ಬೆಂಗಳೂರು: ಬೆಂಗಳೂರಿನಲ್ಲಿರುವ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸುವ ವಿಧೇಯಕಕ್ಕೆ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಈ ಬೆನ್ನಲ್ಲೇ ರಾಜ್ಯ ಸರಕಾರ ವಿಧೇಯಕವನ್ನು ಹಿಂಪಡೆದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ವಿಧೇಯಕದ ಸಾಧಕ- ಬಾಧಕವನ್ನು ಸಾರ್ವಜನಿಕ ವಲಯದಲ್ಲಿ ಚರ್ಚಿಸಿ, ತಿದ್ದುಪಡಿ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.
ಸರಕಾರದ ಈ ತೀರ್ಮಾನವನ್ನು ಬಿಜೆಪಿ ತನ್ನ ಹೋರಾಟದ ಫಲವೆನ್ನುತ್ತಿದ್ದು, ಸಾರ್ವಜನಿಕರು ಹಾಗೂ ಪರಿಸರ ತಜ್ಞರು ಸರಕಾರದ ನಡೆಯನ್ನು ಸ್ವಾಗತಿಸಿದ್ದಾರೆ.
ಇದನ್ನೂ ಓದಿ: G Parameshwar: ಬಾಬಾಸಾಹೇಬರ ದೂರದೃಷ್ಟಿಯ ಚಿಂತನೆಗಳು ದೇಶದ ಪ್ರಗತಿಗೆ ಬುನಾದಿ: ಡಿಸಿಎಂ ಡಾ.ಜಿ.ಪರಮೇಶ್ವರ
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ(DCM Dr G Parameshwar), ಸಾರ್ವ ಜನಿಕರ ಹಿತಾಸಕ್ತಿ ಮತ್ತು ಅಭಿಪ್ರಾಯಕ್ಕೆ ಸರಕಾರ ಬದ್ಧವಾಗಿರುತ್ತದೆ. ಉದ್ಯಾನವನಗಳ ತಿದ್ದುಪಡಿ ವಿಧೇಯಕದ ಬಗ್ಗೆ ಸಾರ್ವಜನಿಕರಿಂದ ಹಾಗೂ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾ ಗಿತ್ತು. ಈ ಹಿನ್ನೆಲೆ ಯಲ್ಲಿ ಸಂಪುಟ ಸಭೆಯಲ್ಲಿ ಚರ್ಚಿಸಿ, ಸದ್ಯಕ್ಕೆ ಈ ವಿಧೇಯಕವನ್ನು ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಹಿಂದೆ ಸದನ ದಲ್ಲಿ ಈ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳು ಬಿಟ್ಟಿರಲಿಲ್ಲ. ವಿಧೇಯಕಕ್ಕೆ ಉಭಯ ಸದನದಲ್ಲಿ ಅನುಮೋದನೆ ನೀಡಲಾಗಿತ್ತು.
ಏನಿದು ವಿವಾದ?
ಬೆಂಗಳೂರಿನಲ್ಲಿರುವ ಸರಕಾರಿ ಪಾರ್ಕ್ನ ಶೇ.5ರಷ್ಟು ಭೂಮಿಯನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಸಿಕೊಳ್ಳಲು ಕಳೆದ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗಿತ್ತು. ಈ ವಿಧೇಯಕದ ವಿರುದ್ಧ ಬಿಜೆಪಿ, ಜೆಡಿಎಸ್ನಿಂದ ರಾಜ್ಯಪಾಲರಿಗೆ ಅಧಿಕೃತ ದೂರು ಸಲ್ಲಿಕೆ ಯಾಗಿತ್ತು. ಈ ಎಲ್ಲ ಬೆಳವಣಿಗೆ ಗಳ ಹಿನ್ನೆಲೆಯಲ್ಲಿ ಸರಕಾರವು ವಿಧೇಯಕವನ್ನು ವಾಪಸ್ ಪಡೆದು, ಸಾರ್ವಜನಿಕರ ಅಭಿಪ್ರಾಯ ವನ್ನು ಸಂಗ್ರಹಿಸಿದ ಬಳಿಕ ಅಗತ್ಯ ಬದಲಾವಣೆಗಳನ್ನು ಮಾಡಿ ಹೊಸದಾಗಿ ಮಂಡಿಸಲು ಮುಂದಾಗಿದೆ. ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯಲು ಸರಕಾರ ಮುಂದಾಗಿದೆ.
![]()
ಪಾರ್ಕ್ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಅಭಿಯಾನ ಮಾಡುವುದಾಗಿ ಬಿಜೆಪಿ ವತಿಯಿಂದ ಘೋಷಣೆ ಮಾಡಲಾಗಿತ್ತು. ಈಗ ರಾಜ್ಯ ಕಾಂಗ್ರೆಸ್ ಸರಕಾರ ಉದ್ಯಾನಗಳಲ್ಲಿ ಶೇ.5ರಷ್ಟು ಭೂಮಿ ಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿದೆ. ಈ ಮೂಲಕ, ಒಂದೇ ತಿಂಗಳಲ್ಲಿ ಬಿಜೆಪಿಗೆ ಎರಡು ಜಯ ಸಿಕ್ಕಿದೆ.
-ಆರ್.ಅಶೋಕ್, ಪ್ರತಿಪಕ್ಷ ನಾಯಕ