Virat Kohli: ವಿರಾಟ್ ಕೊಹ್ಲಿ ಮಾಲಿಕತ್ವದ ಬೆಂಗಳೂರಿನ ಪಬ್ ಮೇಲೆ ದೂರು ದಾಖಲು
ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ದಿ ಒನ್ 8 ಕಮ್ಯೂನ್ ಪಬ್ನಲ್ಲಿ (The One8 Commune pub) ಪ್ರತ್ಯೇಕ ಸ್ಥಳ ಮೀಸಲಿಡದೆ ಗ್ರಾಹಕರಿಗೆ ಧೂಮಪಾನಕ್ಕೆ (Smoking) ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ಮೇ 29ರಂದು ಪೊಲೀಸರು ದಾಳಿ ಮಾಡಿ ಎನ್ಸಿಆರ್ ದಾಖಲು ಮಾಡಿಕೊಂಡಿದ್ದರು. ಈಗ ನ್ಯಾಯಾಲಯದಿಂದ ಅನುಮತಿ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿರಾಟ್ ಕೊಹ್ಲಿ, ಪಬ್

ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ವಿರುದ್ಧ ಕಬ್ಬನ್ ಪಾರ್ಕ್ (Cubbon Park) ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲು ಮಾಡಿದ್ದಾರೆ. ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ವಿರಾಟ್ ಕೊಹ್ಲಿ ಮಾಲೀಕತ್ವದ ದಿ ಒನ್ 8 ಕಮ್ಯೂನ್ ಪಬ್ನಲ್ಲಿ (The One8 Commune pub) ಪ್ರತ್ಯೇಕ ಸ್ಥಳ ಮೀಸಲಿಡದೆ ಗ್ರಾಹಕರಿಗೆ ಧೂಮಪಾನಕ್ಕೆ (Smoking) ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ಮೇ 29ರಂದು ಪೊಲೀಸರು ದಾಳಿ ಮಾಡಿ ಎನ್ಸಿಆರ್ ದಾಖಲು ಮಾಡಿಕೊಂಡಿದ್ದರು. ಈಗ ನ್ಯಾಯಾಲಯದಿಂದ ಅನುಮತಿ ಪಡೆದು ಪ್ರಕರಣ ದಾಖಲಿಸಿದ್ದಾರೆ.
ದಿ ಒನ್ 8 ಕಮ್ಯೂನ್ ಪಬ್ನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಸ್ಥಳ ಮೀಸಲು ಇಡದಿರುವುದಕ್ಕೆ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಕಾಯ್ದೆ (COTPA Act) ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಅನುಮತಿ ನೀಡಿರುವ ಅವಧಿ ಮೀರಿ ಪಬ್ ನಡೆಸಲಾಗುತ್ತಿದೆ ಎಂದು ಪ್ರಕರಣ ದಾಖಲಾಗಿತ್ತು.
ಬೆಂಗಳೂರಿನಲ್ಲಿ ಒನ್8 ಕಮ್ಯೂನ್ ಪಬ್ ಡಿಸೆಂಬರ್ 2023ರಲ್ಲಿ ಪ್ರಾರಂಭವಾಯಿತು. ಇದು ದಿಲ್ಲಿ, ಮುಂಬಯಿ, ಪುಣೆ ಮತ್ತು ಕೋಲ್ಕತ್ತಾದಂತಹ ಇತರ ಪ್ರಮುಖ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.
ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ ಶಿಕ್ಷೆ ಘೋಷಿಸಿದ ಕೋರ್ಟ್
ಚೆನ್ನೈ: ಡಿಸೆಂಬರ್ನಲ್ಲಿ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಅಣ್ಣಾ ವಿಶ್ವವಿದ್ಯಾಲಯದಲ್ಲಿ ( Anna University) ನಡೆದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರನೊಬ್ಬ ತಪ್ಪಿತಸ್ಥನೆಂದು ಸಾಬೀತಾಗಿದೆ. ಐದು ತಿಂಗಳ ವಿಚಾರಣೆಯ ನಂತರ ಚೆನ್ನೈ ಕ್ಯಾಂಪಸ್ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ 11 ಆರೋಪಗಳಿಗೂ ಜ್ಞಾನಶೇಖರನ್ ತಪ್ಪಿತಸ್ಥನೆಂದು ಮಹಿಳಾ ನ್ಯಾಯಾಲಯ ಘೋಷಿಸಿದೆ. ಅಪರಾಧಿಗೆ ಶಿಕ್ಷೆಯ ಪ್ರಮಾಣ ಇನ್ನೂ ಘೋಷಣೆ ಆಗಿಲ್ಲ.
ಎಲ್ಲಾ ಆರೋಪಗಳಿಗೂ ಶಿಕ್ಷೆ ವಿಧಿಸಲಾಗಿರುವುದರಿಂದ ಅವನಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ನ್ಯಾಯಾಧೀಶೆ ರಾಜಲಕ್ಷ್ಮಿ ಹೇಳಿದರು. ಆದಾಗ್ಯೂ, ಅಪರಾಧಿಯು ತನ್ನ ವೃದ್ಧ ತಾಯಿ ಮತ್ತು ಎಂಟು ವರ್ಷದ ಮಗಳನ್ನು ನೋಡಿಕೊಳ್ಳಬೇಕು ಎಂದು ಹೇಳಿ ಕನಿಷ್ಠ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾನೆ.
ವರದಿಗಳ ಪ್ರಕಾರ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯು ಆಕೆಯ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ, ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ನಂತರ ಆಕೆ ಡಿಸೆಂಬರ್ 24 ರಂದು (ಮಂಗಳವಾರ) ದೂರು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿತ್ತು. ಹುಡುಗಿಯ ದೂರಿನ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಗೋವಿ ಚೆಜಿಯಾನ್ ಖಚಿತಪಡಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ವಿಶ್ವವಿದ್ಯಾಲಯದಲ್ಲಿ ವಿಶೇಷ ಸಮಿತಿಯನ್ನೂ ರಚಿಸಲಾಗಿದ್ದು, ಜೊತೆಗೆ ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
ಪೊಲೀಸರ ಪ್ರಕಾರ, ಆತ ಘಟನೆಯ ವಿಡಿಯೋ ಚಿತ್ರೀಕರಿಸಿ ಇಬ್ಬರನ್ನೂ ಬ್ಲ್ಯಾಕ್ಮೇಲ್ ಮಾಡಿದ್ದ ಎನ್ನಲಾಗಿದೆ. ನಂತರ ಆತನನ್ನು ಗ್ರೇಟರ್ ಚೆನ್ನೈ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಬಂಧನದ ನಂತರ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಕಾರ್ಯಕರ್ತರೊಂದಿಗೆ ಜ್ಞಾನಶೇಖರನ್ ಫೋಟೋ ಕಾಣಿಸಿಕೊಂಡಿತ್ತು.
ಇದನ್ನೂ ಓದಿ: Murder Case: ಜಮೀನು ವಿಚಾರಕ್ಕೆ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ