ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Sandalwood Actor Shivraj Kumar: ಸೀಕಲ್ ಗ್ರಾಮಕ್ಕೆ ನಟ ಶಿವಣ್ಣ ದಂಪತಿ ಭೇಟಿ

ಅಧಿಕ ಮಾಸದಲ್ಲಿ ಲೋಕ ಕಲ್ಯಾಣಕ್ಕಾಗಿ ಚಂಡಿಕಾ ಹೋಮ ಮತ್ತು ಶ್ರೀಸತ್ಯನಾರಾಯಣಸ್ವಾಮಿ ಪೂಜೆ ನೆರವೇರಿಸಲಾಗಿದೆ. ಸಕಾಲಕ್ಕೆ ಮಳೆ ಬೆಳೆ ಸಮಸ್ತ ಜನರು ಸುಖ ಶಾಂತಿ ನೆಮ್ಮದಿಯಿಂದ ಬಾಳಲಿ ಎಂದು ದೇವರನ್ನು ಮೊರೆ ಹೋಗಿದ್ದೇವೆ. ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇ ಗೌಡ( Chamundeshwari MLA GT Deve Gowda) ,ನಟ ಶಿವರಾಜ್ ಕುಮಾರ್ ದಂಪತಿ ಮತ್ತು ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ ಭಾಗವಹಿಸಿದ್ದಾರೆ

ಚಿಂತಾಮಣಿ: ತಾಲೂಕಿನ ಸೀಕಲ್ ಗ್ರಾಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ಸ್ವಗೃಹದಲ್ಲಿ ನಡೆದ ಚಂಡಿಕಾ ಹೋಮ ಮತ್ತು ಶ್ರೀಸತ್ಯನಾರಾಯಣಸ್ವಾಮಿ ಪೂಜಾ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(Sandalwood Actor Shivraj Kumar) ಮತ್ತು ಅವರ ಧರ್ಮಪತ್ನಿ ಗೀತಾ ಶಿವರಾಜ್ ಕುಮಾರ್ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: Shivarajkumar: ಶೀಘ್ರದಲ್ಲೇ ʻಜೈಲರ್‌ 2ʼ ಶೂಟಿಂಗ್‌ಗೆ ಶಿವಣ್ಣ ಹಾಜರ್; ಫ್ಯಾನ್ಸ್‌ಗೆ ಥ್ರಿಲ್ಲಿಂಗ್‌ ನ್ಯೂಸ್‌ ಕೊಟ್ಟ ʻಹ್ಯಾಟ್ರಿಕ್‌ ಹೀರೋʼ

ಈ ವೇಳೆ ಸೀಕಲ್ ರಾಮಚಂದ್ರ ಗೌಡ ಮಾತನಾಡಿ, ಅಧಿಕ ಮಾಸದಲ್ಲಿ ಲೋಕ ಕಲ್ಯಾಣಕ್ಕಾಗಿ ಚಂಡಿಕಾ ಹೋಮ ಮತ್ತು ಶ್ರೀಸತ್ಯನಾರಾಯಣಸ್ವಾಮಿ ಪೂಜೆ ನೆರವೇರಿಸಲಾಗಿದೆ. ಸಕಾಲಕ್ಕೆ ಮಳೆ ಬೆಳೆ ಸಮಸ್ತ ಜನರು ಸುಖ ಶಾಂತಿ ನೆಮ್ಮದಿಯಿಂದ ಬಾಳಲಿ ಎಂದು ದೇವರನ್ನು ಮೊರೆ ಹೋಗಿದ್ದೇವೆ. ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ( Chamundeshwari MLA GT Deve Gowda) ,ನಟ ಶಿವರಾಜ್ ಕುಮಾರ್ ದಂಪತಿ ಮತ್ತು ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

8cbpm2i

ನಟ ಶಿವರಾಜ್ ಕುಮಾರ್ ದಂಪತಿ ಆಗಮನದ ಸುದ್ದಿ ಕೇಳಿದ ಅಭಿಮಾನಿಗಳು ಸಾಕಷ್ಟು ಸಂಖ್ಯೆ ಯಲ್ಲಿ ನೆರೆದು ತಮ್ಮ ನೆಚ್ಚಿನ ನಟನನ್ನು ಕಂಡು ಪುಳಕಿತರಾದರು. ತಾವೊಬ್ಬ ಹಿರಿಯ ನಟ ರೆಂಬುದು ಇಲ್ಲದೆ ಎಲ್ಲರೊಂದಿಗೆ ಬೆರೆತು ನಡೆದುಕೊಂಡಿದ್ದು ಅವರ ಸಜ್ಜನಿಕೆಗೆ ಸಾಕ್ಷಿಯಾಗಿತ್ತು.

ಶಿವರಾಜ್ ಕುಮಾರ್ ದಂಪತಿಗಳು ಪೂಜೆ ನಂತರ ಔತಣಕೂಟದಲ್ಲಿ ಭಾಗವಹಿಸಿ ತದ ನಂತರ ತೆರಳಿದರು. ಬಿಜೆಪಿ ಮುಖಂಡರಾದ ಜಿ.ಎನ್.ವೇಣುಗೋಪಾಲ್ ಸೇರಿ ಎನ್‌ಡಿಎ ಮುಖಂಡರು ಇದ್ದರು.