Shiva Rajkumar: ಕ್ಯಾನ್ಸರ್ ಗೆದ್ದ ಶಿವಣ್ಣ ಕರುನಾಡಿಗೆ ಆಗಮನ; ಫ್ಯಾನ್ಸ್ ಫುಲ್ ಖುಷ್
ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಇದೀಗ ಸಂಪೂರ್ಣವಾಗಿ ಗುಣಮುಖರಾಗಿರುವ ಶಿವಣ್ಣ ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ.

Shiva rajkumar

ಬೆಂಗಳೂರು: ಶಸ್ತ್ರ ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(Shiva Rajkumar) ಅವರು ಇಂದು ಬೆಳಗ್ಗೆ ಕರುನಾಡಿಗೆ ಆಗಮಿಸಿದ್ದಾರೆ. ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಇದೀಗ ಸಂಪೂರ್ಣವಾಗಿ ಗುಣಮುಖರಾಗಿರುವ ಶಿವಣ್ಣ ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ.
ಇನ್ನು ನೆಚ್ಚಿನ ನಟ ಏರ್ಪೋರ್ಟ್ಗೆ ಬಂದಿಳಿಯುತ್ತಿದ್ದಂತೆ ಅವರನ್ನು ಸ್ವಾಗತಿಸಲು ಅಭಿಮಾನಿಗಳ ದಂಡೇ ಆಗಮಿಸಿತ್ತು. ಅಷ್ಟೇ ಅಲ್ಲದೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸಿ ಶಿವಣ್ಣನನ್ನು ಬರ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಕೈಯಲ್ಲಿ ಹಾರಗಳನ್ನು ಹಿಡಿದುಕೊಂಡು ಸ್ವಾಗತಕ್ಕೆ ಜಮಾಯಿಸಿದ್ದರು.
ಈ ಸುದ್ದಿಯನ್ನೂ ಓದಿ: Geetha Shivarajkumar: ನೀಮೋ ಸದಾ ನಮ್ಮೊಳಗಿದ್ದಾನೆ; ಮುದ್ದಿನ ಶ್ವಾನವನ್ನು ನೆನೆದು ಗೀತಾ ಶಿವರಾಜ್ಕುಮಾರ್ ಭಾವುಕ ಪತ್ರ
ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಈಗಾಗಲೇ ಬೆಂಗಳೂರಿಗೆ ಬರುವ ಕುರಿತು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮನ್ನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವ ದಿನ ಬೆಂಗಳೂರಿಗೆ ಬರುತ್ತಿದ್ದೇನೆ. ನಿಮ್ಮ ಆಶೀರ್ವಾದ ಹೀಗೇ ಇರಲಿ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಹೇಳಿಕೊಂಡಿದ್ದರು.
ಇನ್ನು ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆಗೆ, ಸ್ವಾಗತಕ್ಕೆ ಅವಕಾಶವಿಲ್ಲ. ಈ ಕಾರಣದಿಂದ ಅಭಿಮಮಾನಿಗಳು ಸಾದಹಳ್ಳಿ ಟೋಲ್ ಬಳಿ ಅದ್ಧೂರಿ ಸ್ವಾಗತಕ್ಕೆ ಮುಂದಾಗಿದ್ದಾರೆ. ಮೂತ್ರ ಕೋಶದ ಕ್ಯಾನ್ಸರ್ ಸಂಬಂಧ ಶಿವರಾಜ್ ಕುಮಾರ್ ಡಿಸೆಂಬರ್ 18 ರಂದು ಬೆಂಳೂರಿನಿಂದ ಅಮೆರಿಕಕ್ಕೆ ಪ್ರಯಾಣ ಮಾಡಿದ್ದರು. ಡಿಸೆಂಬರ್ 24ರಂದು ಶಿವರಾಜ್ ಕುಮಾರ್ಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆರೋಗ್ಯ ಸಂಬಂಧ ಶಿವರಾಜ್ ಕುಮಾರ್ 6 ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.