ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತೆರೆದ ಚರಂಡಿಗೆ ಬಿದ್ದು ಗಾಯ; ಬಿಜೆಪಿ ಮುಖಂಡ ಬೇಲೂರು ರಾಘವೇಂದ್ರ ಶೆಟ್ಟಿ ಆರೋಗ್ಯ ವಿಚಾರಿಸಿದ ಶಾಸಕ ಅಶ್ವತ್ಥನಾರಾಯಣ್

CN Ashwath Narayan: ಬಿಜೆಪಿ ಹಾಲು ಪ್ರಕೋಷ್ಟದ ರಾಜ್ಯ ಸಂಚಾಲಕ ಮತ್ತು ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಬೇಲೂರು ರಾಘವೇಂದ್ರ ಶೆಟ್ಟಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ್, ತಕ್ಷಣ ಸ್ಪಂದಿಸಬೇಕಾದ ಉತ್ತರ ಮಹಾನಗರಪಾಲಿಕೆ ಅಧಿಕಾರಿವರ್ಗವು ಸರಿಯಾಗಿ ಸ್ಪಂದಿಸಿಲ್ಲ. ಪೊಲೀಸರು ಕೇಸು ದಾಖಲಿಸಲು ಹಿಂಜರಿದಿದ್ದಾರೆ. ಜವಾಬ್ದಾರಿ, ಸೂಕ್ಷ್ಮತೆ ಇಲ್ಲದೇ ಒಂದು ವ್ಯವಸ್ಥೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಬೇಲೂರು ರಾಘವೇಂದ್ರ ಶೆಟ್ಟಿ ಅವರ ಆರೋಗ್ಯ ವಿಚಾರಿಸಿದ ಡಾ.ಅಶ್ವತ್ಥ ನಾರಾಯಣ್.

ಬೆಂಗಳೂರು, ಜು.21: ಚರಂಡಿಯ ಹಳ್ಳಕ್ಕೆ ಬಿದ್ದು ಗಾಯಗೊಂಡಿದ್ದ ಬಿಜೆಪಿ ಮುಖಂಡ ಬೇಲೂರು ರಾಘವೇಂದ್ರ ಶೆಟ್ಟಿ ಅವರ ಆರೋಗ್ಯವನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ (CN Ashwath Narayan) ಮಂಗಳವಾರ ವಿಚಾರಿಸಿದರು.

ಈ ವೇಳೆ ಮಾತನಾಡಿರುವ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು, ಬಿಜೆಪಿ ಹಾಲು ಪ್ರಕೋಷ್ಟದ ರಾಜ್ಯ ಸಂಚಾಲಕ ಮತ್ತು ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಬೇಲೂರು ರಾಘವೇಂದ್ರ ಶೆಟ್ಟಿ ಅವರು ಜು.18ರಂದು ರಾತ್ರಿ ಡಾಲರ್ಸ್ ಕಾಲೊನಿ ಬಳಿ ತೆರಳಿದ್ದರು. ಅಲ್ಲಿ ಚರಂಡಿ ಸ್ಲ್ಯಾಬ್ ತೆರೆದು ಜಿಬಿಎಯವರು ಕಾಮಗಾರಿ ನಡೆಸುತ್ತಿದ್ದರು. ಸ್ಲ್ಯಾಬ್ ಇಲ್ಲದುದರಿಂದ ಚರಂಡಿಯ ಹಳ್ಳಕ್ಕೆ ಬಿದ್ದು ಬೇಲೂರು ರಾಘವೇಂದ್ರ ಶೆಟ್ಟಿ ಅವರ ಕಾಲಿಗೆ ಗಂಭೀರ ಗಾಯವಾಗಿದೆ.

ಈ ಬಗ್ಗೆ ಉತ್ತರ ಮಹಾನಗರ ಪಾಲಿಕೆ ಅಧಿಕಾರಿ ವರ್ಗವು ಸರಿಯಾಗಿ ಸ್ಪಂದಿಸಿಲ್ಲ. ಪೊಲೀಸರು ಕೇಸು ದಾಖಲಿಸಲು ಹಿಂಜರಿದಿದ್ದಾರೆ. ಜವಾಬ್ದಾರಿ, ಸೂಕ್ಷ್ಮತೆ ಇಲ್ಲದೇ ಒಂದು ವ್ಯವಸ್ಥೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಆರೋಪಿಸಿದರು.‌

ರಸ್ತೆ ಅಪಘಾತದಲ್ಲಿ ಗಾಯಗೊಂಡ ಯುವತಿಗೆ ನೆರವಾದ ಚಿರಾಗ್ ಪಾಸ್ವಾನ್; ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಕೇಂದ್ರ ಸಚಿವ

ಪೊಲೀಸರು ದೂರು ಸ್ವೀಕರಿಸದ ಕುರಿತು ರಾಘವೇಂದ್ರ ಶೆಟ್ಟಿ ಅವರು ನೋವನ್ನು ವ್ಯಕ್ತಪಡಿಸಿದ್ದಾಗಿ ಹೇಳಿದರು. ಆಂಧ್ರಪ್ರದೇಶದ ರಾಜ್ಯಪಾಲರಾದ ಜಸ್ಟಿಸ್ ನಜೀರ್ ಅವರು ರಾಘವೇಂದ್ರ ಶೆಟ್ಟಿ ಅವರನ್ನು ಭೇಟಿ ಮಾಡಿದ್ದರು. ಅವರು ಸೂಚನೆ ಕೊಟ್ಟ ತಕ್ಷಣ ಎಫ್‍ಐಆರ್ ಮಾಡಿದ್ದಾರೆ ಎಂದು ದೂರಿದರು. ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಒತ್ತಾಯಿಸಿದರು.