ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cauvery Aarti: ಸೆಪ್ಟೆಂಬರ್‌ 26ರಿಂದ ಗಂಗಾ ಆರತಿ ಮಾದರಿಯಲ್ಲಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮವು ಸೆ. 26ರಿಂದ ಐದು ದಿನಗಳ ಕಾಲ‌ ಮಂಡ್ಯದ ಕೆಆರ್‌ಎಸ್‌ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಮಂಡ್ಯ: ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ ಕಾವೇರಿ ಆರತಿ (Cauvery Aarti) ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರಿಂದ ಐದು ದಿನಗಳ ಕಾಲ‌ ಕೆಆರ್‌ಎಸ್‌ನ ಬೃಂದಾವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ನಿರೀಕ್ಷೆ ಇದೆ.

ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಲಾಡು ಮಾಡಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾವೇರಿ ಆರತಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.

ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್‌ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಲು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಲಾಡು ವಿತರಣೆ ವ್ಯವಸ್ಥೆ ಮಾಡಲಾಗಿದೆ.

ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ. ಸೆಪ್ಟೆಂಬರ್ 26ರಂದು ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.‌

ಈ ಸುದ್ದಿಯನ್ನೂ ಓದಿ | Cabinet Meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಪ್ರಮುಖ ನಿರ್ಣಯಗಳೇನು?