Male Mahadeshwara Hills: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆ
Male Mahadeshwara Hills: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸಲು ತೀರ್ಮಾನಿಸಲಾಗಿದೆ.


ಚಾಮರಾಜನಗರ: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮುಂದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸಲು ಸಭೆ ನಿರ್ಣಯಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಮಲೈ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.
ಹಿಂದಿನ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು. ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
ಈ ಸುದ್ದಿಯನ್ನೂ ಓದಿ | Cabinet meeting: ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ; 3647 ಕೋಟಿ ರೂ. ಕಾಮಗಾರಿಗಳಿಗೆ ಸಂಪುಟ ಒಪ್ಪಿಗೆ
ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ ಮಾಡಲಾಯಿತು.