#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

MB Patil: ಶ್ರೀರಾಮುಲು, ಜನಾರ್ದನ ರೆಡ್ಡಿ ಸಂಬಂಧ ಈಗ ಹಳಸಿದೆ: ಎಂ.ಬಿ. ಪಾಟೀಲ್‌

MB Patil: ಶ್ರೀರಾಮುಲು ಮತ್ತು ರೆಡ್ಡಿ ಅವರ ಸಂಬಂಧ ಈಗ ಹಳಸಿದೆ. ಶ್ರೀರಾಮುಲು ನಮ್ಮ ಪಕ್ಷಕ್ಕೆ ಬರುವ ಆಸಕ್ತಿ ವ್ಯಕ್ತಪಡಿಸಿದರೆ, ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

MB Patil: ಶ್ರೀರಾಮುಲು, ಜನಾರ್ದನ ರೆಡ್ಡಿ ಅವರ ಸಂಬಂಧ ಈಗ ಹಳಸಿದೆ: ಎಂ.ಬಿ. ಪಾಟೀಲ್‌

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌

Profile Siddalinga Swamy Jan 24, 2025 8:43 PM

ಬೆಂಗಳೂರು, ಜ.24, 2025: ದಾವೋಸ್ ಶೃಂಗಸಭೆಯಲ್ಲಿ ರಾಜ್ಯವು ಈ ಸಲ ಪ್ರಜ್ಞಾಪೂರ್ವಕವಾಗಿಯೇ ಭಾಗವಹಿಸುತ್ತಿಲ್ಲ. ಅಲ್ಲಿಗೂ ಹೋಗಿ ಒಡಂಬಡಿಕೆಗಳಿಗೆ ಸಹಿ ಹಾಕುವುದು ಮತ್ತು ಅವೇ ಕಂಪನಿಗಳನ್ನು‌‌ ಇಲ್ಲಿಗೂ ಕರೆದು ಮತ್ತೆ ಅದೇ ಒಡಂಬಡಿಕೆಗಳಿಗೆ ಸಹಿ ಹಾಕುವುದರಿಂದ ವೃಥಾ ಗೊಂದಲ ಉಂಟಾಗುತ್ತದೆ. ಇದನ್ನು ತಪ್ಪಿಸಲೆಂದೇ ನಾವು ಈ ಸಲ ದಾವೋಸ್ ಶೃಂಗಸಭೆಯಿಂದ ದೂರ ಉಳಿದಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ (MB Patil) ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮ‌ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು.

ರಾಜ್ಯಕ್ಕೆ 8 ರಿಂದ 10 ಲಕ್ಷ ಕೋಟಿ ರೂಪಾಯಿ ಹೂಡಿಕೆ ಬರುವ ನಿರೀಕ್ಷೆ

ಫೆ.11 ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಜಾಗತಿಕ ಮಟ್ಟದ ಕಂಪನಿಗಳೆಲ್ಲ ಭಾಗವಹಿಸಲಿವೆ. ಇದರಿಂದ ರಾಜ್ಯಕ್ಕೆ 8 ರಿಂದ 10 ಲಕ್ಷ ಕೋಟಿ ರೂಪಾಯಿ ಹೂಡಿಕೆ ಬರುವ ನಿರೀಕ್ಷೆ ಇದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಡಿಕೊಳ್ಳುವ ಒಡಂಬಡಿಕೆಗಳ ಪೈಕಿ ಮುಕ್ಕಾಲು ಪಾಲಾದರೂ ವಾಸ್ತವವಾಗಿ ಬಂಡವಾಳ ರೂಪದಲ್ಲಿ ನಮಗೆ ಬರಬೇಕು. ಇಲ್ಲದೆ ಹೋದರೆ ಎಲ್ಲವೂ ವ್ಯರ್ಥ. ಆದ್ದರಿಂದ ನಾವು ವಾಸ್ತವಿಕ ದೃಷ್ಟಿಕೋನ ಹೊಂದಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದನ್ನೇ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

2022ರಲ್ಲಿ ಬಿಜೆಪಿ ಸರ್ಕಾರ ಕೂಡ ಹೂಡಿಕೆದಾರರ ಸಮಾವೇಶ ಮಾಡಿ, 50 ಲಕ್ಷ ಕೋಟಿ ರೂಪಾಯಿ ಬರುತ್ತದೆ ಎಂದಿತು. ಅದರಲ್ಲೂ ಗ್ರೀನ್ ಎನರ್ಜಿ ವಲಯಕ್ಕೆ 2.40 ಲಕ್ಷ ಕೋಟಿ ರೂಪಾಯಿ ಹೂಡಿಕೆ ಆಗಲಿದೆ ಎಂದಿತು‌. ಆದರೆ ಒಂದು ರೂಪಾಯಿ ಕೂಡ ಬರಲಿಲ್ಲ ಎಂದು ಆರೋಪಿಸಿದ ಅವರು, ನಮ್ಮಲ್ಲಿ ಗ್ರೀನ್ ಎನರ್ಜಿ ಕ್ಷೇತ್ರಕ್ಕೆ ಅಷ್ಟೊಂದು ಬಂಡವಾಳ ತಡೆದುಕೊಳ್ಳುವ ಧಾರಣಾಶಕ್ತಿಯೇ ಇಲ್ಲ. ಆದರೂ ಬಿಜೆಪಿ ಸರ್ಕಾರ ದೊಡ್ಡದಾಗಿ ಹೇಳಿಕೊಂಡಿತು. ಅಂತಹ ತಪ್ಪು ಈ ಬಾರಿ ಆಗುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru International Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ, ಇದನ್ನು ಪಡೆದ ದೇಶದ ಮೊದಲ ಏರ್‌ಪೋರ್ಟ್‌

ಜನಾರ್ದನ ರೆಡ್ಡಿ ಮಾತನಾಡಿರುವುದು ರಾಜಕೀಯ ಪ್ರೇರಿತ

ಕಾಂಗ್ರೆಸ್ ಮುಖಂಡ ಸತೀಶ್‌ ಜಾರಕಿಹೊಳಿ ಪಕ್ಷದ ನೇತಾರರು. ಅವರನ್ನು ರಾಜಕೀಯವಾಗಿ ಯಾರೂ ಮುಗಿಸಲಾರರು. ಅಂತಹ ಆಲೋಚನೆ ಕೂಡ ಯಾರಿಗೂ ಇಲ್ಲ. ಈ ವಿಚಾರವಾಗಿ ಬಿಜೆಪಿಯ ಜನಾರ್ದನ ರೆಡ್ಡಿ ಮಾತನಾಡಿರುವುದು ರಾಜಕೀಯ ಪ್ರೇರಿತ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಶ್ರೀರಾಮುಲು ಮತ್ತು ರೆಡ್ಡಿ ಅವರ ಸಂಬಂಧ ಈಗ ಹಳಸಿದೆ. ಶ್ರೀರಾಮುಲು ನಮ್ಮ ಪಕ್ಷಕ್ಕೆ ಬರುವ ಆಸಕ್ತಿ ವ್ಯಕ್ತಪಡಿಸಿದರೆ, ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಆದರೆ ರೆಡ್ಡಿ ವಿರುದ್ಧ ನಾವೆಲ್ಲರೂ ಹೋರಾಡಿದ್ದೇವೆ. ಹೀಗಾಗಿಯೇ ಹಿಂದೆ ಅವರು ನಮ್ಮ ಪಕ್ಷಕ್ಕೆ ಸೇರಲು ಬಂದರೂ ನಾವು ಅದನ್ನು ಒಪ್ಪಲಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.