ಬೆಂಗಳೂರು: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುಮನಹಳ್ಳಿಯ ಡಾ.ಬಾಬು ಜಗಜೀವನರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ (Kempegowda Jayanthi) ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಉದ್ಘಾಟಿಸಿದರು.
ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನೀಡಲಾಗುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಭಾರತೀಯ ವಿಜ್ಞಾನ ಸಂಸ್ಥೆಯ ಕೌಶಾಲ್ ವರ್ಮಾ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್, ಮೈಸೂರು ಸ್ಯಾಂಡಲ್ ಸೋಪ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಪಿ.ಕೆ.ಎಂ. ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸುದ್ದಿಯನ್ನೂ ಓದಿ | CM Siddaramaiah: ಪಕ್ಷದಲ್ಲಿ ಆಂತರಿಕ ಜಗಳವಿಲ್ಲ, ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ: ಸಿಎಂ ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಶಿವರಾಜ್ ತಂಗಡಗಿ, ಕೆ.ಎಚ್. ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಗಳಾದ ಡಾ.ನಿರ್ಮಲಾನಂದ ಸ್ವಾಮೀಜಿ, ಸ್ಫಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಶಾಸಕರಾದ ಬಾಲಕೃಷ್ಣ, ಎಸ್.ಟಿ. ಸೋಮಶೇಖರ್, ಮುನಿರತ್ನ, ಶ್ರೀನಿವಾಸ್, ಎಂಎಲ್ಸಿ ಪುಟ್ಟಣ್ಣ, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪ ಗೌಡ, ಗ್ರೇಟರ್ ಬೆಂಗಳೂರು (ಬಿಬಿಎಂಪಿ) ಮುಖ್ಯ ಆಯುಕ್ತ ಮಹೇಶ್ವರ ರಾವ್, ಬಿಡಿಎ ಆಯುಕ್ತ ಮನಿವಣ್ಣನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.