ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Accident : ಗೂಗಲ್‌ ಮ್ಯಾಪ್‌ ನಂಬಿ ಅನಾಹುತ, ಲಾರಿ ಡಿಕ್ಕಿಯಾಗಿ ಕಾರು ಚಾಲಕ ಸಾವು, ಗೋಡೌನ್‌ಗೆ ಬೆಂಕಿ!

ಆಂಧ್ರ ಪ್ರದೇಶದಿಂದ ಕಬ್ಬಿಣದ ಸರಳುಗಳನ್ನು ಹೊತ್ತು ಬಂದ ಲಾರಿ ಸುಂಕದಕಟ್ಟೆ ಕಡೆಗೆ ಸಾಗುತ್ತಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಲಾರಿ ಓಡಿಸುತ್ತಿದ್ದ. ಕುರುಬರಹಳ್ಳಿ ಮೂಲಕ ಮ್ಯಾಪ್‌ ದಾರಿ ತೋರಿಸಿದೆ. ಆದರೆ ಕುರುಬರಹಳ್ಳಿ ಬಳಿ ಬಹುತೇಕ ಇಳಿಜಾರು ಪ್ರದೇಶ ಇದೆ. ಹಾಗಾಗಿ ತುಂಬಿದ ಲೋಡ್‌ ಇದ್ದ ಲಾರಿ ನಿಯಂತ್ರಣಕ್ಕೆ ಸಿಕ್ಕಿಲ್ಲ.

ಗೂಗಲ್‌ ಮ್ಯಾಪ್‌ ತಂದ ಅನಾಹುತ: ಲಾರಿ ಡಿಕ್ಕಿಯಾಗಿ ಕಾರು ಚಾಲಕ ಸಾವು

ಮೃತ ಅಂಬದಾಸ್ -

ಹರೀಶ್‌ ಕೇರ
ಹರೀಶ್‌ ಕೇರ Mar 27, 2026 10:50 AM

ಬೆಂಗಳೂರು, ಮಾ.27 : ಬೆಂಗಳೂರಿನಲ್ಲಿ (Bengaluru) ಗೂಗಲ್ ಮ್ಯಾಪ್‌ (Google maps) ನಂಬಿ ಓಡಿಸಿದ ಟ್ರಕ್‌ ಚಾಲಕನಿಂದ (Truck driver) ದೊಡ್ಡ ಅನಾಹುತವೇ ನಡೆದಿದೆ. ಗೋಡೌನ್‌ಗೆ ಹಾಗೂ ಕಾರಿಗೆ (car) ಟ್ರಕ್ ಡಿಕ್ಕಿ ಆಗಿ ಕಾರಿನಲ್ಲಿ ಮಲಗಿದ್ದ ವ್ಯಕ್ತಿ (death) ಸಾವನಪ್ಪಿದ್ದಾರೆ. ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ. ಮೊದಲು ಕಾರಿಗೆ, ನಂತರ ರಾಜಕಾಲುವೆಗೆ ಡಿಕ್ಕಿ ಹೊಡೆದ ಬಳಿಕ ಟ್ರಕ್‌ ಟ್ಕ್ರಾಪ್‌ ಗೋಡೌನ್‌ಗೆ ನುಗ್ಗಿದೆ.

ಆಂಧ್ರ ಪ್ರದೇಶದಿಂದ ಕಬ್ಬಿಣದ ಸರಳುಗಳನ್ನು ಹೊತ್ತು ಬಂದ ಲಾರಿ ಸುಂಕದಕಟ್ಟೆ ಕಡೆಗೆ ಸಾಗುತ್ತಿತ್ತು. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಲಾರಿ ಓಡಿಸುತ್ತಿದ್ದ. ಕುರುಬರಹಳ್ಳಿ ಮೂಲಕ ಮ್ಯಾಪ್‌ ದಾರಿ ತೋರಿಸಿದೆ. ಆದರೆ ಕುರುಬರಹಳ್ಳಿ ಬಳಿ ಬಹುತೇಕ ಇಳಿಜಾರು ಪ್ರದೇಶ ಇದೆ. ಹಾಗಾಗಿ ತುಂಬಿದ ಲೋಡ್‌ ಇದ್ದ ಲಾರಿ ನಿಯಂತ್ರಣಕ್ಕೆ ಸಿಕ್ಕಿಲ್ಲ.

ಪರಿಣಾಮ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಏರ್‌ಪೋರ್ಟ್ ಪಿಕ್‌ಅಪ್‌ಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಲಾರಿ ಗುದ್ದಿದ ರಭಸಕ್ಕೆ ಕಾರನ್ನು 50 ರಿಂದ 100 ಮೀ ದೂರಕ್ಕೆ ಎಳೆದೊಯ್ದಿದೆ. ಪರಿಣಾಮ ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಸಾವಿಗೀಡಾದ ಯುವಕನನ್ನು ಅಂಬದಾಸ್ (22) ಎಂದು ಗುರುತಿಸಲಾಗಿದೆ. ಈ ವೇಳೆ ಲಾರಿ ಚಾಲಕ ರಾಜಕಾಲುವೆಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ.

ಲಾರಿ- ಖಾಸಗಿ ಬಸ್ ನಡುವೆ ಭೀಕರ ಅಪಘಾತ; 13 ಜನರು ಸಾವು, ಹಲವರಿಗೆ ಗಾಯ

ಲಾರಿ ಚಾಲಕ ಶರ್ಮಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಾರಿ ಹಾಗೆಯೇ ಮುಂದೆ ಹೋಗಿ ಸ್ಕ್ರಾಪ್ ಗೋಡೌನ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.