ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಧರ್ಮಸ್ಥಳ ಪ್ರಕರಣ; ಬಂಗ್ಲೆಗುಡ್ಡ ಅರಣ್ಯದಲ್ಲಿ ಮೂಳೆಗಳು, ಬಟ್ಟೆ ತುಂಡುಗಳು ಪತ್ತೆ!

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್‌ಐಟಿ ಶೋಧ ಕಾರ್ಯ ಶುರು ಮಾಡಿದೆ. ಅಲ್ಲಿಗೆ ಹೋದ ಅರ್ಧಗಂಟೆಯಲ್ಲೇ ಮೂಳೆಗಳು ಹಾಗೂ ಪುರುಷನ ಬಟ್ಟೆ ತುಂಡುಗಳು ಪತ್ತೆಯಾಗಿವೆ ಎನ್ನಲಾಗಿದೆ. ಧರ್ಮಸ್ಥಳದ ಸುತ್ತ-ಮುತ್ತ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ನೆನೆದುಕೊಂಡೇ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಬಂಗ್ಲೆಗುಡ್ಡ ಅರಣ್ಯದಲ್ಲಿ ಮೂಳೆಗಳು, ಬಟ್ಟೆ ತುಂಡುಗಳು ಪತ್ತೆ!

-

Prabhakara R Prabhakara R Sep 17, 2025 7:21 PM

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ (Dharmasthala Case) ತನಿಖೆ ನಡೆಸುತ್ತಿರುವ ಎಸ್‌ಐಟಿ ಬುಧವಾರ ನೇತ್ರಾವತಿ ಸ್ನಾನಘಟ್ಟದ ​​ಬಳಿಯ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಅಸ್ಥಿಪಂಜರಗಳ ಅವಶೇಷಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅರಣ್ಯದಲ್ಲಿ ಭೂಮಿಯ ಮೇಲ್ಮೈನಲ್ಲೇ ಮೂಳೆಗಳು, ಬಟ್ಟೆ ತುಂಡುಗಳು ಪತ್ತೆಯಾಗಿದ್ದು, ಸೋಕೋ ತಂಡ ಮೂಳೆ ಪತ್ತೆಯಾದ ಭಾಗದ ಮಣ್ಣಿನ ಸ್ಯಾಂಪಲ್ ಪಡೆದಿದ್ದು, ಈ ಜಾಗವನ್ನು ಎಸ್ಐಟಿ ಅಧಿಕಾರಿ ಮಹಜರು ಮಾಡುತ್ತಿದ್ದಾರೆ.

ಬಂಗ್ಲೆಗುಡ್ಡ ಅರಣ್ಯಕ್ಕೆ ಹೋದ ಅರ್ಧಗಂಟೆಯಲ್ಲೇ ಮೂಳೆಗಳು ಹಾಗೂ ಪುರುಷನ ಬಟ್ಟೆ ಪತ್ತೆಯಾಗಿದೆ ಎನ್ನಲಾಗಿದೆ. ಧರ್ಮಸ್ಥಳದ ಸುತ್ತ-ಮುತ್ತ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ನೆನೆದುಕೊಂಡೇ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿ ಕಾಡಿಗೆ ಪ್ರವೇಶ ಮಾಡಿದ್ದು, ಮೂರು ತಂಡಗಳಾಗಿ ಮೂಳೆಗಳಿಗಾಗಿ ಶೋಧ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಸೌಜನ್ಯ ಅವರ ಚಿಕ್ಕಪ್ಪ ವಿಠ್ಠಲ್ ಗೌಡ ಅವರು ಈ ಹಿಂದೆ ಹೇಳಿಕೆ ನೀಡಿದ್ದನ್ನು ಅನುಸರಿಸಿ ಎಸ್ಐಟಿ ತಂಡ ಇಂದು ಶೋಧ ಕಾರ್ಯ ನಡೆಸಿದೆ. ದಟ್ಟವಾದ ಬಂಗ್ಲೆಗುಡ್ಡ ಅರಣ್ಯ ವಲಯದಲ್ಲಿ ಇನ್ನೂ ಅವಶೇಷಗ ಅಥವಾ ಸಾಕ್ಷ್ಯಗಳು ಪತ್ತೆಯಾಗಬಹುದೇ ಎಂಬುದನ್ನು ನೋಡಲು ಶೋಧ ಕಾರ್ಯಾಚರಣೆ ಮುಂದುವರೆದಿದೆ