ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

B Nagendra: ಚೆಕ್ ಬೌನ್ಸ್ ಕೇಸ್‌ನಲ್ಲಿ ಮಾಜಿ ಸಚಿವ ನಾಗೇಂದ್ರಗೆ ಶಿಕ್ಷೆ ಪ್ರಕಟ; ವಾಲ್ಮೀಕಿ ನಿಗಮ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ!

B Nagendra: ವಿಎಸ್‌ಎಲ್ ಸ್ಟೀಲ್ ಲಿಮಿಟೆಡ್, ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಮತ್ತೊಂದೆಡೆ ವಾಲ್ಮೀಕಿ ಪ್ರಕರಣದಲ್ಲಿ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಚೆಕ್ ಬೌನ್ಸ್ ಕೇಸ್‌ನಲ್ಲಿ ಮಾಜಿ ಸಚಿವ ನಾಗೇಂದ್ರಗೆ ಶಿಕ್ಷೆ ಪ್ರಕಟ

Profile Prabhakara R Apr 9, 2025 6:56 PM

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ (Cheque Bounce Case) ಮಾಜಿ ಸಚಿವ ಬಿ.ನಾಗೇಂದ್ರಗೆ (B Nagendra) 42ನೇ ಎಸಿಜೆಎಂ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ನಾಗೇಂದ್ರ ಸೇರಿ ಮೂವರು ಆರೋಪಿಗಳಿಗೆ ಬರೋಬ್ಬರಿ 1.25 ಕೋಟಿ ದಂಡ ಕಟ್ಟುವಂತೆ ಸೂಚಿಸಲಾಗಿದೆ. ಒಂದು ವೇಳೆ ದಂಡ ಪಾವತಿಸದೇ ಇದ್ದರೇ 1 ವರ್ಷ ಸೆರೆವಾಸ ಅನುಭವಿಸುವಂತೆ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಶಿವಕುಮಾರ್ ಆದೇಶಿಸಿದ್ದಾರೆ. ವಿಎಸ್‌ಎಲ್ ಸ್ಟೀಲ್ ಲಿಮಿಟೆಡ್, ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಇಂದು ಕೋರ್ಟ್ ತೀರ್ಪು ನೀಡಿದೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಪಟ್ಟಂತೆ ಇದೀಗ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೊಟ್ ಅವರು ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಇ.ಡಿ. ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದರು. ಹೀಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಸಿಕ್ಯೂಷನ್‌ಗೆ ಕಳೆದ ಒಂದು ತಿಂಗಳ ಹಿಂದೆಯೇ ಜಾರಿ ನಿರ್ದೇಶನಲಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಶನಿವಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ 94 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರನ್ನು 2024ರ ಜುಲೈ ಜುಲೈ 12 ರಂದು ಜಾರಿ ನಿರ್ದೇಶಾನಾಲಯ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಶಾಸಕ ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದ್ದರಿಂದ ಅ.15ರಂದು ಬಿಡುಗಡೆಯಾಗಿದ್ದರು.

ಈ ಸುದ್ದಿಯನ್ನೂ ಓದಿ | Vidhana Soudha: ಇನ್ನು ಮುಂದೆ ವಿಧಾನಸೌಧ ಪ್ರವಾಸಿ ತಾಣ! ವೀಕ್ಷಣೆಗೆ ಶುಲ್ಕ, ಗೈಡೆಡ್‌ ಟೂರ್‌ ಸೌಲಭ್ಯ

ಪ್ರೇಮ ವಿವಾಹಕ್ಕೆ ಸಂಬಂಧಿಸಿ ಐವರನ್ನು ಕೊಂದ ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ರಾಯಚೂರು: ಜಿಲ್ಲೆಯ (Raishuru news) ಸಿಂಧನೂರಿನಲ್ಲಿ (Sindhanuru) ನಡೆದ ಐವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆಪಾತಕಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ (Death sentence) ವಿಧಿಸಿದೆ. ಇನ್ನೂ 9 ಮಂದಿಗೆ ಜೀವಾವಧಿ (Life imprisonment) ಶಿಕ್ಷೆಯನ್ನು ವಿಧಿಸಲಾಗಿದೆ. ಸಿಂಧನೂರಿನ ಸುಕಾಲಪೇಟೆಯಲ್ಲಿ 2020ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣ (sindhanur mass murder case) ರಾಯಚೂರು (Raichur news) ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ತೀರ್ಪು ನೀಡಿದ್ದು, ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ (death sentence) ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ (Life imprisonment) ಹಾಗೂ ದಂಡ ವಿಧಿಸಿದೆ.

ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರ ವಾದ, ಪ್ರತಿವಾದ ಪರಿಶೀಲಿಸಿ ಮೂವರಿಗೆ ಮರಣ ದಂಡನೆ ಹಾಗೂ ತಲಾ 47 ಸಾವಿರ ರೂ.ದಂಡ ಹಾಗೂ 9 ಜನರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 97,500 ರೂ.ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. A-1 ಆರೋಪಿ ಸಣ್ಣ ಫಕೀರಪ್ಪ, A- 2 ಅಂಬಣ್ಣ, A-3 ಸೋಮಶೇಖರ್ ಗೆ ಗಲ್ಲು ಶಿಕ್ಷೆಯಾಗಿದ್ದರೆ, ಇನ್ನುಳಿದಂತೆ A- 4 ರೇಖಾ, A-5 ಗಂಗಮ್ಮ, A- 6 ದೊಡ್ಡ ಫಕೀರಪ್ಪ, A-7 ಹನುಮಂತ, A-8 ಹೊನ್ನೂರಪ್ಪ, A-9 ಬಸಲಿಂಗಪ್ಪ, A- 10 ಅಮರೇಶ್,A- 11- ಶಿವರಾಜ್, A- 12 ಪರಸಪ್ಪಗೆ ಜೀವಾವಧಿ ಶಿಕ್ಷೆ ಜೊತೆ ದಂಡ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ

ನಗರದ ಸುಕಾಲಪೇಟೆಯ ಈರಪ್ಪ ಅವರ ಪುತ್ರ ಮೌನೇಶ್, ಅದೇ ಏರಿಯಾದ ಸಣ್ಣ ಫಕೀರಪ್ಪನ ಪುತ್ರಿ ಮಂಜುಳಾ ಎನ್ನುವರು ಪರಸ್ಪರ ಪ್ರೀತಿಸಿದ್ದರು. ಆದರೆ ಇಬ್ಬರ ಪ್ರೀತಿಗೆ ಯುವತಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಸಹ ಮೌನೇಶ್ ಹಾಗೂ ಮಂಜುಳಾ ಮದುವೆಯಾಗಿದ್ದರು. ಇದು ಯುವತಿ ಮನೆಯವರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿ ದಿನ ಎರಡೂ ಕುಟುಂಬಗಳ ನಡುವೆ ವಾಗ್ವಾದ, ಜಗಳ ನಡೆಯುತ್ತಲೇ ಇದ್ದವು.

ಆರೋಪಿಗಳು 2020ರ ಜುಲೈ 11ರಂದು ಸಂಜೆ ಸಿಂಧನೂರು ನಗರದ ಸುಕಾಲಪೇಟೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿಈರಪ್ಪನ ಮನೆಗೆ ನುಗ್ಗಿ ಸಿಕ್ಕಿಸಿಕ್ಕವರ ಮೇಲೆ ದೊಣ್ಣೆ, ಕೊಡಲಿ, ಮಚ್ಚುಗಳಿಂದ ದಾಳಿ ಮಾಡಿದ್ದು, ಈರಪ್ಪ, ಆತನ ಪತ್ನಿ ಸುಮಿತ್ರಮ್ಮ, ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳಾದ ಶ್ರೀದೇವಿ ಅವರನ್ನು ಕೊಲೆ ಮಾಡಿದ್ದರು. ಅಲ್ಲದೇ ಮೃತ ಈರಪ್ಪನ ಸೊಸೆಯಾದ ರೇವತಿ ಹಾಗೂ ಆತನ ಮಗಳಾದ ತಾಯಮ್ಮ ಮೇಲೂ ಮಾರಾಣಾಂತಿಕೆ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದರು. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕಿಯರ ದಾರುಣ ಸಾವು