ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Land Conversion: ರಾಜ್ಯದಲ್ಲಿ ಇನ್ನುಮುಂದೆ ಭೂ ಪರಿವರ್ತನೆ ಮತ್ತಷ್ಟು ಸರಳ; ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ

⁠ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಹಾಗೂ ಜನಸ್ನೇಹಿ ಆಡಳಿತಕ್ಕೆ ನಾಂದಿ ಹಾಡಲು ಪ್ರಯತ್ನಿಸಲಾಗಿದ್ದು, 47 ಕಲಂಗಳಿಗೆ 9 ತಿದ್ದುಪಡಿ ತರಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

ಇನ್ನುಮುಂದೆ ಭೂ ಪರಿವರ್ತನೆ ಮತ್ತಷ್ಟು ಸರಳ; ಕಾಯ್ದೆಗೆ ತಿದ್ದುಪಡಿ

ಸಾಂದರ್ಭಿಕ ಚಿತ್ರ -

Prabhakara R
Prabhakara R Dec 25, 2025 7:16 PM

ಬೆಂಗಳೂರು, ಡಿ.25: ನಿಯಮ ಸರಳೀಕರಣ, ಪಾರದರ್ಶಕತೆ ಮುಖಾಂತರ ಆಡಳಿತದಲ್ಲಿ ಗಣನೀಯ ಸುಧಾರಣೆ ತರುವ ಉದ್ದೇಶದಿಂದ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ (Karnataka Land Revenue Act 1964) ರಾಜ್ಯ ಸರ್ಕಾರವು ಡಿ.23ರಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಇದರಿಂದ ಭೂ ಪರಿವರ್ತನೆ (Land Conversion) ಮತ್ತಷ್ಟು ಸುಲಭವಾಗಲಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳಿಗೆ ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ.

⁠ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲು ಹಾಗೂ ಜನಸ್ನೇಹಿ ಆಡಳಿತಕ್ಕೆ ನಾಂದಿ ಹಾಡಲು ಪ್ರಯತ್ನಿಸಲಾಗಿದ್ದು, 47 ಕಲಂಗಳಿಗೆ 9 ತಿದ್ದುಪಡಿ ತರಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

⁠ಕಾಯ್ದೆಯಲ್ಲಿ 56 ವರ್ಷಗಳ ತರುವಾಯ 44 ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. 1974ರಲ್ಲಿ ದೇವರಾಜು ಅರಸು ಅವರ ಅವಧಿಯಲ್ಲಿ ಭೂ ಸುಧಾರಣಾ ಕಾಯ್ದೆ 1961ಕ್ಕೆ 145 ಕಡೆ ತಿದ್ದುಪಡಿ ತಂದು ಕಾನೂನಿಗೆ ಸ್ವಾತಂತ್ರ್ಯ ನೀಡಲಾಗಿತ್ತು. ಅದಾದ ಬಳಿಕ ಸಮಗ್ರ ತಿದ್ದುಪಡಿತಂದಿರುವುದು ಇದೇ ಮೊದಲು. ⁠ಈ ತಿದ್ದುಪಡಿ ಮೂಲಕ ಕಂದಾಯ ನ್ಯಾಯಾಲಯಗಳನ್ನು ಪಾರದರ್ಶಕವಾಗಿ, ನಿಯಮಬದ್ಧವಾಗಿ ನಡೆಸಲು ಹಾಗೂ ಸಾರ್ವಜನಿಕರಿಗೆಸರಳ- ಸುಳಲಿತ ನ್ಯಾಯದಾನ ನೀಡಲು ತೀರ್ಮಾನಿಸಲಾಗಿದೆ.

ದೆಹಲಿಗೆ ಕಾಫಿ ಬೆಳೆಗಾರರ ನಿಯೋಗ ಬರುವಂತೆ ಎಚ್.ಡಿ. ಕುಮಾರಸ್ವಾಮಿ ಸಲಹೆ

⁠ಭೂ ಪರಿವರ್ತನೆಯನ್ನು ಸರಳೀಕೃತವಾಗಿ ಪ್ರಕ್ರಿಯೆಗೊಳಪಡಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಹಾಗೂ ಬಂಡವಾಳ ಹೂಡಿಕೆಗೆ ಹೂಡಿಕೆದಾರರಸ್ನೇಹಿಯಾಗಿ ಖರೀದಿಸಲಾದ ಭೂಮಿಗೆ ಭೂ ಪರಿವರ್ತನೆನೀಡಲು ತಿದ್ದುಪಡಿ ತರಲಾಗಿದೆ.

ಯಾವೆಲ್ಲಾ ನಿಯಮ ಸರಳೀಕರಣ ಮಾಡಲಾಗಿದೆ?

  • ಮಾಸ್ಟರ್ ಪ್ಲ್ಯಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದುಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ Plan approvalಗೆ ಹೋಗಬಹುದು.
  • ಮಾಸ್ಟರ್ ಪ್ಲ್ಯಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ (ಡೀಮ್ಡ್ ಕನ್ವರ್ಷನ್) ಸಹ ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ಆಗುತ್ತಿತ್ತು. ಆದರೆ, ಪ್ರಸ್ತುತ 30 ದಿನಗಳಲ್ಲಿ ಭೂಪರಿವರ್ತನೆ ಕಡ್ಡಾಯಗೊಳಿಸಲಾಗಿದೆ.
  • ⁠ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ  ನೀಡಲಾಗಿದೆ. 
  • ಜಿಲ್ಲಾಧಿಕಾರಿಗಳು 30 ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜತೆಗೆ ಚರ್ಚಿಸಿ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 
  • 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ.
  • ⁠ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ. 
  • ⁠ಭಾರತ ದೇಶದಲ್ಲಿ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.
  • ⁠ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಯೋಜನಾ ಘಟಕವನ್ನು ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ.
  • ⁠ಭೂ ಪರಿವರ್ತನೆಗೆ ಸಂಬಂಧಿಸಿದ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ.
  • ಇತರೆ ವಿಷಯಗಳಿಗೆ ಸಂಬಂಧಿಸಿ ಕಂದಾಯನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ.
  • ⁠RCCMS ಸೇರಿ ಡಿಜಿಟೈಶೇಷನ್‌ ಮುಖಾಂತರ ಆದೇಶಗಳನ್ನು ನೀಡಲಾಗುವುದು. ಇವು ಸುಧಾರಣಾ ಕಾನೂನುಗಳಿಗೆ ನ್ಯಾಯಿಕ ಬಲವನ್ನು ಒದಗಿಸಲಾಗಿದೆ. 
  • ⁠ಹೀಗಾಗಿ ಅದಕ್ಕೂ ನಿಯಮಗಳನ್ನು ರೂಪಿಸಿ ಸರಿಪಡಿಸಲಾಗಿದೆ. ಕಾನೂನು ಮೀರಿ ಯಾರೂ ನ್ಯಾಯಧಾನ ನೀಡಲು ಸಾಧ್ಯವಿಲ್ಲ. ಹೀಗೆ ವಿವಿಧ ಕಲಂಗಳು ಹಾಗೂ ನಿಯಮಗಳಿಗೆ ತಿದ್ದುಪಡಿ ಮೂಲಕಜಾರಿಗೊಳಿಸಲಾಗಿದೆ.
  • ⁠ಕಂದಾಯ ನ್ಯಾಯಾಲಯಗಳನ್ನು online ಮುಖಾಂತರ ನಡೆಸಲು ಕಾನೂನು ತರಲಾಗಿದೆ. ವಾದಿ ಹಾಗೂ ಪ್ರತಿವಾದಿಗಳು ಕಚೇರಿಗಳಿಗೆ ಸುತ್ತುವುದರ ಬದಲಿಗೆ ಅವರು online ಮುಖಾಂತರವೇ ನ್ಯಾಯಾಲಯ ಕಲಾಪಗಳಿಗೆ ಭಾಗವಹಿಸುವ ಸುಲಭ ಮಾರ್ಗ ನೀಡಲಾಗಿದೆ.
  • ⁠ಅದೇ ರೀತಿ ಭೂ ಸುರಕ್ಷಾ ಮೋಜನಿಗೆ ಈಗ ಕಾನೂನಿನ ಬಲ ಒದಗಿಸಲಾಗಿದ್ದು, ನಿಯಮಗಳಲ್ಲಿ ಅವಕಾಶ ನೀಡಲಾಗಿದೆ.