ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yashaswini scheme: ಯಶಸ್ವಿನಿ ಯೋಜನೆ; ದರ ಪರಿಷ್ಕರಣೆ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ

Yashaswini scheme: ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದ್ದು, ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿವೆ. ಹೀಗಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್. ಟಿ ವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಯಶಸ್ವಿನಿ ಯೋಜನೆ ದರ ಪರಿಷ್ಕರಣೆ ಸಮಿತಿಯಿಂದ ವರದಿ ಸಲ್ಲಿಕೆ

Profile Prabhakara R Apr 22, 2025 10:27 PM

ಬೆಂಗಳೂರು: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ.ಶ್ರೀನಿವಾಸ ಎನ್.ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಸಿಎಂ ಸಿದ್ದರಾಮಯ್ಯ ಅವರಿಗೆ ಶಿಫಾರಸುಗಳನ್ನು ಸಲ್ಲಿಸಿದೆ. ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್. ಟಿ ಅವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು. ಇದೀಗ ಸಮಿತಿಯು ಶಿಫಾರಸುಗಳನ್ನು ಸಲ್ಲಿಸಿದೆ.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದ್ದು, ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿವೆ. ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿಲ್ಲ. ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್. ಟಿ ಅವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿ-ಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿತ್ತು. ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ. ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ. ಇದರಿಂದಾಗಿ ಒಟ್ಟು 2191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು 117.79 ಕೋಟಿ ರೂ. ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು, ಸರಾಸರಿ ಒಂದು ಚಿಕಿತ್ಸಾ ವೆಚ್ಚ 17,000 ರೂ. ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು 127.50 ರೂ. ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ರ ವರವಿಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು 70 ಕೋಟಿ ರೂ.ವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು, ಇದರಿಂದ 62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಸುದ್ದಿಯನ್ನೂ ಓದಿ | CM Siddaramaiah: ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಈ ಹೆಚ್ಚಳವಾಗುವ ಸುಮಾರು 70 ಕೋಟಿ ರೂ. ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ 40 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ 30 ಕೋಟಿ ರೂ. ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.