ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Saalumarada Thimmakka: ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆದ ಸಾಲುಮರದ ತಿಮ್ಮಕ್ಕ ಅಂತ್ಯ ಸಂಸ್ಕಾರ

Saalumarada Thimmakka funeral: ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸಾಲು ಮರದ ತಿಮ್ಮಕ್ಕ ಅವರ ಅಂತ್ಯ ಸಂಸ್ಕಾರ ಶನಿವಾರ ನೆರವೇರಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರು ಚಿಕಿತ್ಸೆ ಫಲಿಸದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದರು.

ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆದ ಸಾಲುಮರದ ತಿಮ್ಮಕ್ಕ ಅಂತ್ಯ ಸಂಸ್ಕಾರ

ಸಾಲುಮರದ ತಿಮ್ಮಕ್ಕ ಅವರಿಗೆ ಸಚಿವ ಪರಮೇಶ್ವರ್‌, ಈಶ್ವರ್‌ ಖಂಡ್ರೆ ಅಂತಿಮ ನಮನ ಸಲ್ಲಿಸಿದರು. -

Prabhakara R
Prabhakara R Nov 15, 2025 4:57 PM

ಬೆಂಗಳೂರು, ನ.15: ವೃಕ್ಷ ಮಾತೆ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114) (Saalumarada Thimmakka) ಅವರ ಅಂತ್ಯ ಸಂಸ್ಕಾರವು ನಗರದ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಶನಿವಾರ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಕುಟುಂಬಸ್ಥರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಅಂತ್ಯಕಿಯೆ ನಡೆಸಲಾಗಿದೆ. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ವೃಕ್ಷಮಾತೆಗೆ ಅಂತಿಮ ಗೌರವ ಸಲ್ಲಿಸಿದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದರು.

ಅನಕ್ಷರಸ್ಥೆಯಾಗಿದ್ದ ತಿಮ್ಮಕ್ಕನವರು ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಅಪ್ರತಿಮ ಪರಿಸರವಾದಿ. ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದರ ಹಿನ್ನೆಲೆ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

_Saalumarada Thimmakka  (1)

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಹಾಸನದ ಬೇಲೂರಿನಲ್ಲಿ 1 ಗಂಟೆ ಕಾಲ ಅಂತಿಮ ದರ್ಶನಕ್ಕೆ ಇಡಲಾಯ್ತು. ಬೇಲೂರಿನ ಮೂಲಕ ಬೆಂಗಳೂರಿಗೆ ಬೆಳಗ್ಗೆ 8 ಗಂಟೆ ವೇಳೆಗೆ ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರಕ್ಕೆ ಪಾರ್ಥಿವ ಶರೀರ ತಲುಪಿತು. ರವೀಂದ್ರ ಕಲಾಕ್ಷೇತ್ರದಲ್ಲಿವಿಪಕ್ಷ ನಾಯಕ ಆರ್‌.ಅಶೋಕ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

ಸಾಲುಮರದ ತಿಮ್ಮಕ್ಕ ನಿಧನಕ್ಕೆ ಪವನ್‌ ಕಲ್ಯಾಣ್‌ ಸಂತಾಪ

ಸಾಲುಮರದ ತಿಮ್ಮಕ್ಕ

ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಹಾಗಯೇ ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್‌ ಕಲ್ಯಾಣ್‌ ಅವರು ಕೂಡ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಸಂತಾಪ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪವನ್‌ ಕಲ್ಯಾಣ್‌, "ಆಂಧ್ರಪ್ರದೇಶದಲ್ಲಿ, ಪರಿಸರವನ್ನು ರಕ್ಷಿಸುವುದಾಗಿ ಹೇಳಿ ನಿರ್ದಯವಾಗಿ ಮರಗಳನ್ನು ಕಡಿದು, ಕಾಡುಗಳನ್ನು ನಾಶಮಾಡಿ, ಸ್ವಾರ್ಥ ಲಾಭಕ್ಕಾಗಿ ನಮ್ಮ ಪ್ರಮುಖ ಪರಿಸರ ಸಂಪನ್ಮೂಲಗಳ ಕಳ್ಳಸಾಗಣೆಯನ್ನು ಸಕ್ರಿಯಗೊಳಿಸಿದವರನ್ನು ನಾವು ನೋಡಿದ್ದೇವೆ. ಆದರೆ ನಮ್ಮ ವರ್ಣಪಟಲದ ಇನ್ನೊಂದು ತುದಿಯಲ್ಲಿ, ಪ್ರಕೃತಿಗೆ ಸಂಪೂರ್ಣ ಸಮರ್ಪಣೆಯಾಗಿದ್ದ ವಿನಮ್ರ ವ್ಯಕ್ತಿ ನಮ್ಮಲ್ಲಿದ್ದರು, ಅವರೇ ಸಾಲುಮರದ ತಿಮ್ಮಕ್ಕ. ವೃಕ್ಷ ಮಾತೆ ಎಂದು ಸರಳವಾಗಿ ಕರೆಯಲ್ಪಡುವ ಮಹಿಳೆ ಅವರು" ಎಂದು ಹೇಳಿದ್ದಾರೆ.

ಪವನ್‌ ಕಲ್ಯಾಣ್‌ ಸಂತಾಪದ ಪೋಸ್ಟ್



ಈ ಸುದ್ದಿಯನ್ನೂ ಓದಿ | Salumarada Thimmakka: ಶತಾಯುಷಿ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕನಿಗೆ ಶ್ರದ್ಧಾಂಜಲಿ ಸಲ್ಲಿಕೆ

ಭೂಮಿ ತಾಯಿಗೆ ಬೇಷರತ್ತಾದ ಪ್ರೀತಿ ನೀಡಿದ್ದಾರೆ

"ಕರ್ನಾಟಕದ ಒಂದು ಸಣ್ಣ ಹಳ್ಳಿಯವರಾದ ತಿಮ್ಮಕ್ಕ ಮತ್ತು ಅವರ ಪತಿ ಮಕ್ಕಳನ್ನು ಹೊಂದಲು ಸಾಧ್ಯವಾಗಲಿಲ್ಲ. ಆಗ ತಮ್ಮ ಜೀವನದ ಉದ್ದೇಶವನ್ನು ಕಂಡುಕೊಂಡ ಅವರು, ಹಸಿರು ಕುಟುಂಬವನ್ನು ಬೆಳೆಸಲು ಆಯ್ಕೆ ಮಾಡಿಕೊಂಡರು. ಶುದ್ಧ ಪ್ರೀತಿ ಮತ್ತು ದೈನಂದಿನ ಶ್ರಮದಿಂದ, ಅವರು ಜಗತ್ತಿಗೆ ಉಸಿರುಕಟ್ಟುವ ಮೇಲಾವರಣವನ್ನು ಉಡುಗೊರೆಯಾಗಿ ನೀಡಿದರು, 375 ಭವ್ಯವಾದ ಆಲದ ಮರಗಳು ಸೇರಿದಂತೆ 8 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸಿದರು. ಅವರ ಜೀವನವು ಅಧಿಕಾರ ಅಥವಾ ಸಂಪತ್ತನ್ನು ಹುಡುಕುವ ಬಗ್ಗೆ ಅಲ್ಲ, ಇದು ಭೂಮಿ ತಾಯಿಗೆ ಬೇಷರತ್ತಾದ ಪ್ರೀತಿಯ ಪ್ರತಿಜ್ಞೆಯಾಗಿತ್ತು" ಎಂದು ನಟ ಪವನ್‌ ಕಲ್ಯಾಣ್ ಹೇಳಿದ್ದಾರೆ.