ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Weather Forecast: ಇಂದಿನ ಹವಾಮಾನ; ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

Weather Forecast: ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ.

ಇಂದು ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

Profile Prabhakara R Mar 14, 2025 6:00 AM

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಗುರುವಾರ ಒಣ ಹವೆಯ ವಾತಾವರಣ ಇತ್ತು. ಇನ್ನು ಮಾರ್ಚ್‌ 14ರ ಶುಕ್ರವಾರ ಕೂಡ ರಾಜ್ಯದಾದ್ಯಂತ ಒಣ ಹವೆ (Weather Forecast) ಇರುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಕ್ರಮೇಣ ಹೆಚ್ಚಳವಾಗಲಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಾಗಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ.

ಇನ್ನು ಮಾ. 15ರಂದು ಕೂಡ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾ. 16ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಬಳಿಕ ಮಾ. 17ರಿಂದ 19 ರವರೆಗೆ ಒಣ ಹವೆ ಮುಂದುವರಿಯಲಿದೆ.

ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕಲಬುರಗಿಯಲ್ಲಿ ಬುಧವಾರ ಅತೀ ಹೆಚ್ಚು ಉಷ್ಣಾಂಶ 39.1 ಡಿ.ಸೆ ದಾಖಲಾಗಿದೆ. ಅದೇ ರೀತಿ ವಿಜಯಪುರ ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತೀ ಕಡಿಮೆ ಉಷ್ಣಾಂಶ 18.0 ಡಿ.ಸೆ. ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Health Tips: ನಿಯಮಿತವಾಗಿ ತುಪ್ಪ ಸೇವಿಸಿ ಆರೋಗ್ಯದಲ್ಲಾಗುವ ಅದ್ಭುತ ಬದಲಾವಣೆ ಗಮನಿಸಿ

ರಾಜ್ಯದಲ್ಲಿ ಬಿಸಿಲು ನೆತ್ತಿಸುತ್ತಿರುವ ಹಿನ್ನೆಲೆಯಲ್ಲಿ ಜನ ಹೈರಾಣಾಗಿದ್ದಾರೆ. ಹೀಗಾಗಿ ತೀವ್ರ ಬಿಸಿಲಿನಿಂದ ರಕ್ಷಣೆಗಾಗಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸಾರ್ವಜನಿಕರು:

ಮಧ್ಯಾಹ್ನ 12ರಿಂದ ಮಧ್ಯಾಹ್ನ 3ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ.

ಬಾಯಾರಿಕೆ ಇಲ್ಲದಿದ್ದರೂ ಸಹ, ಸಾಕಷ್ಟು ನೀರು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ಕುಡಿಯಿರಿ.

ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಿ.

ತಲೆತಿರುಗುವಿಕೆ ಅಥವಾ ಅನಾರೋಗ್ಯ ಅನುಭವಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ, ಇದು ದೇಹವನ್ನು ಮತ್ತೆ ಹೈಟ್ರೇಟ್ ಮಾಡಲು ಸಹಾಯ ಮಾಡುತ್ತದೆ.

ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

ರೈತರು/ಕೃಷಿ/ಕ್ಷೇತ್ರ ಕೆಲಸಗಾರರು:

ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

ಕ್ರೀಡಾಪಟುಗಳು:

ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಕಠಿಣ ಚಟುವಟಿಕೆಗಳು ಮತ್ತು ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.

ಪ್ರಯಾಣಿಕರು:

ಪ್ರಯಾಣ ಮಾಡುವಾಗ, ನೀರು/ಜ್ಯೂಸ್/ಮಜ್ಜಿಗೆಯನ್ನು ನಿಮ್ಮೊಂದಿಗೆ ಕೊಂಡೊಯ್ದಿರಿ.

ಮಧ್ಯಾಹ್ನ 12ರಿಂದ ಮಧ್ಯಾಹ್ನ 3ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ.