ಬೆಂಗಳೂರು: ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ 'ಧರ್ಮಸ್ಥಳದ ಮೇಲಿನ ಷಡ್ಯಂತ್ರ; ಸತ್ಯ-ಮಿಥ್ಯಗಳ ಅನಾವರಣʼ ವಿಚಾರಗೋಷ್ಠಿಯನ್ನು ಆಗಸ್ಟ್ 18ರಂದು ಮಧ್ಯಾಹ್ನ 3:30ಕ್ಕೆ ನಗರದ ಟೌನ್ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಚಾರಗೋಷ್ಠಿಯಲ್ಲಿ ಬಿಜೆಪಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ವಿಶ್ವವಾಣಿಯ ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಸಾಮಾಜಿಕ ಹೋರಾಟಗಾರ ವಸಂತ್ ಗಿಳಿಯಾರ್, ಬರಹಗಾರ, ಬಿಜೆಪಿ ಮುಖಂಡ ವಿಕಾಸ್ ಪುತ್ತೂರು, ಪತ್ರಕರ್ತ ಕೀರ್ತಿ ಶಂಕರಘಟ್ಟ, ಸಾಮಾಜಿಕ ಕಾರ್ಯಕರ್ತ, ವಕೀಲ ಗಿರೀಶ್ ಭಾರಧ್ವಾಜ್, ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು, ಪತ್ರಕರ್ತರು, ಚಿಂತಕರು, ಬರಹಗಾರರು ಮುಂತಾದವರು ಭಾಗವಹಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ | CT Ravi: ಧರ್ಮಸ್ಥಳ ಕುರಿತ ಷಡ್ಯಂತ್ರ ಬಹಿರಂಗಪಡಿಸಿ: ಸಿಎಂ, ಡಿಸಿಎಂಗೆ ಸಿಟಿ ರವಿ ಆಗ್ರಹ