Lokayukta Raid: ಬಿಬಿಎಂಪಿ ಇಂಜಿನಿಯರ್ಗಳ ಮನೆಗಳಿಗೆ ಲೋಕಾಯುಕ್ತ ದಾಳಿ
ಭ್ರಷ್ಟಾಚಾರದ ಆರೋಪ ಹೊತ್ತಿರುವ ಬಿಬಿಎಂಪಿಯ ಹಲವು ಇಂಜಿನಿಯರ್ಗಳ ಮನೆ ಹಾಗೂ ಕಚೇರಿಗಳಿಗೆ ಇಂದು ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಈ ಅಧಿಕಾರಿಗಳ ಕುರಿತು ಸಾರ್ವಜನಿಕರಿಂದ ಹಲವು ದೂರುಗಳಿದ್ದವು.


ಬೆಂಗಳೂರು : ಬೆಂಗಳೂರಿನಲ್ಲಿ (Bengaluru news) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು (Lokayukta Raid) ಭ್ರಷ್ಟ ಅಧಿಕಾರಿಗಳಿಗೆ (Corrupt officers) ಶಾಕ್ ನೀಡಿದ್ದಾರೆ. ಹಲವು ಕಡೆ ಲೋಕಾಯುಕ್ತ ತಂಡಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ (BBMP) ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಕಚೇರಿ, ನಿವಾಸ ಸೇರಿದಂತೆ ನಗರದ ಒಟ್ಟು ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಿಂದರಾಜನಗರ ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್, ನಾಗರಬಾವಿ, ಗೋವಿಂದರಾಜನಗರ, ಯಲಹಂಕ ಭಾಗದಲ್ಲಿ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಗಣಿ ಅಧಿಕಾರಿ ಸಸ್ಪೆಂಡ್
ಮಂಗಳೂರು: 50 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ, ಹಿರಿಯ ಭೂವಿಜ್ಞಾನಿ ಕೃಷ್ಣವೇಣಿಯನ್ನು ಅಮಾನತುಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಶನಿವಾರ ಮಹತ್ವದ ಆದೇಶ ಹೊರಡಿಸಿದ್ದಾರೆ. ಜಾಗದ ವಿಚಾರಕ್ಕೆ ಸಂಬಂಧಿಸಿ 2025ರ ಮೇ 28ರಂದು ಲಂಚದ ಹಣ ಪಡೆಯುತ್ತಿದ್ದಾಗ ಕೃಷ್ಣ ವೇಣಿಯನ್ನು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದರು. ಕೃಷ್ಣವೇಣಿ ಸುಮಾರು 18 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದರು. ಈ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಗಣಿ ಇಲಾಖೆ ನಿರ್ದೇಶಕರು ಸರಕಾರಕ್ಕೆ ಶಿಫಾರಸು ಮಾಡಿದ್ದರು.
ಈ ಮಧ್ಯೆ ಆರೋಪಿಯು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಆ ಮೂಲಕ ಜಾಮೀನು ಪಡೆದಿದ್ದರು. ಇದಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಅದೇ ಹುದ್ದೆಯಲ್ಲಿ ಮುಂದುವರೆದಿದ್ದರು. ಬಳಿಕ ಈ ಬಗ್ಗೆ ಮಾಧ್ಯಮ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ, ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಶನಿವಾರ ಪತ್ರ ಬರೆದಿದ್ದರು. ಕೃಷ್ಣವೇಣಿ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಮೇ 28ರಿಂದ ಅನ್ವಯವಾಗುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಮಂಜುನಾಥ ಎಚ್.ಎಂ. ಆದೇಶಿಸಿದ್ದಾರೆ.
ಇದನ್ನೂ ಓದಿ: Lokayukta Raid: ತುಮಕೂರಿನಲ್ಲಿ 11 ಉಪ ನೋಂದಣಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ