ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನಲ್ಲಿ IAS ಅಧಿಕಾರಿ ನಿಗೂಢವಾಗಿ ನಾಪತ್ತೆ; ಫೋನ್‌ ಸ್ವಿಚ್‌ ಆಫ್‌, ತನಿಖೆ ಚುರುಕು

IAS Officer: ಐಎಎಸ್ ಅಧಿಕಾರಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಅಧಿಕಾರಿಯ ಮೊಬೈಲ್ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಸ್ವಿಚ್‌ಆಫ್ ಆಗಿರುವುದು ತಿಳಿದು ಬಂದಿದೆ. ಸದ್ಯ ಈ ಕುರಿತು ತನಿಖೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ IAS ಅಧಿಕಾರಿ ನಿಗೂಢವಾಗಿ ನಾಪತ್ತೆ

ಬೆಂಗಳೂರಿನಲ್ಲಿ IAS ಅಧಿಕಾರಿ ನಿಗೂಢವಾಗಿ ನಾಪತ್ತೆ -

Vishakha Bhat Heggar
Vishakha Bhat Heggar Aug 22, 2026 10:59 AM

ಬೆಂಗಳೂರು: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ (IAS Officer Missing) ನಿಗೂಢವಾಗಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಅಧಿಕಾರಿಯ ಮೊಬೈಲ್ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Kempegowda international airport) ಸ್ವಿಚ್‌ಆಫ್ ಆಗಿರುವುದು ತಿಳಿದು ಬಂದಿದೆ. ನಾಪತ್ತೆಯಾಗಿರುವ ಅಧಿಕಾರಿಯ ಪತ್ತೆಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸದ್ಯ ಪೊಲೀಸರು ತನಿಖೆ ಆರಂಭಿಸಿದ್ದು, ಜ್ಞಾನೇಂದ್ರ ಕುಮಾರ್ ಅವರ ಚಲನವಲನವನ್ನು ಏರ್‌ಪೋರ್ಟ್‌ವರೆಗೆ ಟ್ರ್ಯಾಕ್ ಮಾಡಿದ್ದಾರೆ. ಮೊಬೈಲ್ ಸ್ವಿಚ್‌ಆಫ್ ಮಾಡಿರುವ ಅಧಿಕಾರಿ ದೆಹಲಿ ಕಡೆ ಪ್ರಯಾಣ ಬೆಳೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿ ಕುಟುಂಬದವರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ವರದಿಯಾಗಿದೆ.

ED ದಾಳಿ ಬಳಿಕ ನಾಪತ್ತೆ!

ನಾಪತ್ತೆಯಾದ ಜ್ಞಾನೇಂದ್ರ ಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗ (KPSC)ನಲ್ಲಿ ಕೆಲಸ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ನಡೆದ ED ದಾಳಿಯ ಬಳಿಕ ಅಧಿಕಾರಿ ನಾಪತ್ತೆಯಾಗಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಪೊಲೀಸರು ಅಧಿಕಾರಿಯ ಪತ್ತೆಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ನಾಪತ್ತೆಯ ಹಿಂದಿನ ನಿಖರ ಕಾರಣ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ.

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ, ಭೂಕುಸಿತ: 5 ಸೇನಾ ಸಿಬ್ಬಂದಿ ನಾಪತ್ತೆ, 4 ಕಾರ್ಮಿಕರ ದುರ್ಮರಣ

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ರಾಜ್ಯ ಸರ್ಕಾರ ಒಪ್ಪಿಗೆ

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಾಹುಕಾರ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದರು. ಆದರೆ, ಕರ್ನಾಟಕ ಹೈಕೋರ್ಟ್ ಅವರನ್ನು ಮರುನೇಮಕ ಮಾಡುವಂತೆ ಆದೇಶಿಸಿತ್ತು. ತಮ್ಮ ಪುತ್ರಿಗೆ ಸರ್ಕಾರಿ ಉದ್ಯೋಗ ಪಡೆಯಲು ನಕಲಿ ಆದಾಯ ಪ್ರಮಾಣಪತ್ರ ಬಳಸಿದ್ದಾರೆ ಎಂಬ ಆರೋಪ ಸಾಹುಕಾರ್ ವಿರುದ್ಧ ಕೇಳಿಬಂದಿತ್ತು.