ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MB Patil: ಕೆಎಸ್‌ಡಿಎಲ್ ವಿರುದ್ಧ ಅಕ್ರಮ ಆರೋಪ; ಹುರುಳಿದ್ದರೆ ಶಿಕ್ಷೆ, ಇಲ್ಲದಿದ್ದರೆ ಕಾನೂನು ಕ್ರಮ ಎಂದ ಎಂ.ಬಿ ಪಾಟೀಲ್‌

ಕೆಎಸ್‌ಡಿಎಲ್‌ನಲ್ಲಿ ಸಾಮಗ್ರಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಜೆಡಿಎಸ್ ಶಾಸಕ ಎ. ಮಂಜು ಆರೋಪಿಸಿದ್ದಾರೆ. ಇದರಲ್ಲಿ ಹುರುಳಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇಲ್ಲದೆ ಹೋದರೆ ಮಂಜು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಚಿವ ಎಂ.ಬಿ. ಪಾಟೀಲ್‌ (ಸಂಗ್ರಹ ಚಿತ್ರ)

ಬೆಂಗಳೂರು, ಡಿ.5: ಸರ್ಕಾರಿ ಸ್ವಾಮ್ಯದ ಕೆಎಸ್‌ಡಿಎಲ್‌ನಲ್ಲಿ (KSDL) ಸಾಮಗ್ರಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಜೆಡಿಎಸ್ ಶಾಸಕ ಎ. ಮಂಜು (A Manju) ಆರೋಪಿಸಿದ್ದಾರೆ. ಇದರಲ್ಲಿ ಹುರುಳಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇಲ್ಲದೆ ಹೋದರೆ ಮಂಜು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ (MB Patil) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಶುಕ್ರವಾರ ಅವರು ಪ್ರತಿಕ್ರಿಯೆ ನೀಡಿದರು.

ಕೆಎಸ್‌ಡಿಎಲ್ ಸಂಸ್ಥೆಯನ್ನು ಪುನಃ ಹಿಂದಿನಂತೆ ಹಳ್ಳ ಹಿಡಿಸುವ ಪ್ರಯತ್ನ ಇದು. ಇದಕ್ಕೆ ಜಗ್ಗುವುದಿಲ್ಲ. ಶಾಸಕರು ತಮ್ಮ ಆರೋಪಗಳಿಗೆ ಪುರಾವೆ ಕೊಡಬೇಕು. ಇದಕ್ಕೆ ತಪ್ಪಿದರೆ ಅವರ ವಿರುದ್ಧ ಕ್ರಮ ನಿಶ್ಚಿತ ಎಂದು ಅವರು ಹೇಳಿದ್ದಾರೆ.

ಕೆಎಸ್‌ಡಿಎಲ್ ಹಿಂದೆ ಹೇಗಿತ್ತು, ಈಗ ಹೇಗಿದೆ ಎನ್ನುವುದು ಪ್ರಪಂಚಕ್ಕೇ ಗೊತ್ತಿದೆ. ಟೆಂಡರ್ ಇತ್ಯಾದಿಗಳಲ್ಲಿ ಸಂಪೂರ್ಣ ಪಾರದರ್ಶಕತೆ ಇದೆ. ಇದರಲ್ಲಿ ಯಾರ ಪಾತ್ರವೂ ಇರುವುದಿಲ್ಲ. ನಮ್ಮ ವ್ಯವಸ್ಥೆಯಲ್ಲಿ ಇನ್ನೂ ಒಂದಿಷ್ಟು ತಿಮಿಂಗಿಲಗಳಿವೆ. ಅವುಗಳನ್ನು ಆಚೆಗೆ ಹಾಕಲಾಗುವುದು ಎಂದು ಅವರು ತಿರುಗೇಟು ನೀಡಿದ್ದಾರೆ.

ಸಂಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಬೆಳೆಸುವುದು ನಮ್ಮ ಗುರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಪ್ರಾಕ್ಸ್ಏರ್ ಇಂಡಿಯಾದಿಂದ ರಾಜ್ಯದಲ್ಲಿ 210 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ್‌

ರಾಜ್ಯದಲ್ಲಿ 150 ಬಿಲಿಯನ್ ಡಾಲರ್ ಹೂಡಿಕೆ ಆಕರ್ಷಿಸಲು ಕ್ರಮ: ಎಂ.ಬಿ.ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ ತಯಾರಿಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ (MB Patil) ಸೂಚನೆ ನೀಡಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ವಿಸ್ತೃತ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.

ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರ್ಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯ ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದಿದ್ದಾರೆ.

ಮೊಬೈಲ್ ಫೋನ್ ಬಿಡಿಭಾಗಗಳು ಮಾತ್ರವಲ್ಲದೆ ಕೈಗಾರಿಕಾ ಎಲೆಕ್ಟ್ರಾನಿಕ್ಸ್, ಕಾರ್ಯತಂತ್ರ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಕೂಡ ಅಪಾರ ಅವಕಾಶಗಳಿವೆ. ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ಯೋಜನೆ ಮತ್ತು ಇತರ ರಾಜ್ಯಗಳಲ್ಲಿ ಇರುವ ಇಂತಹ ಯೋಜನೆಗಳ ಅಧ್ಯಯನ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಂಕಜ್ ಮಹೀಂದ್ರೂ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಸಬ್-ಅಸೆಂಬ್ಲಿ (ಡಿಸ್-ಪ್ಲೇ, ಕ್ಯಾಮೆರಾ ಮಾಡ್ಯೂಲ್ಸ್), ಬೇರ್ ಕಾಂಪೊನೆಂಟ್ಸ್ ಮತ್ತು ತಯಾರಿಕೆಗೆ ಬೇಕಾಗುವ ಸಾಧನಗಳಿಗೆ ಒತ್ತು ಕೊಡಲಾಗಿದೆ. ಇದಲ್ಲದೆ ವಹಿವಾಟನ್ನು ಆಧರಿಸಿ ಪ್ರೋತ್ಸಾಹನಾ ಭತ್ಯೆಗಳು, ಶೇಕಡ 25ರಷ್ಟು ಬಂಡವಾಳ ಸಬ್ಸಿಡಿ ಬೆಂಬಲ ಕೊಡಲಾಗುವುದು. ಈ ಯೋಜನೆಗೆ ಕೇಂದ್ರ ಸರ್ಕಾರವು 22,900 ಕೋಟಿ ರೂ. ವಿನಿಯೋಗಿಸುತ್ತಿದೆ ಎಂದು ಹೇಳಿದ್ದಾರೆ.

ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದೇ ನಮ್ಮ ಸರ್ಕಾರದ ಉದ್ದೇಶ: ಹೆಬ್ಬಾಳ್ಕರ್‌

ಕೇಂದ್ರ ಸರ್ಕಾರವು ಈ ವರ್ಷದ ನವೆಂಬರ್ ತನಕ 7,172 ಕೋಟಿ ರೂ. ಮೊತ್ತದ 17 ಹೂಡಿಕೆ ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಇದರಿಂದ 11,800 ನೇರ ಉದ್ಯೋಗಗಳು ಸೃಷ್ಟಿಯಾಗಲಿದ್ದು, 65 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಉತ್ಪನ್ನಗಳು ತಯಾರಾಗಲಿವೆ ಎಂದು ಅವರು ತಿಳಿಸಿದ್ದಾರೆ.‌ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.