ಬೆಂಗಳೂರು, ನ.28: ರಾಷ್ಟ್ರೋತ್ಥಾನ ಸಾಹಿತ್ಯ (Rashtrotthana Sahitya) ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬದಲ್ಲಿ (Kannada Pustaka Habba) ನವೆಂಬರ್ 29 ರಂದು ಹಾಗೂ 30ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ನಗರದಲ್ಲಿರುವ ರಾಷ್ಟ್ರೋತ್ಥಾನ ಪರಿಷತ್ನ ಕೇಶವಶಿಲ್ಪ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ (Special Lecture Programme) ಹಮ್ಮಿಕೊಳ್ಳಲಾಗಿದೆ.
ನ.29 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯವಾಹ ಡಾ. ಎಂ. ಜಯಪ್ರಕಾಶ್ ಅವರಿಂದ ‘ಸುಭದ್ರ ಬದುಕು-ಸದೃಢ ದೇಶಕ್ಕಾಗಿ ಪಂಚ ಪರಿವರ್ತನೆʼ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಇರಲಿದೆ.
ನ.30ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಲೇಖಕ, ಅಂಕಣಕಾರ, ವಾಗ್ಮಿ, ಸಂಘಟಕರು ಆಗಿರುವ ಚಕ್ರವರ್ತಿ ಸೂಲಿಬೆಲೆ ಅವರಿಂದ ʼತಾಯೇ ವಂದಿಸುವೆʼ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನಲ್ಲಿ ಡಿ.25ರಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ
ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ
ಕನ್ನಡ ಪುಸ್ತಕ ಹಬ್ಬದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನ.29ರಂದು ಶನಿವಾರ ಸಂಜೆ 6 ಗಂಟೆಗೆ ನಾಗಚಂದ್ರಿಕಾ ಭಟ್ ಹಾಗೂ ತಂಡದವರಿಂದ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ನ.30ರಂದು ಭಾನುವಾರ ಸಂಜೆ 6 ಗಂಟೆಗೆ ವಿದ್ವಾನ್ ಪ್ರಕಾಶ್ ಹೆಗ್ಡೆ ಕಲ್ಲಾರೆಮನೆ ಹಾಗೂ ತಂಡದವರಿಂದ ವಾದ್ಯಗೋಷ್ಠಿ ನಡೆಯಲಿದೆ.