Dharmasthala Case: ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್
DK Shivakumar: ಧರ್ಮಸ್ಥಳ ಪ್ರಕರಣದ ಎನ್ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ಆರೋಪಿಸಿದ್ದಾರೆ.

-

ಬೆಂಗಳೂರು, ಸೆ.01: “ಪ್ರಸ್ತುತ ಎಸ್ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ, ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (Dharmasthala Case) ಅವರು ತಿರುಗೇಟು ನೀಡಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ಎನ್ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು.
ಈ ಸುದ್ದಿಯನ್ನೂ ಓದಿ | Dharmasthala Chalo: ಸೌಜನ್ಯಾ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ; ನ್ಯಾಯಕ್ಕಾಗಿ ತಾಯಿ ಕುಸುಮಾವತಿ ಕಣ್ಣೀರು
ಧರ್ಮಸ್ಥಳ ವಿರುದ್ಧ ಪಿತೂರಿ ಕುರಿತು ಎನ್ಐಎ ತನಿಖೆಯಾಗಲಿ: ಬಿ.ವೈ. ವಿಜಯೇಂದ್ರ ಒತ್ತಾಯ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ನಿಮ್ಮ ಎಸ್ಐಟಿ ತನಿಖೆ ನಡೆಯಲಿ. ಆದರೆ, ದೇಶ ದ್ರೋಹಿಗಳು ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹೊರ ದೇಶಗಳಿಂದಲೂ ಕೋಟಿ ಕೋಟಿ ಪಡೆದು ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದರ ಹಿಂದಿರುವ ಕೈಗಳನ್ನು ಹತ್ತಿಕ್ಕುವ ಕೆಲಸವಾಗಬೇಕೆಂದರೆ ಕಾಂಗ್ರೆಸ್ ಸರ್ಕಾರದಿಂದ ಆಗಲ್ಲ, ಈ ಪ್ರಕರಣವನ್ನು ಸಿಬಿಐ ಅಥವಾ ಎನ್ಐಎ ತನಿಖೆಗೆ ವಹಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.
ಧರ್ಮಸ್ಥಳದಲ್ಲಿ ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಧರ್ಮಸ್ಥಳ ಚಲೋ ಬೃಹತ್ ಸಮಾವೇಶದಲ್ಲಿ (Dharmasthala Chalo) ಅವರು ಮಾತನಾಡಿದ್ದಾರೆ. ಬಿಜೆಪಿ ರಾಜಕೀಯ ಕಾರಣಕ್ಕೆ ಧರ್ಮಸ್ಥಳ ಚಲೋ ನಡೆಸುತ್ತಿದ್ದಾರೆ ಎಂದು ಕೆಲವರು ಟೀಕೆ ಮಾಡಿದರು. ಆದರೆ, ನಾನು ಸ್ಪಷ್ಟಪಡಿಸುವುದು ಏನೆಂದರೆ ಸಮಾವೇಶಕ್ಕೆ ಬಂದವರು, ಸ್ವಾಭಿಮಾನಿ ಹಿಂದೂ ಕಾರ್ಯಕರ್ತರು ಬಂದಿದ್ದಾರೆ ವಿನಾ, ಯಾರಿಗೂ ದುಡ್ಡು ಕೊಟ್ಟು ಕರೆಸುವ ಕೆಲಸ ಮಾಡಿಲ್ಲ.
ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ಅವಮಾನ ಮಾಡುವ ಸರ್ಕಾರವಿದೆ. ಹಿಂದೂಗಳ ಪವಿತ್ರ ಕ್ಷೇತ್ರಕ್ಕೆ ಅಪಚಾರ ಎಸಗುತ್ತಿರುವವರಿಗೆ ಪಾಠ ಕಲಿಸಬೇಕು. ಕ್ಷೇತ್ರದ ಬಗ್ಗೆ ದಿನನಿತ್ಯ ಅಪಪ್ರಚಾರ ನಡೆಯುತ್ತಿದೆ ಎಂದು ಕಿಡಿಕಾರಿದರು.