ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಆಕ್ರೋಶ; ಆಗಸ್ಟ್‌ 13ಕ್ಕೆ ಕರ್ನಾಟಕ ಬಂದ್‌

Karnataka Bandh: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕ್ರಮದ ವಿರುದ್ಧ ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಹಲವು ಸಂಘಟನೆಗಳು ನಡೆಸಿದ ಸಭೆಯಲ್ಲಿ ಕರ್ನಾಟಕ ಬಂದ್​ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿವೆ. ಆಗಸ್ಟ್​ 13 ರಂದು ಕರ್ನಾಟಕ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ನೀಡಿದ್ದಾರೆ.

ಆಗಸ್ಟ್‌ 13ಕ್ಕೆ ಕರ್ನಾಟಕ ಬಂದ್‌

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 31, 2026 1:29 PM

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕ್ರಮದ ವಿರುದ್ಧ ಕರ್ನಾಟಕ ಬಂದ್ (Karnataka Bandh) ಮಾಡಲು ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಹಲವು ಸಂಘಟನೆಗಳು ನಡೆಸಿದ ಸಭೆಯಲ್ಲಿ ಕರ್ನಾಟಕ ಬಂದ್​ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿವೆ. ಆಗಸ್ಟ್​ 13 ರಂದು ಕರ್ನಾಟಕ ಬಂದ್​​ಗೆ ವಾಟಾಳ್​ ನಾಗರಾಜ್ ( Vatal Nagaraj)​ ಕರೆ ನೀಡಿದ್ದಾರೆ. ಸಭೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ, ಶಿವರಾಮೇಗೌಡ, ಸಾರಾ ಗೋವಿಂದು, ಕೆಆರ್ ಕುಮಾರ್, ರೈತ ಪರ ಸಂಘಟನೆಗಳು ಭಾಗಿಯಾಗಿದ್ದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಹೋರಾಟಗಾರರು ಆಗಸ್ಟ್​ 13ರಂದು ಕರ್ನಾಟಕ ಬಂದ್​​​ ಮಾಡುವುದಾಗಿ ಘೋಷಿಸಿದ್ದಾರೆ.

ಜುಲೈ 28 ರಂದು CWRC ಸಭೆಯಲ್ಲಿ ಕರ್ನಾಟಕದಿಂದ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರನ್ನು ಹರಿಸಬೇಕೆಂದು ಆದೇಶ ಹೊರಡಿಸಿತ್ತು, ಅಂದರೆ ಇದು ಸುಮಾರು 4 ಟಿಎಂಸಿ ನೀರಿಗೆ ಸಮವಾಗಿದೆ. ಆದೇಶದ ಪ್ರಕಾರ, ಜುಲೈ 29 ರಿಂದ ಇದು ಜಾರಿಯಾಬೇಕಿತ್ತು. ಆದರೆ ಕರ್ನಾಟಕ ಈ ಆದೇಶವನ್ನು ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಅರ್ಜಿ ಸಲ್ಲಿಸಿತ್ತು. ಆದರೆ ಗುರುವಾರ (ಜುಲೈ 30) ದೆಹಲಿಯಲ್ಲಿ ನಡೆದ CWMA ಸಭೆಯಲ್ಲಿ ಈ ವಾದವನ್ನು ತಿರಸ್ಕರಿಸಿ, CWRC ಆದೇಶವನ್ನು ಎತ್ತಿಹಿಡಿದಿದೆ.

ಈ ನಿಟ್ಟಿನಲ್ಲಿ ಕನ್ನಡ ಪರ ಹೋರಾಟಗಾರರು ಬಂದ್‌ಗೆ ಕರೆ ನೀಡಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ಇರಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ರ್ಯಾಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಇನ್ನು ಲಾರಿ ಮಾಲೀಕರ ಸಂಘ, ವಕೀಲರ ಸಂಘ, ಒಲಾ-ಊಬರ್ ಹಾಗೂ ಆಟೋ ಚಾಲಕರ ಸಂಘ, ಹೋಟೆಲ್ ಮಾಲೀಕರ ಸಂಘಗಳು ಬಂದ್‌ಗೆ ಸಾಥ್ ನೀಡಲಿದೆ.

ಕಾವೇರಿ ಜಲ ವಿವಾದ; ರೈತರ ಹೋರಾಟಕ್ಕೆ ಸಾಥ್ ನೀಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧಾರ

ಕಾವೇರಿ ನೀರು ವಿವಾದ ಸರ್ವ ಪಕ್ಷ ಸಭೆ:

ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2)ರಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.