ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Mobile Ban in Schools: ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ ಚರ್ಚೆಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ (ಸಂಗ್ರಹ ಚಿತ್ರ).

ಬೆಂಗಳೂರು, ‌ಫೆ.23: "ಶಾಲೆಗಳಲ್ಲಿ ಮೊಬೈಲ್ ಬ್ಯಾನ್ (Mobile Ban in Schools) ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಕೇಳಿದಾಗ, "ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ" ಎಂದರು.

ಸಚಿವ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಕೇಳಿದಾಗ, "ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ" ಎಂದರು.

ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂದು ನೀಡಿರುವ ವರದಿ ಬಗ್ಗೆ ಕೇಳಿದಾಗ, "ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ. ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಬಿಡಬ್ಲ್ಯುಎಸ್‌ಎಸ್‌ಬಿಯಿಂದ ಶುದ್ಧಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನ‌ಮಾಡಲು ಅಲ್ಲ" ಎಂದರು.

CM Siddaramaiah: ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್‌ ನಿಷೇಧ: ಸಿಎಂ ಸಿದ್ದರಾಮಯ್ಯ ಪ್ರಸ್ತಾಪ

ವಿಬಿ ಗ್ರಾಮ್ ಜಿ ವಿಚಾರವಾಗಿ ಕೇಳಿದಾಗ, "ವಿಬಿ ಗ್ರಾಮ್ ಜಿ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ ಹಾಗೂ ಯಾವುದೇ ನಿರ್ದೇಶನ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ. ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವ್ ಆದೋಂಲನ ಹೋರಾಟ ಹಮ್ಮಿಕೊಳ್ಳಲಾಗಿದೆ" ಎಂದು ಹೇಳಿದರು‌.