Film Shooting: ಇನ್ಮುಂದೆ ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ!

Film Shooting: ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

Film Shooting
Profile Prabhakara R Jan 24, 2025 5:03 PM

ಬೆಂಗಳೂರು: ಟಾಕ್ಸಿಕ್‌ ಹಾಗೂ ‘ಕಾಂತಾರ ಚಾಪ್ಟರ್ 1’ ಸಿನಿಮಾಗಳ ಶೂಟಿಂಗ್‌ಗಾಗಿ ಅರಣ್ಯ ನಾಶ ಮಾಡಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ಮಾಡಲು ಕೆಲ ಕಠಿಣ ನಿಯಮಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಅರಣ್ಯ ಪ್ರದೇಶದಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಸೇರಿ ಇನ್ನಿತರ ಯಾವುದೇ ಚಿತ್ರೀಕರಣಕ್ಕೆ (Film Shooting) ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ.

ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸಚಿವರು ಸೂಚಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru International Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ, ಇದನ್ನು ಪಡೆದ ದೇಶದ ಮೊದಲ ಏರ್‌ಪೋರ್ಟ್‌

ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದತಿಗೆ ಸುಪ್ರೀಂ ನಕಾರ; ಪ್ರತಿವಾದಿಗಳಿಗೆ ನೋಟಿಸ್‌

Darshan and Pavithra Gowda

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿಗಳಾದ ನಟ ದರ್ಶನ್‌ (Actor Darshan), ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದತಿ ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದ್ದು, ಇದೇ ವೇಳೆ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠವು ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು, ರೇಣುಕಾಸ್ವಾಮಿ ಕೊಲೆಯು ಆಘಾತಕಾರಿ ಪ್ರಕರಣವಾಗಿದ್ದು, ಹೈಕೋರ್ಟ್‌ ಇಡೀ ಪ್ರಕರಣವನ್ನು ಮರೆಮಾಚಲು ಪ್ರಯತ್ನಿಸಿದೆ. ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಪ್ರಕರಣದಲ್ಲಿನ ಸಹ ಆರೋಪಿಗಳು ಹೈಕೋರ್ಟ್‌ನ ತೀರ್ಮಾನಗಳನ್ನು ಆಧಾರವಾಗಿಸಿಕೊಂಡು ಜಾಮೀನು ಪಡೆಯಲು ಅನುಮತಿಸಬಾರದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಹೈಕೋರ್ಟ್‌ ಆದೇಶದಲ್ಲಿ ದಾಖಲಿಸಿರುವ ತೀರ್ಮಾನಗಳನ್ನು ಬಳಕೆ ಮಾಡಿಕೊಂಡು ಇತರೆ ಆರೋಪಿಗಳು ಜಾಮೀನು ಪಡೆಯಲು ಅನುಮತಿಸಬಾರದು ಎಂದು ರಾಜ್ಯ ಸರ್ಕಾರ ಕೋರಿದೆ. ರಾಜ್ಯ ಸರ್ಕಾರವು ಜಾಮೀನು ರದ್ದತಿ ಕೋರುತ್ತಿರುವುದರಿಂದ ಆಕ್ಷೇಪಾರ್ಹವಾದ ಆದೇಶಕ್ಕೆ ತಡೆ ನೀಡುವುದು ಸೂಕ್ತವಲ್ಲ. ಪ್ರಾಸಿಕ್ಯೂಷನ್‌ ಹಿತಾಸಕ್ತಿ ರಕ್ಷಿಸುವ ನಿಟ್ಟಿನಲ್ಲಿ ಪ್ರಕರಣದಲ್ಲಿ ಬೇರೆ ಯಾವುದೇ ಆರೋಪಿ ಜಾಮೀನು ಕೋರಿದರೆ ಸಕ್ಷಮ ನ್ಯಾಯಾಲಯವು ಹೈಕೋರ್ಟ್‌ನ ಆಕ್ಷೇಪಾರ್ಹ ಆದೇಶವನ್ನು ಆಧರಿಸಬಾರದು. ಪ್ರಕರಣದಲ್ಲಿನ ಬೇರೆ ಯಾವುದೇ ಆರೋಪಿಯು ಭವಿಷ್ಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದರೆ ಅದನ್ನು ಮೆರಿಟ್‌ ಮೇಲೆ ನಿರ್ಧರಿಸಬೇಕು ಎಂದು ಆದೇಶಿಸಿ, ವಿಚಾರಣೆ ಮುಂದೂಡಿತು.

2024ರ ಡಿಸೆಂಬರ್‌ 13ರಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠವು ಆರೋಪಿಗಳಾಗಿರುವ ಪವಿತ್ರಾ ಗೌಡ (ಎ 1), ದರ್ಶನ್‌ (ಎ 2) ಜಗದೀಶ್‌ ಜಗ್ಗ ಅಲಿಯಾಸ್‌ ಜಗ್ಗ (ಎ 6), ಅನುಕುಮಾರ್‌ ಅಲಿಯಾಸ್‌ ಅನು (ಎ 7), ಆರ್‌ ನಾಗರಾಜು (ಎ 11), ಎಂ ಲಕ್ಷ್ಮಣ್‌ (ಎ 12), ಪ್ರದೋಶ್‌ ಎಸ್‌. ರಾವ್‌ (ಎ 14) ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್‌, ಪವಿತ್ರ ಗೌಡ ಸೇರಿ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ, ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ನಡೆಯಿತು.

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ, ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ಈ ಸುದ್ದಿಯನ್ನೂ ಓದಿ | Cabinet Meeting: ಅರಮನೆ ಮೈದಾನ ಭೂಸ್ವಾಧೀನ ವಿವಾದ ಕುರಿತು ಇಂದು ತುರ್ತು ಸಂಪುಟ ಸಭೆ

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?