ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ಕಬ್ಬು ಬೆಳೆಗಾರರ ಕಿವಿಗೆ ಹೂವಿಟ್ಟು ದೊಡ್ಡ ದೋಖಾ ಮಾಡಿದೆ ರಾಜ್ಯ ಸರ್ಕಾರ: ಎಚ್‌ಡಿಕೆ

Sugarcane Farmers Protest‌: ಪ್ರಧಾನಿ ಮೋದಿ ಅವರು ಕಬ್ಬಿಗೆ FRP ದರ ಎಂದು ಕ್ವಿಂಟಲ್‌ಗೆ ₹3,550 ನಿಗದಿ ಮಾಡಿದ್ದಾರೆ. ಆದರೆ ಶುಕ್ರವಾರ ಸಿಎಂ, ಡಿಸಿಎಂ ‌ಮ್ಯಾರಾಥಾನ್ ಸಭೆ ಮಾಡಿದರು. ದಿನಪೂರ್ತಿ ಸಭೆ ನಡೆಸಿ ₹100 ಮಾತ್ರ ಜಾಸ್ತಿ ಮಾಡಿದ್ದಾರೆ. ಕೇಂದ್ರ ಸರ್ಕಾರ ₹3550 FRP ನಿಗದಿ ಮಾಡಿದೆ. ರೈತರು ಕೇಳಿದ್ದು ₹3500 ಬೆಲೆಯನ್ನು. ಸರ್ಕಾರ ಮ್ಯಾರಥಾನ್ ‌ಸಭೆ ಮಾಡಿ ಕೊಟ್ಟಿದ್ದು ₹3,300 ಮಾತ್ರ. ಹಾಗಾದರೆ ಇವರು ರೈತರಿಗೆ ಕೊಟ್ಟಿದ್ದೇನು? ಸರ್ಕಾರ ಮಾಡಿರುವ ಮೋಸವನ್ನು ಪ್ರಶ್ನೆ ಮಾಡದೇ ರೈತರು ಸಂತೋಷಪಟ್ಟರೆ ನನ್ನದೇನು ಅಭ್ಯಂತರ ಇಲ್ಲ. ಆದರೆ, ಸರ್ಕಾರ ರೈತ ಕುಟುಂಬಗಳಿಗೆ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು, ನ.8: ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 100 ರೂ. ಹೆಚ್ಚಳ ಮಾಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ರೈತರನ್ನು ನಂಬಿಸಿ ಮೋಸ ಮಾಡಿದೆ ಎಂದು ದೂರಿದರು. ಸಿಎಂ ಅವರು ಮೋದಿಗೆ ಅವರಿಗೆ ‌ಪತ್ರ ಬರೆದು ಅವರ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಿದರು. ಹಿಂದೆ ಒಮ್ಮೆ ವಿಧಾನಸಭೆಯಲ್ಲಿ ಇದೇ ಸಿಎಂ, ಡಿಸಿಎಂ ಸೇವಂತಿಗೆ ಹೂವನ್ನು ಕಿವಿ ಮೇಲೆ ಇಟ್ಟುಕೊಂಡು ಬಂದಿದ್ದರು. ಅಂದು ಕಿವಿಗೆ ಹೂ ಇಟ್ಟುಕೊಂಡಿದ್ದ ಇವರು ಇಂದು ಎರಡೂವರೆ ವರ್ಷದಲ್ಲಿ ನಿತ್ಯವೂ ಜನರ ಕಿವಿಗೆ ಹೂ ಮುಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರು ಕಬ್ಬಿಗೆ FRP ದರ ಎಂದು ಕ್ವಿಂಟಲ್ ಗೆ ₹3,550 ನಿಗದಿ ಮಾಡಿದ್ದಾರೆ. ಆದರೆ ಶುಕ್ರವಾರದ ದಿನ ಸಿಎಂ, ಡಿಸಿಎಂ ‌ಮ್ಯಾರಾಥಾನ್ ಸಭೆ ಮಾಡಿದರು. ದಿನಪೂರ್ತಿ ಸಭೆ ನಡೆಸಿ ₹100 ಮಾತ್ರ ಜಾಸ್ತಿ ಮಾಡಿದ್ದಾರೆ. ಕೇಂದ್ರ ಸರ್ಕಾರ ₹3550 FRP ನಿಗದಿ ಮಾಡಿದೆ. ರೈತರು ಕೇಳಿದ್ದು ₹3500 ಬೆಲೆಯನ್ನು. ಸರ್ಕಾರ ಮ್ಯಾರಥಾನ್ ‌ಸಭೆ ಮಾಡಿ ಕೊಟ್ಟಿದ್ದು ₹3,300 ಮಾತ್ರ. ಹಾಗಾದರೆ ಇವರು ರೈತರಿಗೆ ಕೊಟ್ಟಿದ್ದೇನು? ಸರ್ಕಾರ ಮಾಡಿರುವ ಮೋಸವನ್ನು ಪ್ರಶ್ನೆ ಮಾಡದೇ ರೈತರು ಸಂತೋಷಪಟ್ಟರೆ ನನ್ನದೇನು ಅಭ್ಯಂತರ ಇಲ್ಲ. ಆದರೆ, ಸರ್ಕಾರ ರೈತ ಕುಟುಂಬಗಳಿಗೆ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | Pralhad Joshi: ಗ್ಯಾರಂಟಿಗಳಿಗಾಗಿ ಈ ಸರ್ಕಾರ ಯಾವುದನ್ನೂ ಬಿಟ್ಟಿಲ್ಲ: ಪ್ರಲ್ಹಾದ್‌ ಜೋಶಿ ಕಿಡಿ

HD Kumaraswamy: ರಾಜ್ಯದಲ್ಲಿ ವೋಟ್ ಚೋರಿ ಮೂಲಕವೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ಬೆಂಗಳೂರು, ನ.8: ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Theft) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್‌ಆರ್ ಬೆಂಗಳೂರು ನಡುವೆ ಹೊಸದಾಗಿ ಆರಂಭವಾಗಿರುವ ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿ ವೋಟ್ ಚೋರಿಯಿಂದಲೇ ಗೆದ್ದಿದೆ ಎಂದು ಸಿಎಂ, ಡಿಸಿಎಂ ಆರೋಪ ಮಾಡಿರುವುದು ಸರಿಯಲ್ಲ. ನಿಜವೆಂದರೆ ಆರೋಪ ಮಾಡಿರುವವರೇ ವೋಟ್ ಚೋರಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸೀಟು ಬರುತ್ತೆ ಎಂದು ಅಷ್ಟು ನಿಖರವಾಗಿ ಹೇಗೆ ಹೇಳಿದರು? ಆ ಸಂಖ್ಯೆ ಅವರಿಗೆ ಹೇಗೆ ಗೊತ್ತಿತ್ತು? ಯಾವ ಆಧಾರದಲ್ಲಿ 136 ಸೀಟು ಬರುತ್ತೆ ಅಂತ ಹೇಳಿದರು? ಮತ ಕಳ್ಳತನ ಮಾಡಿರುವುದೇ ಕಾಂಗ್ರೆಸ್ ಪಕ್ಷ. ಈಗ ನೋಡಿದರೆ ಮೋದಿ ಅವರನ್ನು ಟೀಕೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿಗೆ 67 ಸೀಟು ಬಂದು ನಿಲ್ಲೋಕೆ ಚೋರಿ ಮಾಡಿದ್ರಾ? ಕಾಂಗ್ರೆಸ್‌ನವರು ಜನರನ್ನು ಯಾಮಾರಿಸಿ ಈ‌ ರೀತಿಯ ವ್ಯರ್ಥ ಹೇಳಿಕೆ ಕೊಟ್ಟು ಸಮಯ ವ್ಯರ್ಥ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅನೇಕ ಗಂಭೀರ ಸಮಸ್ಯೆಗಳನ್ನು ಜನ ಎದುರಿಸುತ್ತಿದ್ದಾರೆ. ಅದರ ಬಗ್ಗೆ ಇವರು ಗಮನ ‌ಇರಬೇಕು ಎಂದು ಅವರು ತರಾಟೆಗೆ ತೆಗೆದುಕೊಂಡರು.

ಸಿಎಂ, ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ ಅಂತ ಯಾರೋ ಹೇಳಿದರು. ನಾನೇನೋ ಯಾವುದೋ ಭಾರೀ ವಿಷಯ ಇರಬೇಕು ಎಂದುಕೊಂಡಿದ್ದೆ. ಆದರೆ ಸತ್ಯವಲ್ಲದ ವೋಟ್ ಚೋರಿ ಬಗ್ಗೆ ಇವರಿಬ್ಬರೂ ಮಾಧ್ಯಮಗೋಷ್ಠಿ ನಡೆಸಿರುವುದು ಸಣ್ಣತನ ಅಷ್ಟೇ. ಸಿಎಂ,‌ ಡಿಸಿಎಂ ಸಣ್ಣತನವನ್ನು ರಾಜ್ಯದ ಜನರು ನೋಡಿದ್ದಾರೆ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ‌ಇಂತಹ ವಿಷಯ ಇಟ್ಟುಕೊಂಡು ಹೋಗ್ತಾ ಇದ್ದಾರೆ. ಕಾಂಗ್ರೆಸ್‌ನವರನ್ನು ನಾಡಿನ ಜನ ಶಾಶ್ವತವಾಗಿ ಮನೆಗೆ ‌ಕಳಿಸುವ ದಿನ ದೂರ ಉಳಿದಿಲ್ಲ ಎಂದು ಸಚಿವ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ವಂದೇ ಭಾರತ್ ರೈಲು ಸ್ವಾಗತ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗೈರಾಗಿದ್ದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿವೃದ್ಧಿ ವಿಷಯಗಳ ಕಡೆ ಗಮನ ಕೊಡಲು ಅವರಿಗೆ ಸಮಯ ಇಲ್ಲ. ವೋಟ್ ಚೋರಿ ವಿಷಯದಲ್ಲಿ ಬ್ಯುಸಿ ಇದ್ದಾರೆ ಅವರು ಎಂದು ಲೇವಡಿ ಮಾಡಿದರು.

ವೋಟ್ ಚೋರಿ ಅನ್ನುವುದು ಕಾಂಗ್ರೆಸ್ ಪ್ರಚಾರಕ್ಕಾಗಿ ಸೃಷ್ಟಿಸಿರುವ ದೊಡ್ಡ ಸುಳ್ಳು. ಇಂತಹ ಕ್ಷುಲ್ಲಕ ವಿಷಯಗಳನ್ನೇ ಇಟ್ಟುಕೊಂಡು ಎರಡೂವರೆ ವರ್ಷ ಕಾಲಹರಣ ಮಾಡಿದ್ದಾರೆ. ಮುಂದಿನ ಎರಡೂವರೆ ವರ್ಷವೂ ಇವರು ಬೇರೆ ಏನು ಮಾಡೋಕೆ ಆಗೊಲ್ಲ. ಮಾಡುವುದೂ ಇಲ್ಲ ಎಂದು ಟೀಕಿಸಿದರು.

ಈ ಸುದ್ದಿಯನ್ನೂ ಓದಿ | Road Potholes: ರಸ್ತೆ ಗುಂಡಿ ಮುಚ್ಚಲು ಆಗ್ರಹ; ಆರ್. ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ

ರಾಜ್ಯದ ಖಜಾನೆ ಖಾಲಿ ಆಗಿದೆ. ಖಾಲಿ ಆಗಿರುವ ಖಜಾನೆ ಹೇಗೆ ತುಂಬಿಸಬೇಕು ಅಂತ ನಿನ್ನೆ (ಶುಕ್ರವಾರ) ಸಭೆ ಮಾಡಿದ್ದಾರೆ. ಜನರ ಮೇಲೆ ಪದೇ ಪದೇ ತೆರಿಗೆ ವಿಧಿಸುವ ಮೂಲಕ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಾವಾಗಲೂ ಜನರನ್ನ ದಾರಿ ತಪ್ಪಿಸಲು ಸಾಧ್ಯವಿಲ್ಲ. ನಾನು ಅನೇಕ ಬಾರಿ ಹೇಳಿದ್ದೇನೆ. ತಪ್ಪು ತಿದ್ದಿಕೊಂಡು ಕೆಲಸ ಮಾಡಿ ಅಂತ. ಆದರೂ ಅವರಿಗೆ ಬುದ್ದಿ ಬಂದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹರಿಹಾಯ್ದರು.