ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor and social activist Chetan: ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು ಎಂದು ನಟ ಚೇತನ್ ಕರೆ

ಒಳ್ಳೆ ಕೆಲಸಗಳನ್ನು ಮಾಡಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಉತ್ತಮ ಸಮಾಜ ವನ್ನು ಕಟ್ಟಲು ಹೋರಾಟವೇ ಮುಖ್ಯ.  ಸಮ ಸಮಾಜ ನಿರ್ಮಾಣಕ್ಕೆ ಜನರ ಬೆಂಬಲ ಬೇಕು. ನಾವು ಬೆಳೆಯುವು ದಲ್ಲದೆ ನಮ್ಮೊಡನೆ ಜನರು ಬದಲಾಗಬೇಕು ಸಮ ಸಮಾಜ ನಿರ್ಮಾಣ ವಾಗಬೇಕೆಂದು ತಿಳಿಸಿದರು.

ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು

ರಾಷ್ಟ್ರಕವಿ ಕುವೆಂಪು ಅವರ ಸರ್ವರಿಗೂ ಸಮಬಾಳು, ಸಮಪಾಲು ಪರಿಕಲ್ಪನೆಯ ಸಮಾನತೆ ಮತ್ತು ನ್ಯಾಯದೊಂದಿಗೆ ಸಮಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕೆಂದು ನಟ ಸಾಮಾಜಿಕ ಹೋರಾಟಗಾರ ಚೇತನ್ ಹೇಳಿದರು. -

Ashok Nayak
Ashok Nayak Dec 16, 2025 12:10 AM

ಶಿಡ್ಲಘಟ್ಟ : ರಾಷ್ಟ್ರಕವಿ ಕುವೆಂಪು ಅವರ ಸರ್ವರಿಗೂ ಸಮಬಾಳು, ಸಮಪಾಲು ಪರಿಕಲ್ಪನೆಯ ಸಮಾನತೆ ಮತ್ತು ನ್ಯಾಯದೊಂದಿಗೆ ಸಮಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡ ಬೇಕೆಂದು ನಟ ಸಾಮಾಜಿಕ ಹೋರಾಟಗಾರ ಚೇತನ್ (Actor and social activist Chetan) ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಮಾನತೆಯ ಕರ್ನಾಟಕ ನಿರ್ಮಾಣ ಭವಿಷ್ಯದ ಕುರಿತು ಚರ್ಚಾ ಕಾರ್ಯಕ್ರಮದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿ ಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ದೇಶದಲ್ಲಿ ಭೀಮರಾವ್ ಅಂಬೇಡ್ಕರ್ ಚಿಂತನೆಯ ಸಮಸಮಾಜದ ನಿರ್ಮಾಣ ಆಗಬೇಕೆನ್ನುವ ದಿಶೆಯಲ್ಲಿ ನಾನು ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಹಮ್ಮಿ ಕೊಂಡಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು ಇದರ ಭಾಗವಾಗಿ ಶಿಡ್ಲಘಟ್ಟಕ್ಕೆ ಬಂದಿದ್ದೇನೆ ಎಂದರು.

ಪ್ರಸ್ತುತ ದೇಶದ ರಾಜಕೀಯ ಕಲುಷಿತಗೊಂಡಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲಾ ಪಣ ತೊಡಬೇಕಿದೆ ಸಮಾನತೆ ವಿಚಾರದಲ್ಲಿ ಆಗಿರೋ ಅನ್ಯಾಯ ಸರಿಪಡಿಸಿ ಮುಂದಿನ ಪೀಳಿಗೆಗೆ ಆಗದಂತೆ ಎಚ್ಚರವಹಿಸಬೇಕಿದೆ ಎಂದರು.

ಇದನ್ನೂ ಓದಿ: Shidlaghatta News: ರಥೋತ್ಸವದಂತಹ ಧಾರ್ಮಿಕ ಆಚರಣೆಗಳು ಗ್ರಾಮೀಣರಲ್ಲಿ ಒಗ್ಗಟ್ಟಿಗೆ ಕಾರಣವಾಗಲಿದೆ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡ

ಸAವಿಧಾನದ ಆದರ್ಶಗಳನ್ನು ಎತ್ತಿಹಿಡಿಯಬೇಕಾದರೆ ಬ್ರಾಹ್ಮಣ್ಯ ವ್ಯವಸ್ಥೆ, ಬಂಡವಾಳ ಶಾಹಿ ವ್ಯವಸ್ಥೆ ಹಾಗೂ ಆರ್ಥಿಕ ಅಸಮಾನತೆಗಳಿಗೆ ಕಡಿವಾಣ ಹಾಕಿ, ಸಮಾಜದ ಎಲ್ಲಾ ವರ್ಗಗಳಿಗೆ ಅವಕಾಶಗಳು ಮುಕ್ತವಾಗಿ ದೊರೆಯುವಂತೆ ಮಾಡಬೇಕಾಗಿದೆ ಎಂದು ಹೇಳಿದರು.

ಒಳ್ಳೆ ಕೆಲಸಗಳನ್ನು ಮಾಡಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಉತ್ತಮ ಸಮಾಜ ವನ್ನು ಕಟ್ಟಲು ಹೋರಾಟವೇ ಮುಖ್ಯ.  ಸಮ ಸಮಾಜ ನಿರ್ಮಾಣಕ್ಕೆ ಜನರ ಬೆಂಬಲ ಬೇಕು. ನಾವು ಬೆಳೆಯುವುದಲ್ಲದೆ ನಮ್ಮೊಡನೆ ಜನರು ಬದಲಾಗಬೇಕು ಸಮ ಸಮಾಜ ನಿರ್ಮಾಣ ವಾಗಬೇಕೆಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಧ್ಯಕ್ಷ ಬಾಬು,ಜಿಲ್ಲಾಧ್ಯಕ್ಷರಾದ ಕಾಚಹಳ್ಳಿ ಶ್ರೀನಿವಾಸ್.ಅಣ್ಣೆಪ್ಪ.ನರಸಿಂಹರೆಡ್ಡಿ.ಸುರೇಶ್, ರಾಮಾಂಜಿ,ವರದರಾಜ್.ರವಿ,ಮುನಿಯಪ್ಪ.ಸುರೇಶ್ ಭಗತ್,ವಕೀಲರಾದ ಅಜಯ್ ಕುಮಾರ್ ಬುಜ್ಜಿ ನಾಯಕ್, ಇನ್ನೂ ಮುಂತಾದವರು ಭಾಗಿಯಾಗಿದ್ದರು.