ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರೈತ ಮಕ್ಕಳ 50% ಮೀಸಲಾತಿ ಸದುಪಯೋಗಪಡಿಸಿಕೊಳ್ಳಲು ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯ ಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಲಭ್ಯವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಜಿಕೆವಿಕೆ ಬಳಿ ಇರುವ ಅರಬಿಂದೋ ಶಾಲೆಯಲ್ಲಿ ವಿಕ್ಸಿತ್47 ಅಕಾಡೆಮಿ ಯಿಂದ ಕೃಷಿ ಪ್ರಾಯೋಗಿಕ ಪರೀಕ್ಷೆಗೆ ಸನ್ನದ್ಧಗೊಳ್ಳಲು ಮೇ. 4 ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

-

Profile
Ashok Nayak May 4, 2026 7:37 AM

ಬೆಂಗಳೂರು: ಪಶುಸಂಗೋಪನೆ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯ ಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಲಭ್ಯವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಜಿಕೆವಿಕೆ ಬಳಿ ಇರುವ ಅರಬಿಂದೋ ಶಾಲೆಯಲ್ಲಿ ವಿಕ್ಸಿತ್47 ಅಕಾಡೆಮಿ ಯಿಂದ ಕೃಷಿ ಪ್ರಾಯೋಗಿಕ ಪರೀಕ್ಷೆಗೆ ಸನ್ನದ್ಧಗೊಳ್ಳಲು ಮೇ. 4 ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಇದನ್ನೂ ಓದಿ: Bangalore News: ರಿಯಾ ಡೈಮಂಡ್ಸ್ ಬೆಂಗಳೂರಿನಲ್ಲಿ ಭಾರತದ ಮೊದಲ ಪ್ರಯೋಗಾಲಯದಲ್ಲಿ ಬೆಳೆದ ವಜ್ರ ನಿಶ್ಚಿತಾರ್ಥ ಉಂಗುರ ಸ್ಟುಡಿಯೋ ಪ್ರಾರಂಭ

ರೈತ ಮಕ್ಕಳಿಗೆ ಲಭ್ಯವಿರುವ 50% ಮೀಸಲಾತಿ ಸೌಲಭ್ಯ ಪಡೆಯಲು ಕೆಸಿಇಟಿ ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯ ಬೇಕಾಗಿದೆ. ಈ ಪರೀಕ್ಷೆಗೆ ತಯಾರಾಗಲು ಮೇ 4 ರ ಸೋಮವಾರ ಅರಬಿಂದೋ ಶಾಲೆಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ವಿಕ್ಸಿತ್47 ಅಕಾಡೆಮಿಯ ಮುಖ್ಯಸ್ಥರಾದ ತೇಜಸ್ ಎಚ್.ಎನ್. ತಿಳಿಸಿದ್ದಾರೆ.

ಈ ಕಾರ್ಯಗಾರದಲ್ಲಿ ಕೃಷಿ ಪ್ರಾಯೋಗಿಕ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಮುಗಿಸಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಗೆ ಸಿದ್ಧತೆ ನಡೆಸು ತ್ತಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿ ಗಳು ನೋಂದಣಿ ಮಾಡಿಕೊಳ್ಳಲು 8217413646 ಗೆ ಕರೆ ಮಾಡುವಂತೆ ಕೋರಲಾಗಿದೆ.