Pralhad Joshi: ಬೈಕ್ನಿಂದ ಬಿದ್ದು ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಜೋಶಿ
Pralhad Joshi: ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದರು. ಈ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ, ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.


ಹುಬ್ಬಳ್ಳಿ: ಬೈಕ್ನಿಂದ ಬಿದ್ದು ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಮಾನವೀಯತೆ ಮೆರೆದ ಘಟನೆ ನಗರದಲ್ಲಿ ನಡೆದಿದೆ. ಕುಮಾರ್ ಪಾರ್ಕ್ ಬಳಿ ಭಾನುವಾರ ಸಂಜೆ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದರು. ಈ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ, ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.
ಸ್ವತಃ ಸಚಿವ ಜೋಶಿಯವರೇ ಗಾಯಾಳುಗಳನ್ನು ಅಪಘಾತದ ಸ್ಥಳದಿಂದ ಮೇಲೆತ್ತಲು ಕೈಜೋಡಿಸಿದ್ದಲ್ಲದೆ, ಗಾಯಾಳುವಿಗೆ ಧೈರ್ಯ ತುಂಬುವ ಕೆಲಸ ಸಹ ಮಾಡಿದರು. ಬಳಿಕ ಗಾಯಾಳುವಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು. ಸ್ಥಳದಲ್ಲಿದ್ದ ಜನರು ಸಚಿವರ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ಕ್ರಮ: ಸಚಿವ ಕೆ.ಎನ್. ರಾಜಣ್ಣ
ಹಾಸನ: ಕೋವಿಡ್ ವ್ಯಾಕ್ಸಿನ್ಗೂ, ಹೃದಯಾಘಾತಕ್ಕೂ (Heart Attack) ಸಂಬಂಧ ಇಲ್ಲ ಎಂದು ಕಂಡುಬರುತ್ತಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಗಳು ರಾಜ್ಯಸರ್ಕಾರ ರಚಿಸಿದ ಸಮಿತಿಯ ಅಭಿಪ್ರಾಯಗಳನ್ನು ನೋಡಿದರೆ ಲಸಿಕೆಗೂ, ಹೃದಯಾಘಾತಕ್ಕೂ ಸಂಬಂಧ ಇದ್ದಂತಿಲ್ಲ, ಆದರೆ ನಿಖರ ಕಾರಣಗಳನ್ನು ಹೇಳಲು ಸಾಧ್ಯವಾಗುತ್ತಿಲ್ಲ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಲ್ಲಿ ಹೃದಯ ತಪಾಸಣೆ ನಡೆಸಲಾಗುತ್ತದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಹೃದಯಾಘಾತದ ಹೆಸರಿನಲ್ಲಿ ಭಯ ಸೃಷ್ಟಿಸಲಾಗುತ್ತಿದೆ. ಟ್ರ್ಯಾಕ್ಟರ್ನಿಂದ ಬಿದ್ದು ಮೃತಪಟ್ಟಿದ್ದರೂ ಅದನ್ನು ಹೃದಯಾಘಾತ ಎಂದು ಬೆದರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಇಂತಹ ಅಸತ್ಯಗಳು ಜನರನ್ನು ಭಯ ಬೀಳಿಸುತ್ತಿವೆ. ಜಿಲ್ಲೆಯಲ್ಲಿ 22 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಲ್ಲಿ 4 ಜನರ ಶವಗಳನ್ನು ಮಾತ್ರ ಪರೀಕ್ಷೆಗೊಳಪಡಿಸಲಾಗಿದೆ. ಅದರ ವರದಿ ಕೂಡ ಬಂದಿದೆ. ಅವರಿಗೆ ಹೃದಯಾಘಾತವಾಗಿರುವುದು ಖಚಿತವಾಗಿದೆ. ಉಳಿದ ಸಾವುಗಳು ಹೃದಯಾಘಾತದಿಂದಲೇ ಆಗಿದೆ ಎಂಬುದು ನಮ್ಮ ಊಹೆ. ಆದರೆ ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದರು.
ಮೊದಲು ಆಸ್ಪತ್ರೆಗಳಿಗೆ ಜನರೇ ಹೋಗುತ್ತಿರಲಿಲ್ಲ. ಈಗ ರಾತ್ರಿ 10 ಗಂಟೆಯಾದರೂ ಜನ ತುಂಬಿ ತುಳುಕುತ್ತಿರುತ್ತಾರೆ. ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೂ ಹೃದಯ ತಪಾಸಣೆ ವ್ಯವಸ್ಥೆ ಮಾಡಲಾಗುವುದು. ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಹೋಗುವವರನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಲ್ಲಿ ಹೃದಯ ತಪಾಸಣೆ ನಡೆಸಲಾಗುತ್ತದೆ. ಈಗ ಸಾವುಗಳಾಗಿರುವ ಪೈಕಿ 3 ಜನ ಮಾತ್ರ 50 ವರ್ಷ ಮೇಲ್ಪಟ್ಟವರಿದ್ದಾರೆ. ಉಳಿದವರು 40 ವರ್ಷ ಒಳಗಿನವರಿದ್ದಾರೆ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾರ್ವತ್ರಿಕ ತಪಾಸಣೆ ನಡೆಸಲು ಚಿಂತನೆ ನಡೆದಿದೆ ಎಂದರು.
ಹಾಸನ ಜಿಲ್ಲೆಯಂತೆ ಬೇರೆ ಜಿಲ್ಲೆಗಳಲ್ಲೂ ಹೃದಯಾಘಾತವಾಗುತ್ತಿದೆ. ಸತ್ಯ ತಿಳಿದು ವರದಿ ಮಾಡಿದರೆ ನನ್ನ ಅಭ್ಯಂತರವಿಲ್ಲ. ಆದರೆ ಸುಳ್ಳು ಮಾಹಿತಿ ಹರಡುವುದು ಸರಿಯಲ್ಲ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | Heart Attack: ಹಾಸನಕ್ಕೆ ಮತ್ತೊಂದು ಶಾಕ್; ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ
ಡಾ.ಸಿ.ಎನ್.ಮಂಜುನಾಥ್ ಹಾಗೂ ಪ್ರಸ್ತುತ ಜಯದೇವ ಸಂಸ್ಥೆಯ ನಿರ್ದೇಶಕರ ಅಭಿಪ್ರಾಯಗಳನ್ನು ನಾವು ಗಮನಿಸಿದ್ದೇವೆ. ಇದಕ್ಕೆ ಪೂರಕವಾಗಿ ಸ್ಥಳೀಯವಾಗಿ ಅಧ್ಯಯನವಾಗುತ್ತದೆ. ವರದಿ ಬಂದ ನಂತರ ನೈಜ ಕಾರಣವನ್ನು ಜನರಿಗೆ ತಿಳಿಸಲು ಸಾಧ್ಯವಾಗುತ್ತದೆ. ಅದಕ್ಕೂ ಮುನ್ನ ಕೋವಿಡ್ ಲಸಿಕೆಯಿಂದ ಹೃದಯಾಘಾತವಾಗುತ್ತಿದೆ ಎಂಬುದೂ ಸೇರಿದಂತೆ ನಾನಾ ರೀತಿಯ ವದಂತಿಗಳನ್ನು ಹರಡುತ್ತಿರುವುದು ಸರಿಯಲ್ಲ ಎಂದರು.