ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು: 10 ಉಚಿತ ಇವಿ ಆಟೋ ವಿತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಈ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಿ.ಜಿ.ಐ, ಬಿ.ಪ್ಯಾಕ್‌ ಪೀಸ್ ಆಟೋ ಯೂನಿಯನ್ ವತಿಯಿಂದ ವಿಶೇಷ ತರಬೇತಿ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಮಹಿಳೆಯರು ಚಾಲನಾ ಪರವಾನಗಿ ಹೊಂದಿದ್ದು, ಎಲೆಕ್ಟ್ರಿಕ್ ಆಟೋಗಳನ್ನು ಸುರಕ್ಷಿತವಾಗಿ ಹಾಗೂ ವೃತ್ತಿಪರ ರೀತಿಯಲ್ಲಿ ಚಾಲನೆ ಮಾಡಲು ಅಗತ್ಯ ಕೌಶಲ್ಯಗಳನ್ನು ಪಡೆದುಕೊಂಡಿದ್ದಾರೆ.

10 ಉಚಿತ ಇವಿ ಆಟೋ ವಿತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

-

Profile
Ashok Nayak May 22, 2026 5:48 PM

ಬೆಂಗಳೂರು: ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಹಸಿರು ನಗರ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿ, ರಾಜ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ( Ramalinga Reddy) ಕೋರಮಂಗಲ ಕಚೇರಿಯಲ್ಲಿ ವೈಯಕ್ತಿಕವಾಗಿ ಮಹಿಳೆಯರು ಹಾಗೂ ಮಂಗಳಮುಖಿ ಯರಿಗೆ ಉಚಿತ 10 ಎಲೆಕ್ಟ್ರಿಕ್ ವಾಹನ (ಇವಿ) ಆಟೋಗಳನ್ನು ವಿತರಿಸಿದರು.

ಈ ಕುರಿತು ಮಾತನಾಡಿದ ಅವರು, ಸ್ವಾವಲಂಬಿ, ಗೌರವಯುತ ಹಾಗೂ ಆರ್ಥಿಕವಾಗಿ ಸ್ವತಂತ್ರ ಜೀವನ ನಡೆಸಲು ಆಶಿಸುವ ಮಹಿಳೆಯರಿಗೆ ನನ್ನ ವೈಯಕ್ತಿಕ ವೆಚ್ಚದಲ್ಲಿ ಇವಿ ಆಟೋಗಳನ್ನು ಉಚಿತವಾಗಿ ನೀಡಿರುವುದು ಸಂತೃಪ್ತಿ ತಂದಿದೆ. ಪರಿಸರ ಸ್ನೇಹಿ ಸ್ವಯಂ ಉದ್ಯೋಗದ ಮೂಲಕ ಶಾಶ್ವತ ಜೀವನೋಪಾಯ ಒದಗಿಸುವ ಉದ್ದೇಶದೊಂದಿಗೆ ಮಹಿಳೆಯರು ಹಾಗೂ ಮಂಗಳಮುಖಿ ಯರಿಗೆ ಉಚಿತ ವಾಹನ ವ್ಯವಸ್ಥೆ ಮಾಡಿದ್ದು, ಈ ಮೂಲಕ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ. ಎಲ್ಲಾ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಜೀವನ ನಡೆಸುವುದು ಉತ್ತಮ ಹೆಜ್ಜೆ ಎಂದು ಹೇಳಿದರು.

ಇದನ್ನೂ ಓದಿ: Minister Ramalinga Reddy: ಬಿಜೆಪಿ ನಾಯಕರಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ: ಸಾರಿಗೆ ಸಚಿವ ವಾಗ್ದಾಳಿ

ಈ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಿ.ಜಿ.ಐ, ಬಿ.ಪ್ಯಾಕ್‌ ಪೀಸ್ ಆಟೋ ಯೂನಿಯನ್ ವತಿಯಿಂದ ವಿಶೇಷ ತರಬೇತಿ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಮಹಿಳೆಯರು ಚಾಲನಾ ಪರವಾನಗಿ ಹೊಂದಿದ್ದು, ಎಲೆಕ್ಟ್ರಿಕ್ ಆಟೋಗಳನ್ನು ಸುರಕ್ಷಿತವಾಗಿ ಹಾಗೂ ವೃತ್ತಿಪರ ರೀತಿಯಲ್ಲಿ ಚಾಲನೆ ಮಾಡಲು ಅಗತ್ಯ ಕೌಶಲ್ಯಗಳನ್ನು ಪಡೆದುಕೊಂಡಿದ್ದಾರೆ.

ಯೋಜನೆಯಲ್ಲಿ ವಿಧವೆಯರು, ಏಕಪೋಷಕ ಮಹಿಳೆಯರು ಹಾಗೂ ಕುಟುಂಬದ ಬೆಂಬಲವಿಲ್ಲದ ಮಹಿಳೆಯರು ಹಾಗೂ ಮಂಗಳ ಮುಖಿಯರಿಗೆ ಆದ್ಯತೆ ನೀಡಲಾಗಿದ್ದು, ಅವರ ಆರ್ಥಿಕ ಸ್ವಾವ ಲಂಬನೆ ಮತ್ತು ಸಾಮಾಜಿಕ ಗೌರವವನ್ನು ಬಲಪಡಿಸುವತ್ತ ಗಮನ ಹರಿಸಲಾಗಿದೆ.

ಈ ಕಾರ್ಯಕ್ರಮವು ಮಹಿಳಾ ಸಬಲೀಕರಣ, ಪರಿಸರ ಸ್ನೇಹಿ ಸಾರಿಗೆ ಮತ್ತು ಮಹಿಳೆಯರಿಗೆ ಶಾಶ್ವತ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಕರ್ನಾಟಕ ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ.

ಆಟೋ ವಿತರಣಾ ಕಾರ್ಯಕ್ರಮದಲ್ಲಿ ಪೀಸ್ ಆಟೋ ರಾಜ್ಯಾಧ್ಯಕ್ಷ ರಘು ನಾರಾಯಣ ಗೌಡ, ಬಿ.ಪ್ಯಾಕ್‌ ಕಾರ್ಯಕ್ರಮ ಮುಖ್ಯಸ್ಥರಾದ ರಾಘವೇಂದ್ರ ಪೂಜಾರಿ ಹೆಚ್‌.ಎಸ್‌. ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.