ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Siddaraju swamiji: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ?; ಪಾಲನಹಳ್ಳಿ ಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ!

Karnataka Politics: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಮಾಗಡಿ ತಾಲೂಕಿನ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ?; ಸಿದ್ದರಾಜು ಸ್ವಾಮೀಜಿ ಸ್ಫೋಟಕ ಭವಿಷ್ಯ!

-

Prabhakara R Prabhakara R Sep 6, 2025 9:47 PM

ಬೆಂಗಳೂರು: ಸಿಎಂ ಸಿದ್ದರಾಮಯಯ್ಯ ಅವರು ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಸುದ್ದಿಗಳು ಕೇಳಿಬರುತ್ತಿವೆ. ಈ ನಡುವೆ ಇದೀಗ ಮಾಗಡಿ ತಾಲೂಕಿನ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ (Siddaraju swamiji), ರಾಜ್ಯ ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆಯೂ ಶ್ರೀ ಸಿದ್ದರಾಜು ಸ್ವಾಮೀಜಿ ಮಾತನಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ 'ಬಂಡೆ'ಗಿಂತ ಭದ್ರವಾಗಿದೆ ಎಂದು ಹೇಳುವ ಮೂಲಕ ಈ ಅವಧಿಯಲ್ಲಿ ಸಿಎಂ ಬದಲಾವಣೆ ಆಗಲ್ಲ ಎಂದು ಸುಳಿವು ನೀಡಿದ್ದಾರೆ. ಅಕ್ಟೋಬರ್ 28ರ ನಂತರ ರಾಜ್ಯ ರಾಜಕಾರಣದಲ್ಲಿ ಸಂಘರ್ಷ ಏರ್ಪಡಲಿದ್ದು, ಫೆಬ್ರವರಿಯಲ್ಲಿ ಇದೆಲ್ಲವೂ ಅಂತ್ಯವಾಗಲಿದೆ ಎಂದು ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಏನೇ ತಿಕ್ಕಾಟವಾದರೂ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ನಾಡದೊರೆಗೆ ಯಾವುದೇ ಕಂಟಕ ಇಲ್ಲ. ಯಾವುದೇ ಪ್ರಭಾವಿ ನಾಯಕರು ಸಿಎಂ ಕುರ್ಚಿ ಕಸಿದುಕೊಳ್ಳಲು ಪ್ರಯತ್ನಿಸಿದರೂ ಅದು ಫಲಪ್ರದವಾಗಲ್ಲ. ಇದೆಲ್ಲವೂ ಕಾಲಚಕ್ರ ಎಂದು ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು ಸ್ವಾಮೀಜಿಗಳು ಹೇಳಿದ್ದಾರೆ.

ಗ್ರಹಗತಿ ಆಧಾರದ ಮೇಲೆ ಪ್ರಾಚೀನರು ಈ ಕಾಲಚಕ್ರವನ್ನು ಅನ್ವೇಷಿಸಿದ್ದಾರೆ. ಈ ಕಾಲಚಕ್ರ ಮನುಷ್ಯನ ಸುಖ-ದುಃಖ, ಪ್ರವಾಹ, ಪ್ರಕೃತಿ ವಿಕೋಪ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಭವಿಷ್ಯವನ್ನು ಹೇಳುತ್ತದೆ. ಈ ಸಂವತ್ಸರ ಹಲವು ವೈಶಿಷ್ಟ್ಯಗಳಿಂದ ಕೂಡಿದ್ದು, ರಾಶಿಯ ಸಂಕೇತದಂತೆ ಅಧಿಕಾರದ ವ್ಯತ್ಯಾಸಗಳಾಗುತ್ತವೆ ಎಂದಿದ್ದಾರೆ.