ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Murder Case: ಆಟೋ ಟಚ್ ಆಗಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆ, ನಾಲ್ವರು ಅರೆಸ್ಟ್

ಆರೋಪಿ ಸೈಯದ್ ಪರ್ವೇಜ್‌ ತಂದೆಗೆ ರಹಮತ್‌ ನಗರದಲ್ಲಿ ಬುಧವಾರ ಬೆಳಿಗ್ಗೆ ಆಟೊ ಡಿಕ್ಕಿಯಾಗಿತ್ತು. ಈ ಕಾರಣಕ್ಕೆ ಪರ್ವೇಜ್‌ನ ತಂದೆ, ಆಟೊ ಚಾಲಕ ಸಲ್ಮಾನ್‌ಗೆ ಬೈದಿದ್ದರು.

ಆಟೋ ಟಚ್ ಆಗಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆ, ನಾಲ್ವರು ಅರೆಸ್ಟ್

ಹರೀಶ್‌ ಕೇರ ಹರೀಶ್‌ ಕೇರ Jan 24, 2025 7:18 AM

ಬೆಂಗಳೂರು: ಬೆಂಗಳೂರಿನಲ್ಲಿ ಆಟೋ ಟಚ್ ಆಯಿತು ಎಂಬ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ (Auto Driver) ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ಬೆಂಗಳೂರಿನ (Bengaluru Crime News) ಆರ್ ಟಿ ನಗರ ಠಾಣಾ ವ್ಯಾಪ್ತಿಯ ರೆಹಮದ್ ನಗರದಲ್ಲಿ ನಡೆದಿದೆ.

ಆಟೋ ಚಾಲಕ ಸಲ್ಮಾನ್ (27) ಕೊಲೆಯಾದವರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ರಹಮತ್‌ ನಗರದ ಸೈಯದ್ ಪರ್ವೇಜ್, ಆತನ ಸಹೋದರ ಸೈಯದ್ ತಬ್ರೇಜ್ ಮತ್ತು ಸಂಬಂಧಿಕರಾದ ಸಾದಿಕ್, ತೌಸಿಫ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಸೈಯದ್ ಪರ್ವೇಜ್‌ ತಂದೆಗೆ ರಹಮತ್‌ ನಗರದಲ್ಲಿ ಬುಧವಾರ ಬೆಳಿಗ್ಗೆ ಆಟೊ ಡಿಕ್ಕಿಯಾಗಿತ್ತು. ಈ ಕಾರಣಕ್ಕೆ ಪರ್ವೇಜ್‌ನ ತಂದೆ, ಆಟೊ ಚಾಲಕ ಸಲ್ಮಾನ್‌ಗೆ ಬೈದಿದ್ದರು. ಇದರಿಂದ ಕೋಪಗೊಂಡ ಸಲ್ಮಾನ್, ಅವರ ಮೇಲೆ ಹಲ್ಲೆ ನಡೆಸಿ ಮನೆಗೆ ತೆರಳಿದ್ದ.

ಬಳಿಕ ಬಂಧಿತ ನಾಲ್ವರು ಆರೋಪಿಗಳು ಸಲ್ಮಾನ್ ಮನೆಗೆ ತೆರಳಿ ಅಲ್ಲಿ ಸಲ್ಮಾನ್ ಜೊತೆಗೆ ಜಗಳಕ್ಕೆ ಇಳಿದಿದ್ದಾರೆ. ಗಲಾಟೆಯ ವೇಳೆ ಆಟೋ ಚಾಲಕ ಸಲ್ಮಾನ್ ಮೇಲೆ ಹಲ್ಲೆ ನಡೆಸಿದರು. ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ಸಲ್ಮಾನ್ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಲ್ಮಾನ್ ಮೃತಪಟ್ಟಿದ್ದಾನೆ. ಆರ್ ಟಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.