ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Legislative Council: ವಿಧಾನ ಪರಿಷತ್‌ಗೆ ನಾಮ ನಿರ್ದೇಶನ; ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರ ಹೆಸರು ಫೈನಲ್‌

Karnataka Legislative Council: ಈ ಹಿಂದಿನ ಪಟ್ಟಿಯಲ್ಲಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಡಿ.ಜಿ.ಸಾಗರ್ ಹೆಸರಿತ್ತು. ಆದರೆ, ಇದಕ್ಕೆ ರಾಜ್ಯ ಕಾಂಗ್ರೆಸ್​​ನ ಕೆಲ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಇಬ್ಬರನ್ನು ಪಟ್ಟಿಯಿಂದ ಹೈಕಮಾಂಡ್ ಕೈಬಿಟ್ಟಿದೆ. ಇದೀಗ ಪರಿಷ್ಕೃತ ನಾಲ್ವರು ಅಭ್ಯರ್ಥಿಗಳ ನಾಮನಿರ್ದೇಶನ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಬೆಂಗಳೂರು: ವಿಧಾನ ಪರಿಷತ್‌ಗೆ (Karnataka Legislative Council) ಯಾರು ನಾಮನಿರ್ದೇಶನಗೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ವಿಧಾನ ಪರಿಷತ್​ಗೆ ನಾಲ್ಕು ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಂತಿಮಗೊಳಿಸಿದ್ದು, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಎನ್ಆರ್​ಐ ಸೆಲ್ ಮುಖ್ಯಸ್ಥೆ ಆರತಿ ಕೃಷ್ಣ, ಹುಬ್ಬಳ್ಳಿ ಧಾರವಾಡ ದಲಿತ ಮುಖಂಡ ಜಕ್ಕಪ್ಪನವರ್ ಹಾಗೂ ಮೈಸೂರು ಮೂಲದ ಪತ್ರಕರ್ತ ಶಿವಕುಮಾರ್ ಹೆಸರು ಫೈನಲ್‌ ಆಗಿದೆ ಎಂದು ತಿಳಿದುಬಂದಿದೆ.

ಈ ಹಿಂದಿನ ಪಟ್ಟಿಯಲ್ಲಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಡಿ.ಜಿ.ಸಾಗರ್ ಹೆಸರಿತ್ತು. ಆದರೆ, ಇದಕ್ಕೆ ರಾಜ್ಯ ಕಾಂಗ್ರೆಸ್​​ನ ಕೆಲ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಇಬ್ಬರನ್ನು ಪಟ್ಟಿಯಿಂದ ಹೈಕಮಾಂಡ್ ಕೈಬಿಟ್ಟಿದೆ. ಇದೀಗ ಪರಿಷ್ಕೃತ ನಾಲ್ವರು ಅಭ್ಯರ್ಥಿಗಳ ನಾಮನಿರ್ದೇಶನ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ | CM Siddaramaiah: ಎಸ್‌ಸಿ-ಎಸ್‌ಟಿ ಜನರ ಮೇಲಿನ ದೌರ್ಜನ್ಯ ಪ್ರಕರಣ; 60 ದಿನದೊಳಗೆ ಆರೋಪ ಪಟ್ಟಿ ಸಲ್ಲಿಸಲು ಸಿಎಂ ಸೂಚನೆ

ಯು.ಬಿ.ವೆಂಕಟೇಶ್‌, ಪ್ರಕಾಶ್ ರಾಥೋಡ್, ಕೆ.ಎ.ತಿಪ್ಪೇಸ್ವಾಮಿ, ಸಿ.ಪಿ.ಯೋಗೇಶ್ವರ ತೆರವಾದ ಸ್ಥಾನಕ್ಕೆ ಹೊಸ ನಾಲ್ವರು ಅಭ್ಯರ್ಥಿಗಳನ್ನು ನಾಮನಿರ್ದೇಶಿಸಲು ಕಾಂಗ್ರೆಸ್‌ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ.