ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಡಿಸಿಎಂ, ಕೆಪಿಸಿಸಿ ಅಧ್ಯಕ್ಷನಾಗಿ ದೆಹಲಿಗೆ ಭೇಟಿ; ಸಿಎಂ ಅನುಮತಿ ಪಡೆಯುವೆ ಎಂದ ಡಿ.ಕೆ.ಶಿವಕುಮಾರ್‌

DK Shivakumar: ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಹೇಳಿದ್ದಾರೆ.

ಡಿಸಿಎಂ, ಕೆಪಿಸಿಸಿ ಅಧ್ಯಕ್ಷನಾಗಿ ದೆಹಲಿಗೆ ಭೇಟಿ ನೀಡುತ್ತಿರುವೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Feb 9, 2026 10:23 PM

ಬೆಂಗಳೂರು, ಫೆ.9: ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ದೆಹಲಿ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಬಜೆಟ್‌ ಸಭೆಯ ನಡುವೆ ದೆಹಲಿ ಭೇಟಿ ಬಗ್ಗೆ ಕೇಳಿದಾಗ ಹಾಗೂ ರಾಹುಲ್‌ ಗಾಂಧಿ ನಿಮ್ಮನ್ನು ಕರೆಯುತ್ತಿದ್ದಾರೆಯೇ ಎಂದು ಎಂದಾಗ, ʼಭೇಟಿ ಮಾಡುವ ಎಲ್ಲಾ ಹೆಸರನ್ನು ಹೇಳಲು ಆಗುವುದಿಲ್ಲ. ನಿಮಗೆ ಏಕೆ ಇಷ್ಟು ಕುತೂಹಲ. ನಾನು ಉಪಮುಖ್ಯಮಂತ್ರಿ ಅಷ್ಟೇ ಅಲ್ಲ, ಕೆಪಿಸಿಸಿ ಅಧ್ಯಕ್ಷ ಕೂಡ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್‌ 10ಕ್ಕೆ 6 ವರ್ಷವಾಗುತ್ತದೆ. ನಮ್ಮ ಸಂಸದರನ್ನು, ನಾಯಕರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ನಾನು ಭೇಟಿ ಮಾಡುತ್ತಾ ಇರುತ್ತೇನೆ, ಆಗ ನನ್ನ ಕಷ್ಟ, ದುಃಖ, ದುಮ್ಮಾನ, ನಿಮ್ಮ ಸಂತೋಷ, ಬಯಕೆ ಎಲ್ಲಾ ಹೇಳುತ್ತಾ ಇರುತ್ತೇನೆʼ ಎಂದು ಹೇಳಿದರು.‌

ಪಾಪ ಆತನಿಗೆ ಅನುಭವ ಕಡಿಮೆ; ಮೆಟ್ರೋ ದರ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಡಿ.ಕೆ. ಶಿವಕುಮಾರ್‌ ತಿರುಗೇಟು

ನಿಮ್ಮ ಇಲಾಖೆಗೆ ಸಂಬಂಧಿದಂತೆ ಬಜೆಟ್ ಪೂರ್ವಸಿದ್ಧತಾ ಸಭೆ ಕರೆದಿದ್ದು, ನೀವು ದೆಹಲಿ ಹೋಗುತ್ತಿದ್ದೀರಿ ಎಂದು ಕೇಳಿದಾಗ, ʼನಾನು ಸಿಎಂ ಅನುಮತಿ ಪಡೆದುಕೊಳ್ಳುತ್ತಿದ್ದೇನೆ. ನೀರಾವರಿ ಇಲಾಖೆಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದು, ಮಂಗಳವಾರದ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ನನಗಿಂತ ಸಿಎಂ ಅವರಿಗೆ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಿದೆ. ಮೇಕೆದಾಟು ಯೋಜನೆ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿದ್ದಾರೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.