ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಕೇರಳ ಮೂಲದ ಮಹಿಳೆಗೆ ಕಿರುಕುಳ; ಆರೋಪಿ ಅರೆಸ್ಟ್‌

Crime News: ಸಿಲಿಕಾನ್ ಸಿಟಿ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ, ದೌರ್ಜನ್ಯ ಮತ್ತು ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಹಾಸ್ಟೆಲ್‌ನಲ್ಲಿ ತಂಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ನಿಂದಿಸಿದ್ದಾನೆ ಮತ್ತು ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಮಹಿಳೆಗೆ ಕಿರುಕುಳ

ಹಾಸ್ಟೆಲ್‌ನಲ್ಲಿ ಮಹಿಳೆಗೆ ಕಿರುಕುಳ ಆರೋಪ -

Priyanka P
Priyanka P Mar 15, 2026 6:51 PM

ಬೆಂಗಳೂರು, ಮಾ.15: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಹಾಸ್ಟೆಲ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ, ದೌರ್ಜನ್ಯ ಮತ್ತು ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈ ಘಟನೆ ಮಾರ್ಚ್ 11ರಂದು ರಾತ್ರಿ 8:50ರಿಂದ 9:50ರ ನಡುವೆ ಇಂದಿರಾನಗರ ಪ್ರದೇಶದಲ್ಲಿರುವ ಜನಪ್ರಿಯ ಹಾಸ್ಟೆಲ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ (Crime News). 28 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಪ್ರಕಾರ, ಅದೇ ಹಾಸ್ಟೆಲ್‌ನಲ್ಲಿ ತಂಗಿದ್ದ ಮನು ಶರ್ಮಾ ಎಂಬ ವ್ಯಕ್ತಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಮತ್ತು ಒಟ್ಟಿಗೆ ಇರಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ. ತನ್ನ ಸಮ್ಮತಿಯನ್ನು ನಿರಾಕರಿಸಿದರೂ, ಆರೋಪಿ ಆಕೆಗೆ ತೊಂದರೆ ನೀಡುತ್ತಲೇ ಇದ್ದ. ತನ್ನ ಸ್ನೇಹಿತೆ ಪ್ರಿಯಾಂಕಾ ಪ್ರಸಾದ್ ಮೂಲಕ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ.

ಮಾರ್ಚ್ 11ರ ರಾತ್ರಿ ಮನು ಶರ್ಮಾ ಹಾಸ್ಟೆಲ್ ಆವರಣದಲ್ಲಿ ಕೂಗಾಡಲು ಪ್ರಾರಂಭಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ದೂರುದಾರರು ತನ್ನ ಮತ್ತು ತನ್ನ ಸ್ನೇಹಿತನ ವಿರುದ್ಧ ಮನು ಶರ್ಮಾ ಅಸಭ್ಯ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾನೆ. ಅಲ್ಲದೆ ಹಾಸ್ಟೆಲ್‌ನಲ್ಲಿ ತಂಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ನಿಂದಿಸಿದ್ದಾನೆ ಮತ್ತು ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಚಿತ್ರದುರ್ಗದ ಬಳಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸಾವು

ವಾಗ್ವಾದದ ಸಮಯದಲ್ಲಿ ಆರೋಪಿಯು ತನ್ನ ಮತ್ತು ಆಕೆಯ ಸ್ನೇಹಿತನ ಮೇಲೆ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಮನು ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಬಂಧನ

ಶಿರಸಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಮಳಲಿ ಗ್ರಾಮದ ಅರುಣ (ಅರ್ಜುನ್) ಲಕ್ಷ್ಮಣ ಗೌಡ (28) ಬಂಧಿತ ಆರೋಪಿ.

ಈತನ ವಿರುದ್ಧ ಪೋಕ್ಸೊ, ಬಲಾತ್ಕಾರ, ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ, ಮೋಸ, ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಭಾವಚಿತ್ರಗಳನ್ನು ಪೋಸ್ಟ್ ಮಾಡಿರುವ ಆರೋಪಗಳಿವೆ. ಆರೋಪಿಯ ವಿರುದ್ಧ ಶಿರಸಿ ಗ್ರಾಮೀಣ, ಬನವಾಸಿ ಹಾಗೂ ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.‌

ಆರೋಪಿಯ ವಿರುದ್ಧ ಈಗಾಗಲೇ ನ್ಯಾಯಾಲಯಗಳಿಂದ ಮೂರು ಜಾಮೀನು ರಹಿತ ವಾರಂಟ್‌ಗಳು ಹೊರಡಿಸಲಾಗಿದ್ದು, ಒಂದು ಪ್ರಕರಣದಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ಸಮನ್ಸ್ ಆದೇಶ ಹೊರಡಿಸಿದ್ದರೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.