ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸೌರಭ 2026; ನಾಗಾರ್ಜುನ ಡಿಗ್ರಿ ಕಾಲೇಜಿಗೆ ಡಾ.ರಾಜಕುಮಾರ್ ಸರ್ವೋತ್ತಮ ಕಾಲೇಜು ಪರ್ಯಾಯ ಪಾರಿತೋಷಕ

Sourabha 2026: ರಂಗ ಸೌರಭದಿಂದ ಆಯೋಜಿಸಿದ್ದ ಸೌರಭ 2026; ರಾಜ್ಯಮಟ್ಟದ ಅಂತರ ಕಾಲೇಜು ರಂಗ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ಸಂಸ ಬಯಲು ರಂಗ ಮಂದಿರದಲ್ಲಿ ಶನಿವಾರ ನೆರವೇರಿತು.

ಸೌರಭ 2026 ಅಂತರ ಕಾಲೇಜು ರಂಗಸ್ಪರ್ಧೆಗಳ ಸಮಾರೋಪ ಸಮಾರಂಭ.

ಬೆಂಗಳೂರು: ಸೌರಭ 2026 – ರಾಜ್ಯಮಟ್ಟದ ಅಂತರ ಕಾಲೇಜು ರಂಗಸ್ಪರ್ಧೆಗಳು ಫೆಬ್ರವರಿ 11ರಿಂದ 28ವರೆಗೆ ಯಶಸ್ವಿಯಾಗಿ ನೆರವೇರಿದ್ದು, ಕಾರ್ಯಕ್ರಮದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭವು ನಗರದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ಶನಿವಾರ ಜರುಗಿತು.

_Sourabha 2026

ಕಾರ್ಯಕ್ರಮವನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾ ಮನೋಭಾವವನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಚಲನಚಿತ್ರ ನಟರಾದ ವಿಜಯ ರಾಘವೇಂದ್ರ, ಅರುಣ್ ಸಾಗರ್, ನಿರಂಜನ ದೇಶಪಾಂಡೆ, ಸುಜಯ್ ಶಾಸ್ತ್ರಿ ಮುಂತಾದವರು ಪಾಲ್ಗೊಂಡಿದ್ದರು. ನಾಗಾರ್ಜುನ ಡಿಗ್ರಿ ಕಾಲೇಜು ಈ ಸಾಲಿನ ಪದ್ಮಭೂಷಣ ಡಾಕ್ಟರ್ ರಾಜಕುಮಾರ್ ಸರ್ವೋತ್ತಮ ಕಾಲೇಜು ಪರ್ಯಾಯ ಪಾರಿತೋಷಕವನ್ನು ಗೆದ್ದುಕೊಂಡಿತು.