Director Murali Mohan: ಆಸ್ಪತ್ರೆಯಲ್ಲಿ ಮುರಳಿ ಮೋಹನ್ ಅಂತಿಮ ದರ್ಶನ ಪಡೆದು ಉಪೇಂದ್ರ ಭಾವುಕ
Director Murali Mohan: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಮುರಳಿ ಮೋಹನ್ ಆ್ಯಕ್ಷನ್ ಕಟ್ ಹೇಳಿದ್ದರು. 36 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಜೆಸಿ ರೋಡ್ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.


ಬೆಂಗಳೂರು: ಹಿರಿಯ ನಿರ್ದೇಶಕ ಮುರಳಿ ಮೋಹನ್ ನಿಧನದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನಟ ಉಪೇಂದ್ರ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಮುರಳಿ ಮೋಹನ್ ಅವರ ಜತೆಗಿನ ಒಡನಾಟ ನೆನದು ಉಪೇಂದ್ರ ಭಾವುಕರಾದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ ಎಸ್. ಮುರಳಿ ಮೋಹನ್ (57) ಅವರು, ಬೆಂಗಳೂರಿನ ಜೆಸಿ ರೋಡ್ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ವರ್ಷ ವಯಸ್ಸಾಗಿತ್ತು.
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಮುರಳಿ ಮೋಹನ್ ಆ್ಯಕ್ಷನ್ ಕಟ್ ಹೇಳಿದ್ದರು. 36 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ಕಿಡ್ನಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಐದಾರು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಈ ಹಿಂದೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವಿನ ಅವಶ್ಯಕತೆಯಿದೆ ಎಂದು ಅವರು ಮನವಿ ಮಾಡಿದ್ದರು. ಶಸ್ತ್ರಚಿಕಿತ್ಸೆಗೆ 30-35 ಲಕ್ಷ ರೂ. ಬೇಕಾಗಿತ್ತು. ಸುದೀಪ್, ಉಪೇಂದ್ರ ಧನಸಹಾಯ ಮಾಡಿದ್ದರು. ಆದರೆ ಬಹುಅಂಗಾಂಗ ಇವರು ವೈಫಲ್ಯದಿಂದ ನಿಧನರಾಗಿದ್ದಾರೆ.
ಉಪೇಂದ್ರ ಜತೆಗೆ ʼಶ್ʼ, ʼಓಂʼ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರಳಿ ಮೋಹನ್ ಬಳಿಕ ಉಪೇಂದ್ರ ನಟನೆಯ ʼನಾಗರಹಾವುʼ, ಶಿವ ರಾಜ್ಕುಮಾರ್ ನಟನೆಯ ʼಸಂತʼ, ರವಿಚಂದ್ರನ್ ಅಭಿನಯದ ʼಮಲ್ಲಿಕಾರ್ಜುನʼ ಮುಂತಾದ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು. ಬಹುಮುಖ ಪ್ರತಿಭೆ ಹೊಂದಿದ್ದ ಮುರಳಿ ಮೋಹನ್ ನಿರ್ದೇಶಕ ಮಾತ್ರವಲ್ಲದೆ ನಟ ಹಾಗೂ ಸಂಭಾಷಣೆಕಾರರೂ ಆಗಿದ್ದರು. ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿ, ನಟಿಸಿ, ಸಂಭಾಷಣೆ ಬರೆದಿದ್ದರು. ಅವರು 'ರಾಜ್' ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ಜತೆಗೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.
ಈ ಹಿಂದೆ ಸಂದರ್ಶನವೊಂದರಲ್ಲಿ ಅವರು, ʼʼನನ್ನ ಆರೋಗ್ಯ ಸರಿಯಾಗಿಲ್ಲ. ಈ ಮೊದಲು ಡಯಾಲಿಸ್ ಮಾಡಿಸಿಕೊಳ್ಳುತ್ತಿದ್ದೆ. ಆದರೆ ಈಗ ಅದು ಟ್ರಾನ್ಸ್ಪ್ಲಾಂಟೇಶನ್ ಹಂತಕ್ಕೆ ಬಂದಿದೆ. ಈಗ ತಿಂಗಳಿಗೆ 30 ಸಾವಿರ ರೂ. ಖರ್ಚಾಗುತ್ತಿದೆ. ಹೊಸ ಕಿಡ್ನಿ ಹಾಕಿಸಿಕೊಳ್ಳಲು 30-35 ಲಕ್ಷ ರೂ. ಬೇಕು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ನನ್ನಿಂದ ಅದು ಸಾಧ್ಯವಾಗುತ್ತಿಲ್ಲʼʼ ಎಂದಿದ್ದರು. ಇದೀಗ ಪ್ರತಿಭಾವಂತ ನಿರ್ದೇಶಕನ್ನು ಸ್ಯಾಂಡಲ್ವುಡ್ ಕಳೆದುಕೊಂಡಿದ್ದು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.