ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cabinet Meeting: ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

Cabinet Decisions: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್‌ 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಈ ಪೈಕಿ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳನ್ನು 360 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಲೋಕೋಪಯೋಗಿ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ. 2025-26ನೇ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿ, ವಲಯ ಮಟ್ಟದಲ್ಲಿ ಟೆಂಡರ್ ಕರೆಯಲು ಅವಕಾಶ ನೀಡುವುದು ಮತ್ತು ಮೈಸೂರು ಮತ್ತು ಬೆಂಗಳೂರು ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಯ ಯೋಜನಾ ರಸ್ತೆ ಆಸ್ತಿ ನಿರ್ವಹಣಾ ಕೇಂದ್ರಕ್ಕೆ ವಹಿಸಿ, ಕೇಂದ್ರೀಕೃತ ಟೆಂಡರ್ ಕರೆಯಲು ಅವಕಾಶ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

ಸಾಂದರ್ಭಿಕ ಚಿತ್ರ -

Ramesh B Ramesh B Oct 30, 2025 9:27 PM

ಬೆಂಗಳೂರು, ಅ. 30: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್‌ 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳನ್ನು 360 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಲೋಕೋಪಯೋಗಿ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ. 2025-26ನೇ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿ, ವಲಯ ಮಟ್ಟದಲ್ಲಿ ಟೆಂಡರ್ ಕರೆಯಲು ಅವಕಾಶ ನೀಡುವುದು ಮತ್ತು ಮೈಸೂರು ಮತ್ತು ಬೆಂಗಳೂರು ವಿಭಾಗಗಳಲ್ಲಿ ಶಾಲಾ ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವನ್ನು ಲೋಕೋಪಯೋಗಿ ಇಲಾಖೆಯ ಯೋಜನಾ ರಸ್ತೆ ಆಸ್ತಿ ನಿರ್ವಹಣಾ ಕೇಂದ್ರ (PRAMC)ಕ್ಕೆ ವಹಿಸಿ, ಕೇಂದ್ರೀಕೃತ ಟೆಂಡರ್ ಕರೆಯಲು ಅವಕಾಶ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಉಪ ನಿರ್ದೇಶಕರು (ಆಡಳಿತ) ಇವರು ಕಾಮಗಾರಿಗಳ ಮೇಲ್ವಿಚಾರಣೆ ನಡೆಸುತ್ತಾರೆ ಎಂದು ಸಚಿವ ಸಂಪುಟ ನಿರ್ಧರಿಸಿದೆ.

ಕರ್ನಾಟಕ-ಕರಾವಳಿ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಕೆ-ಶೋರ್ (Karnataka Strengthening Coastal Resilience and Economy-K-SHORE) ಯೋಜನೆಗೆ ತಾಂತ್ರಿಕ ಮತ್ತು ನಿರ್ವಹಣಾ ಸಲಹೆಗಾರರ ಸೇವೆಗಳನ್ನು ಪಡೆಯಲು 20.47 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಮ್ಮತಿಸಲಾಯಿತು.

ಈ ಸುದ್ದಿಯನ್ನೂ ಓದಿ: Chikkaballapur News: ಹೆಚ್.ಎನ್.ವ್ಯಾಲಿ ೩ನೇ ಹಂತದ ಶುದ್ಧೀಕರಣ ರೈತರಿಂದ ಕೂಗು ಬಂದರೆ ಮಾಡುವ ಭರವಸೆ

ಸಚಿವ ಸಂಪುಟದ ಉಳಿದ ಪ್ರಮುಖ ನಿರ್ಣಯಗಳು

ರಾಜ್ಯದ ಕಡಲ ತೀರಗಳ ಅಭಿವೃದ್ಧಿಗೆ ಕ್ರಮ: ಕರಾವಳಿಯ ಪ್ರಸ್ತಾವಿತ ಯೋಜನೆಗಳಾಗಿರುವ ರಾಜ್ಯದ ನಾಲ್ಕು ಹಾಲಿ ಬಂದರುಗಳಾದ ಕಾರವಾ, ಹಳೆ ಮಂಗಳೂರು, ಹಳೆ ಮಂಗಳೂರು (ನಗರ ಬದಿಯ) ಮತ್ತು ಮಲ್ಪೆಯ ಬರ್ತ್‌ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರಿಪೇರಿ- ಕಾರ್ಯಾಚರಣೆ-ನಿರ್ವಹಣೆ-ವರ್ಗಾವಣೆ (ROMT) ಆಧಾರದಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದು, ಇದು ಖಾಸಗಿ ಪಾಲುದಾರಿಕೆಯೊಡನೆ ಕರಾವಳಿಯ ಆಯ್ದ ಹಾಲಿ ಬಂದರುಗಳ ಕಾರ್ಯಕ್ಷಮತೆ ಮತ್ತು ದಕ್ಷತೆಯನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ. ಅಲ್ಲದೆ ಕರ್ನಾಟಕ ಜಲಸಾರಿಗೆ ಮಂಡಳಿಯ ವಾರ್ಷಿಕ ಆದಾಯದ ಹೆಚ್ಚಳ, ಸ್ಥಳೀಯ ಉದ್ಯೋಗದ ಹೆಚ್ಚಳ ಮತ್ತು ಸುಧಾರಿತ ಜೀವನೋಪಾಯಕ್ಕೆ ಅವಕಾಶ ನೀಡುವ ಮೂಲಕ ಈ ಯೋಜನೆಗಳು ಅಭಿವೃದ್ಧಿಯನ್ನು ಉತ್ತೇಜಿಸುವುದರಿಂದ ಈ ಯೋಜನೆಯನ್ನು ಸಚಿವ ಸಂಪುಟ ಅನುಮೋದಿಸಿದೆ.

ಸಿಎಂ ಸಿದ್ದರಾಮಯ್ಯ ಅವರ ಎಕ್ಸ್‌ ಪೋಸ್ಟ್‌:



ಬನಶಂಕರಿಯಲ್ಲಿ ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ನಿವೇಶನ: ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನ ಟ್ರಸ್ಟ್‌ನವರು ಸುಮಾರು 60 ವರ್ಷಗಳಿಂದ ದೇವಸ್ಥಾನ ನಿರ್ಮಿಸಿ ಪೂಜಾ ಕಾರ್ಯವನ್ನು ನಡೆಸುತ್ತಿದ್ದಾರೆ. ಚಾಲ್ತಿಯಲ್ಲಿರುವ ಸಿ.ಎ. ನಿವೇಶನ ಹಂಚಿಕೆ ದರವನ್ನು ವಿಧಿಸಿ ಟ್ರಸ್ಟ್‌ಗೆ ಹಂಚಿಕೆ ಮಾಡಲು ಪ್ರಸ್ತಾಪಿಸಿರುವುದರಿಂದ, ವಿಶೇಷ ಪ್ರಕರಣವೆಂದು ಪರಿಗಣಿಸಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಾವಳಿಗಳು 1989ನ್ನು ಸಡಿಲಿಸಿ, ಬನಶಂಕರಿ 1ನೇ ಹಂತ, 1ನೇ ಬ್ಲಾಕ್, ನಿವೇಶನ ಸಂಖ್ಯೆ: 181ಕ್ಕೆ ಹೊಂದಿಕೊಂಡಂತಿರುವ ಸಿ.ಎ. ನಿವೇಶನವಾಗಿ ಬಡಾವಣೆ ನಕ್ಷೆಯಲ್ಲಿ ಗುರುತಿಸಿರುವ ನಿವೇಶನವನ್ನು ಚಾಲ್ತಿಯಲ್ಲಿರುವ ದರವನ್ನು ವಿಧಿಸಿ, ದೇವಸ್ಥಾನದ ಉದ್ದೇಶಕ್ಕಾಗಿ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನ ಟ್ರಸ್ಟ್‌ಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಲು ಅನುಮತಿ ನೀಡಲು ತೀರ್ಮಾನ.

ಮಂಡ್ಯ ಕಾಂಗ್ರೆಸ್ ಭವನಕ್ಕೆ ನಿವೇಶನ: ಮಂಡ್ಯ ಜಿಲ್ಲಾ ಕಾಂಗ್ರೆಸ್ ಭವನದ ಕಟ್ಟಡದ ನಿರ್ಮಾಣ ಮಾಡುವ ಉದ್ದೇಶಕ್ಕಾಗಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವಿವೇಕಾನಂದ ಬಡಾವಣೆಯಲ್ಲಿರುವ ನಾಗರಿಕ ಸೌಲಭ್ಯ ನಿವೇಶನ ಸಂಖ್ಯೆ: 1/ಬಿ ರಲ್ಲಿ 1457.8 ಚ.ಮೀ ವಿಸ್ತೀರ್ಣದ ನಿವೇಶನವನ್ನು ಮಂಜೂರು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಕೋಲಾರದಲ್ಲಿ ಸಿಬಿಜಿ ಸ್ಥಾಪನೆ: ಕೋಲಾರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಕೋಲಾರ APMCಯಿಂದ ಹಾಗೂ ಬಿಬಿಎಂಪಿಯಿಂದ ಪ್ರತಿದಿನ ಒಟ್ಟಾರೆ 150 ಟನ್‌ಗಳಷ್ಟು ಹಸಿ ತ್ಯಾಜ್ಯವನ್ನು Compressed Bio Gas (CBG) ಘಟಕಗಳ ಮೂಲಕ ಸಂಸ್ಕರಿಸಲು ಕೋಲಾರ ನಗರಸಭೆಗೆ ಸೇರಿದ ವಕ್ಕಲೇರಿ ಹೋಬಳಿ, ಅರಾಭಿಕೊತ್ತನೂರು ಗ್ರಾಮದ ಸರ್ವೆ ನಂ.152ರಲ್ಲಿ 9 ಎಕರೆ 38 ಗುಂಟೆ ಜಮೀನನ್ನು ಕೇವಲ ಸೀಮಿತ ಬಳಕೆಗಾಗಿ ಮಾತ್ರ (Permissive Use) 25 ವರ್ಷಗಳ ಅವಧಿಗೆ Nominal Lease Rate ಆಧಾರದ ಮೇಲೆ Gas Authority of India Limited (GAIL) ಸಂಸ್ಥೆಗೆ ವಹಿಸಿಕೊಡಲು ಸಚಿವ ಸಂಪುಟ ನಿರ್ಧರಿಸಿದೆ.

ಕನಕ ಭವನ ನಿರ್ಮಾಣಕ್ಕೆ ನಿವೇಶನ: ಯಾದಗಿರಿ ಜಿಲ್ಲೆ ಶಹಾಪುರ ನಗರಸಭೆ ವ್ಯಾಪ್ತಿಯ IDSMT ಲೇಔಟ್‌ನಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮೀಸಲಿಟ್ಟ 300.14 ಚದರ ಮೀಟರ್ ಅಳತೆಯ ನಿವೇಶನ ಸಂಖ್ಯೆ: 85ನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ, ಶಹಾಪೂರ ಇವರಿಗೆ ಕನಕ ಭವನ ನಿರ್ಮಾಣಕ್ಕಾಗಿ ಉಚಿತವಾಗಿ ಮಂಜೂರು ಮಾಡಲು ತೀರ್ಮಾನ.

ಮಂಡ್ಯ ಕೃಷಿ ವಿವಿಗೆ ಅನುದಾನ: ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಕಾಲುವೆ ಫಾರ್ಮ್‌ನಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾಥಮಿಕ ಹಂತಕ್ಕಾಗಿ 23.25 ಕೋಟಿ ರೂ. ಅಂದಾಜು ಮೊತ್ತದಲ್ಲಿ ಹೊಸ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಮತ್ತು ನವೀಕರಣ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಕಾರವಾರ ಕ್ಯಾನ್ಸರ್ ಕೇರ್ ಘಟಕಕ್ಕೆ ಉಪಕರಣ: ಕಾರವಾರ ಕ್ಯಾನ್ಸರ್ ಕೇರ್ ಘಟಕದ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳಿಗೆ ತಗಲುವ ಅನುದಾನವನ್ನು ಈಗಾಗಲೇ ಅನುಮೋದನೆಯಾಗಿರುವ 825.00 ಲಕ್ಷ ರೂ. ಅನುದಾನದಲ್ಲಿ ಸರ್ಕಾರದ ವತಿಯಿಂದ ಭರಿಸುವುದು ಇನ್ನುಳಿದ ಮೊತ್ತ1,338.96 ಲಕ್ಷಗಳ ರೂ. ಅನುದಾನವನ್ನು ಸಂಸ್ಥೆಯ ಆಂತರಿಕ ಸಂಪನ್ಮೂಲದಿಂದ ಭರಿಸಲು ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ. ಕಾರವಾರ ವೈದ್ಯಕೀಯ ಕಾಲೇಜು ಆವರಣದಲ್ಲಿ ಕ್ಯಾನ್ಸರ್ ಕೇರ್ ಘಟಕದ ಸ್ಥಾಪನೆಗೆ ಅಗತ್ಯವಿರುವ ಉಪಕರಣಗಳ ಖರೀದಿ ಮತ್ತು ನಿರ್ಮಾಣ ಕಾಮಗಾರಿಗಳನ್ನು ಒಟ್ಟು 31.63 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಟರ್ಷಿಯರಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಮೊದಲನೇ ಹಂತದಲ್ಲಿ ಹೆಚ್ಚುವರಿ ಉಪಕರಣಗಳನ್ನು ಟೆಂಡರ್ ಮೂಲಕ ಖರೀದಿಸಲಾಗುತ್ತಿರುವ 2660.96 ಲಕ್ಷ ರೂ. ಮತ್ತು ಎರಡನೇ ಹಂತದಲ್ಲಿ ಕಾಮಗಾರಿ ಮತ್ತು ಉಪಕರಣ ಖರೀದಿಸಲು ಕೈಗೊಳ್ಳಲು 503.00 ಲಕ್ಷ ರೂ. ಒಟ್ಟಾರೆ 3,163.96 ಲಕ್ಷ ರೂ. ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.

ಈ ಸುದ್ದಿಯನ್ನೂ ಓದಿ: DK Shivakumar: ಧರ್ಮಸ್ಥಳ ಪ್ರಕರಣ; ಎಸ್‌ಐಟಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ: ಡಿ.ಕೆ. ಶಿವಕುಮಾರ್‌

ಕೆಎಸ್‌ಆರ್‌ಪಿ & ಐಆರ್‌ಬಿ ವೃಂದ ಮತ್ತು ನೇಮಕಾತಿಗಳಿಗೆ ಅನುಮೋದನೆ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಮತ್ತು ಭಾರತೀಯ ಮೀಸಲು ಪಡೆಯ (ಐಆರ್‌ಬಿ) ಕರಡು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಆಕ್ಷೇಪಣೆ ಆಹ್ವಾನಿಸಿ ಪ್ರಕಟಿಸಲು ಮತ್ತು ಕರಡು ನಿಯಮಗಳಿಗೆ ಸ್ವೀಕೃತವಾಗುವ ಆಕ್ಷೇಪಣೆಗಳು ಗುರುತರವಾಗಿಲ್ಲದಿದ್ದಲ್ಲಿ, ಮತ್ತೊಮ್ಮೆ ಸಚಿವ ಸಂಪುಟದ ಅನುಮೋದನೆ ಪಡೆಯದೇ ಅಂತಿಮಗೊಳಿಸಿ ಪ್ರಕಟಿಸಲು ಸಚಿವ ಸಂಪುಟ ನಿರ್ಧರಿಸಿದೆ.

ನೋಂದಣಿ ಇಲಾಖೆಯಲ್ಲಿ ಕಾವೇರಿ ಐಟಿ ಸೆಲ್: 2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ-432 ರನ್ವಯ ತಂತ್ರಾಂಶ ಅಭಿವೃದ್ಧಿ, ವರ್ಧನೆ, ನಿರ್ವಹಣೆ ಹಾಗೂ ತಾಂತ್ರಿಕ ಸಹಾಯಕ್ಕಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಕಾವೇರಿ ಐಟಿ ಸೆಲ್ ಹೆಸರಿನ ಇನ್-ಹೌಸ್ ತಾಂತ್ರಿಕ ಅಭಿವೃದ್ಧಿ ವಿಭಾಗವನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ ಹಾಗೂ ನಿಯಮಗಳ ಪ್ರಕಾರ ಮಾನವ ಸಂಪನ್ಮೂಲ ಸಂಸ್ಥೆಯಿಂದ ಹೊರಗುತ್ತಿಗೆಯ ಮೂಲಕ ಕಂಡಿಕೆ-3ರ ಕೋಷ್ಠಕದ ಪ್ರಕಾರ 5 ವರ್ಷದ ಅವಧಿಗೆ 69.13 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ತೀರ್ಮಾನಿಸಲಾಗಿದೆ.