ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯಾದ್ಯಂತ ಬಂದ್‌ಗೆ ನೀರಸ ಪ್ರತಿಕ್ರಿಯೆ; ಶಾಲಾ ಕಾಲೇಜು ಓಪನ್‌, ಎಂದಿನಂತೆ ಬಸ್‌ ಸಂಚಾರ

Karnataka Bandh today: ತಮಿಳುನಾಡಿಗೆ ಕರ್ನಾಟಕ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಇಂದು ಬೆಳಗ್ಗೆಯಿಂದಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ತಮಿಳುನಾಡಿಗೆ ಕರ್ನಾಟಕ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ವಾಟಾಳ್‌ (Karnataka Bandh today) ನಾಗರಾಜ್‌ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಇಂದು ಬೆಳಗ್ಗೆಯಿಂದಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡಿಗರ ಹಿತರಕ್ಷಣೆಯ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದ್ದರೂ, ಸಾರ್ವಜನಿಕರು ಹಾಗೂ ಪ್ರಮುಖ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡದ ಹಿನ್ನೆಲೆಯಲ್ಲಿ ಜನಜೀವನ ಎಂದಿನಂತೆ ಸಹಜವಾಗಿದೆ.

KSRTC,BMTC ಸಂಚಾರ

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಸಂಚಾರ ಯಥಾಸ್ಥಿತಿಯಲ್ಲಿದೆ. ಬಿಎಂಟಿಸಿ ಬಸ್‌ಗಳು ಎಂದಿನಂತೆ ಬೆಳಗ್ಗೆ 4:30ರಿಂದಲೇ ಸಂಚಾರ ಆರಂಭಿಸಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳೂ ಸಹ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಆದರೆ, ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಮೇಲುಕೋಟೆ ಮತ್ತು ಮಲೆ ಮಹದೇಶ್ವರ ಬೆಟ್ಟಗಳು ಸೇರಿದಂತೆ ಕರ್ನಾಟಕದ ಹಲವಾರು ಸ್ಥಳಗಳಿಗೆ ಪ್ರಯಾಣಿಸುವ ಬಸ್‌ಗಳು ಸಹ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ.

ತಮಿಳುನಾಡಿಗೆ ಹೋಗುವ ಬಸ್‌ಗಳಿಗೆ ತಾತ್ಕಾಲಿಕ ತಡೆ

ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡಿಗೆ ಹೋಗುವ ಸುಮಾರು ಬಸ್‌ಗಳನ್ನು ತಡೆದಿದ್ದಾರೆ. ಬಂದ್ ಸಮಯದಲ್ಲಿ ತಮಿಳುನಾಡು ಮಾರ್ಗಗಳಲ್ಲಿ ಬಸ್‌ಗಳು ಕಾರ್ಯನಿರ್ವಹಿಸಿದರೆ ಪ್ರತಿಭಟನಾಕಾರರು ಬಸ್‌ಗಳನ್ನು ಅಡ್ಡಿಪಡಿಸಬಹುದು ಎಂಬ ಕಳವಳದಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಭದ್ರತೆಯನ್ನು ಕಾಪಾಡಿಕೊಳ್ಳಲು ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ.

ಇಂದು ಕರ್ನಾಟಕ ಬಂದ್‌; ಬಸ್‌ ಸಂಚಾರ ಇರುತ್ತಾ? ಬೆಳಗ್ಗೆಯಿಂದ ಹೇಗಿದೆ ಪರಿಸ್ಥಿತಿ

ತಮಿಳು ಭಾಷಿಕರ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಲು ನಗರ ವ್ಯಾಪ್ತಿಯ ಎಲ್ಲಾ ಡಿಸಿಪಿಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸೂಚನೆ ನೀಡಿದ್ದಾರೆ. ಅಲ್ಲದೆ ಬಂದ್​​ ಹೆಸರಲ್ಲಿ ಸರ್ಕಾರಿ ಬಸ್, ಇತರೆ​ ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡಬಾರದು. ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಕೊಡಬಾರದು. ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡಿಸಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Vishakha Bhat Heggar

View all posts by this author