ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳಲು ಪ್ರತಾಪ್ ಸಿಂಹ ಯತ್ನ: ಡಿಕೆಶಿ

DK Shivakumar: ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್.

ಬೆಂಗಳೂರು: ಪ್ರತಾಪ್ ಸಿಂಹರಿಗೆ (Pratap Simha) ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು.

ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರಿಗೆ ಆಹ್ವಾನ ನೀಡಿರುವ ಸರ್ಕಾರ ನಿರ್ಧಾರದ ವಿರುದ್ಧ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, ʼನ್ಯಾಯ ಪೀಠದಿಂದ ನ್ಯಾಯ ಸಿಕ್ಕಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಗೆ ನಾವು ತಲೆಬಾಗುತ್ತೇವೆ. ನಮ್ಮದು ಪ್ರಜಾಪ್ರಭುತ್ವದ ವ್ಯವಸ್ಥೆ. ನಾವಿಂದು ಪ್ರಜಾಪ್ರಭುತ್ವ ದಿನ ಆಚರಿಸುತ್ತಿದ್ದೇವೆ. ನಮ್ಮ ಮತ ನಮ್ಮ ಹಕ್ಕು. ಬ್ಯಾಲೆಟ್ (ಮತ) ಬುಲೆಟ್‌ಗಿಂತ ಶಕ್ತಿಶಾಲಿ. ನಮ್ಮದು ಈ ಮತಗಳಿಂದ ಆರಿಸಲಾಗಿರುವ ಸರ್ಕಾರ. ಜನರ ಬಹುಮತದೊಂದಿಗೆ ಆರಿಸಿ ಬಂದಿರುವ ಸರ್ಕಾರದ ತೀರ್ಮಾನ ಇದುʼ ಎಂದು ತಿಳಿಸಿದರು.

ನಮ್ಮ ಸಂವಿಧಾನ ಸಮಾನತೆಯ ಸಂದೇಶ ಸಾರುತ್ತದೆ. ಎಲ್ಲಾ ಧರ್ಮಗಳಿಗೂ ಧರ್ಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಾವು ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಚಾಮುಂಡೇಶ್ವರಿ ದೇವಿಗೆ ಪ್ರಾರ್ಥಿಸಬೇಡಿ, ಚಾಮುಂಡಿ ಬೆಟ್ಟಕ್ಕೆ ಬರಬೇಡಿ ಎಂದು ಹೇಳಲು ಹೇಗೆ ಸಾಧ್ಯ? ನಾವು ಸಂವಿಧಾನ ಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದು, ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ. ಆಗ ನಿಮ್ಮ ಹಕ್ಕು ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಗರಿಗೆ ಸಂವಿಧಾನದ ಮೇಲೆ ಗೌರವವಿಲ್ಲ. ಸಂವಿಧಾನ ಹಾಗೂ ಎಲ್ಲಾ ವರ್ಗಗಳ ರಕ್ಷಣೆ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.‌

ಈ ಸುದ್ದಿಯನ್ನೂ ಓದಿ | MB Patil: ರಾಜ್ಯದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ರೂ. ಹೂಡಿಕೆ ಖಾತ್ರಿ: ಎಂ.ಬಿ. ಪಾಟೀಲ್‌

ನ್ಯಾಯಾಲಯ ಕೂಡ ಸಂವಿಧಾನದ ಮೇಲೆ ನಡೆಯುತ್ತದೆ. ನಾವುಗಳು ಸಂವಿಧಾನದ ತತ್ವದ ಮೇಲೆ ನಡೆಯುತ್ತೇವೆ. ನಾವು ಪ್ರಮಾಣ ವಚನ ಸ್ವೀಕರಿಸುವುದು ಸಂವಿಧಾನದ ಹೆಸರಿನಲ್ಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.