ಒಂದು ತಪ್ಪು 11 ಜನರ ಜೀವವನ್ನೇ ಬಲಿ ಪಡೆಯಿತಾ? ತನಿಖೆಯಲ್ಲಿ ಗೊತ್ತಾಗಿದ್ದೇನು?

ಚಿನ್ನಸ್ವಾಮಿ ಸ್ಟೇಡಿಯಂ (Bengaluru Stampede) ಬಳಿ ಕಾಲ್ತುಳಿತದಿಂದ 11 ಆರ್​ಸಿಬಿ (RCB) ಅಭಿಮಾನಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

RCB ಮಾರ್ಕೆಂಟ್‌ ಹೆಡ್‌ ಮಾಡಿದ ಒಂದು ತಪ್ಪು11 ಜನರ ಜೀವ ಬಲಿ ಪಡೆಯಿತಾ?

Profile Vishakha Bhat Jun 6, 2025 11:50 AM

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ (Bengaluru Stampede) ಬಳಿ ಕಾಲ್ತುಳಿತದಿಂದ 11 ಆರ್​ಸಿಬಿ (RCB) ಅಭಿಮಾನಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ತೆರಳುತ್ತಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಆರ್.ಸಿ.ಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಬಂಧನಕ್ಕೆ ಆತ ಹಾಕಿದ ಪೋಸ್ಟ್ ಪ್ರಮುಖ ಕಾರಣ ಎನ್ನಲಾಗ್ತಿದೆ. ನಿಖಿಲ್ ಸೋಸಲೆ ಬೆಂಗಳೂರಿನಲ್ಲಿ ಆರ್​ಸಿಬಿ ವಿಕ್ಟರಿ ಪರೇಡ್ ಎಂದು ಪೋಸ್ಟ್‌ ಹಾಕಿ ಅದನ್ನು ಡಿಲಿಟ್‌ ಮಾಡಿದ್ದರು. ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೊಶೀಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದೇಕೆ ಎಂದು ಪೊಲೀಸರು ನಿಖಿಲ್‌ ಅವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಪೋಸ್ಟ್‌ನಲ್ಲಿ ಏನಿತ್ತು?

ನಿಖಿಲ್‌ ಮಾಡಿದ್ದ ಪೋಸ್ಟ್‌ನಲ್ಲಿ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಬರೆಯಲಾಗಿತ್ತು. ಆದರೆ ಪೊಲೀಸರ ಅನುಮತಿ ಪಡೆಯದೇ ಪೋಸ್ಟ್ ಮಾಡಿದ್ದಾರೆ. ಕಮಿಷನರ್ ದಯಾನಂದ್ ಅನುಮತಿ ನಿರಾಕರಿಸಿದ ನಂತರವೂ ಪೋಸ್ಟ್‌ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಸ್ಟೇಡಿಯಂನಲ್ಲಿ ಸೆಲೆಬ್ರೇಷನ್​ಗೆ ಫ್ರೀ ಟಿಕೆಟ್ ಎಂದು ನಿಖಿಲ್‌ ತನ್ನ ಪೋಸ್ಟ್‌ನಲ್ಲಿ ತಿಳಿಸಿದ್ದು, ಟಿಕೆಟ್‌ ಬೇಕಾಗಿರುವವರು ಗೇಟ್ 9 ಹಾಗೂ 10 ರ ಬಳಿ ತೆರಳಬೇಕು. ಬೆಳಿಗ್ಗೆ 11 ಗಂಟೆಗೆ ಟಿಕೆಟ್‌ ನೀಡಲಾಗುವುದು ಎಂದು ಬರೆದುಕೊಂಡಿದ್ದರು. ಆದರೆ ಮಧ್ಯಾನ್ಹ 1 ಗಂಟೆಯಾದರೂ ಟಿಕೆಟ್‌ ನೀಡಿಲ್ಲ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Bengaluru Stampede: ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್‌ ಸೇರಿ ನಾಲ್ವರ ಬಂಧನ

RCB ಮ್ಯಾನೇಜ್ಮೆಂಟ್ ನ ಮಾರ್ಕೆಟಿಂಗ್ ಹೆಡ್ ಆಗಿರೋ ನಿಖಿಲ್ ಸೋಸಲೆ ಈ ಎಲ್ಲಾ ಪೋಸ್ಟ್​ಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದರು. ಲಕ್ಷಾಂತರ ಜನ ಸೇರಲಿಕ್ಕೆ ಕಾರಣವಾಗಿದ್ದೇ ಸೋಷಿಯಲ್ ಮೀಡಿಯಾದಲ್ಲಿ RCB ಹಾಕಿದ್ದ ಈ ಒಂದು ಪೋಸ್ಟ್ ಎನ್ನಲಾಗುತ್ತಿದೆ. ಸದ್ಯ ಸಿಎಂ ಆದೇಶದ ಮೇರೆಗೆ ನಾಲ್ವರನ್ನು ಬಂಧಿಸಲಾಗಿದೆ.